Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್​ ಸರ್ಕಾರದ ಆಡಳಿತದಲ್ಲೂ ರಾಜ್ಯ ಗುತ್ತಿಗೆದಾರರ ಬಾಕಿ ಬಿಲ್​ ಸಮಸ್ಯೆ; ₹31,000 ಕೋಟಿ ಬಿಲ್ ಬಾಕಿ

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ ಆಡಳಿತದಲ್ಲೂ ರಾಜ್ಯ ಗುತ್ತಿಗೆದಾರರ ಬಾಕಿ ಬಿಲ್​ ಸಮಸ್ಯೆ ಇನ್ನೂ ಹಾಗೆಯೇ ಮುಂದುವರೆದಿದೆ. ಸಾವಿರಾರು ಕೋಟಿ ರೂ. ಕಾಮಗಾರಿ ಬಿಲ್ ಬಾಕಿ ಉಳಿದುಕೊಂಡಿದ್ದು, ರಾಜ್ಯ ಗುತ್ತಿಗೆದಾರರು ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಎಲ್ಲಾ ಇಲಾಖೆಗಳಿಂದ ಸುಮಾರು 31,000 ಕೋಟಿ ರೂ. ಗುತ್ತಿಗೆ ಕಾಮಗಾರಿಗಳ ಬಿಲ್ ಬಾಕಿ ಉಳಿದುಕೊಂಡಿದೆ.


ಸಾವಿರಾರು ಕೋಟಿ ಕಾಮಗಾರಿಗಳ ಬಿಲ್ ಪಾವತಿಸಲು ಸರ್ಕಾರಕ್ಕೆ ಕಷ್ಟಸಾಧ್ಯವಾಗುತ್ತಿದೆ. ಗುತ್ತಿಗೆದಾರರ ಸಂಘವೂ ಬಿಲ್ ಪಾವತಿಗೆ ಇಲಾಖಾವಾರು ಅಧಿಕಾರಿಗಳು ಕಮಿಷನ್ ಕೇಳುತ್ತಿರುವ ಬಗ್ಗೆ ಹಲವು ಬಾರಿ ಆರೋಪ ಮಾಡಿದ್ದಾರೆ. ಇಲಾಖೆ ಸಚಿವರಿಗೆ ಬಿಲ್ ಪಾವತಿಗೆ ಮನವಿ ಸಲ್ಲಿಸಿದರೂ ನಿರೀಕ್ಷಿತ ಫಲ ನೀಡುತ್ತಿಲ್ಲ.


ಡಿಸಿಎಂಗೆ ಮನವಿ: ಬಿಜೆಪಿ ಅವಧಿಯಲ್ಲಿ ಸಾವಿರಾರು ಕೋಟಿ ಕಾಮಗಾರಿಗಳ ಬಿಲ್ ಬಾಕಿ ಉಳಿದುಕೊಂಡಿದೆ ಹಾಗೂ 40% ಕಮಿಷನ್ ಎಂಬ ಆರೋಪಗಳು ದೊಡ್ಡ ಸದ್ದು ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಈ ದೊಡ್ಡ ಪ್ರಮಾಣದ ಬಾಕಿ ಬಿಲ್ ಪಾವತಿಸಲು ಸಾಧ್ಯವಾಗುತ್ತಿಲ್ಲ. ಹಂತ, ಹಂತವಾಗಿ ಬಿಲ್ ಪಾವತಿ ಮಾಡುವುದಾಗಿ ಹೇಳುತ್ತಿದ್ದರೂ ಬಾಕಿ ಪ್ರಮಾಣ ಮಾತ್ರ ಏರುತ್ತಲೇ ಇದೆ ಎಂದು ಮತ್ತೊಮ್ಮೆ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

