ಕಾಗವಾಡ: ತಾಲೂಕು ಎಸ್ಎಸ್ಎಲ್ಸಿಯಲ್ಲಿ ಬೆಳಗಾವಿ ಜಿಲ್ಲೆಗೆ ದ್ವೀತಿಯ ಸ್ಥಾನ ಪಡೆದುಕೊಂಡಿದೆ ಎಂದು ಕಾಗವಾಡ ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡುರAಗ ಮದಭಾವಿ ತಿಳಿಸಿದ್ದಾರೆ.
ಅವರು ಗುರುವಾರ ದಿ. 23 ರಂದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡುತ್ತಿದ್ದರು. ಇತ್ತಿಚಿಗೆ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಗೆ ಒಟ್ಟು 2161 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿ, 2066 ವಿದ್ಯಾರ್ಥಿಗಳು ಪಾಸಾಗಿದ್ದು, 99 ವಿದ್ಯಾರ್ಥಿಗಳು ಮಾತ್ರ ಫೇಲ್ ಆಗಿದ್ದಾರೆ.
ಸಂತೋಶ ಸದಾಶಿವ ರತ್ನಪ್ಪಗೋಳ ಶೇ. 99.52% ಅಂಕಗಳೊAದಿಗೆ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ. ಉಳಿದಂತೆ ಯಶೋಧಾ ಸಂಭಾಜಿ ಮೋರೆ ಶೇ. 99.88% ಮತ್ತು ಐಶ್ವರ್ಯ ಪ್ರಕಾಶ ಉಮರಾಣಿ ಶೇ. 99.88% ತಾಲೂಕಿಗೆ ದ್ವೀತಿಯ ಹಾಗೂ ನಿಸರ್ಗಾ ಭರತೇಶ ಖಾನಾಪೂರೆ ಶೇ. 98.40% ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಎಂದು ತಿಳಿಸಿದ್ದಾರೆ.
ಈ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು, ತಾಲೂಕಿನ ಎಲ್ಲ ಪ್ರೌಢಶಾಲೆಗಳ ಮುಖ್ಯೋದ್ಯಾಪಕರು, ಶಿಕ್ಷಕರು ಉಪಸ್ಥಿತರಿದ್ದರು.