Advertisement

31,000 ಕೋಟಿ ರೂ. ಕಾಮಗಾರಿ ಬಿಲ್ ಬಾಕಿ: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಹೇಳುವಂತೆ ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಎಲ್ಲಾ ಇಲಾಖೆಗಳ ಕಾಮಗಾರಿಗಳ ಸಂಬಂಧ ಸುಮಾರು 31,000 ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಂಡಿದೆ. ಕಳೆದ ಮೂರು ನಾಲ್ಕು ವರ್ಷಗಳಿಂದ ಈ ಕಾಮಗಾರಿಗಳ ಹಣ ಬಾಕಿ ಇದೆ. ಅದರಲ್ಲೂ ಲೋಕೋಪಯೋಗಿ ಇಲಾಖೆ ಹಾಗೂ ಜಲಸಂಪನ್ಮೂಲ ಇಲಾಖೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಾಮಗಾರಿಗಳ ಬಿಲ್ ಬಾಕಿ ಆಗಿದೆ.


ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರಕ್ಕೆ ನೀಡಿದ ಬಾಕಿ ಬಿಲ್​ಗಳ ಅಂಕಿ-ಅಂಶದ ಪ್ರಕಾರ, ಜಲಸಂಪನ್ಮೂಲ ಇಲಾಖೆಯಲ್ಲಿ ಸುಮಾರು 12,000 ಕೋಟಿ ಬಾಕಿ ಬಿಲ್ ಉಳಿದಿದೆ. ಹಾಗೆಯೇ, ಲೋಕೋಪಯೋಗಿ ಇಲಾಖೆಯಲ್ಲಿ ಸುಮಾರು 8,700 ಕೋಟಿ ರೂ., ಬಿಬಿಎಂಪಿ ಗುತ್ತಿಗೆದಾರರಿಗೆ ಸುಮಾರು 3,500 ಕೋಟಿ ರೂ., ಸಣ್ಣ ನೀರಾವರಿ ಇಲಾಖೆಯಲ್ಲಿ ಸುಮಾರು 2,900 ಕೋಟಿ ರೂ. , ಕ್ರೆಡಿಲ್, ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಸುಮಾರು 3,500 ಕೋಟಿ ರೂ., ಕೊಳೆಗೇರಿ ಹಾಗೂ ವಸತಿ ಇಲಾಖೆಯಲ್ಲಿ ಸುಮಾರು 400 ಕೋಟಿ ರೂ. ಕಾಮಗಾರಿಗಳ ಬಿಲ್​ಗಳು ಬಾಕಿ ಉಳಿದುಕೊಂಡಿವೆ ಎಂದು ಗುತ್ತಿಗೆದಾರರ ಸಂಘ ತಿಳಿಸಿದೆ.


ಬಿಲ್ ಪಾವತಿಯಲ್ಲಿ ಜೇಷ್ಠತೆ ಪಾಲನೆ ಇಲ್ಲ: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಬಿಲ್ ಪಾವತಿಯಲ್ಲಿ ಜೇಷ್ಠತೆ ಪಾಲಿಸಲು ಒತ್ತಾಯಿಸಿದೆ.‌ ಹಲವು ಬಾರಿ ಮನವಿ ಮಾಡಿದ್ದರೂ ಬಿಲ್ ಪಾವತಿಯಲ್ಲಿ ಜೇಷ್ಠತೆ ಪಾಲಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ನಾಲ್ಕು ನೀರಾವರಿ ನಿಗಮಗಳಲ್ಲಿ ಸುಮಾರು 3 ವರ್ಷಗಳಿಂದ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಣ ಬಿಡುಗಡೆ ಇಲ್ಲದೆ ಸಮಸ್ಯೆಯಲ್ಲಿ ಸಿಲುಕಿದ್ದಾರೆ. ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರ 50 ಲಕ್ಷ ರೂ.ಗಳಿಂದ 3 ಕೋಟಿ ರೂ.ವರೆಗೂ ಇರುವ ಬಾಕಿ ಬಿಲ್​ಗಳನ್ನು ವಿಶೇಷವಾಗಿ ಪರಿಗಣಿಸಬೇಕೆಂದು ಸಂಘ ಮನವಿ ಮಾಡಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*