LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನ

ಇಂಡಿ: ರಾಜ್ಯದಲ್ಲಿ ಎಂ.ಆರ್.ಎನ್ ಗ್ರೂಪ್ ವತಿಯಿಂದ  ಬಯೋಪ್ಲಾಸ್ಟಿಕ್ ಕಾರ್ಖಾನೆ ಸ್ಥಾಪಿಸಲು ಯೋಜನೆ ರೂಪಿಸಲಾಗಿತ್ತು, ಆದರೆ ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಅನುಮತಿ ನೀಡಲಿಲ್ಲ. ಆದರೆ ಮಹಾರಾ? ಆಂಧ್ರಪ್ರದೇಶ ರಾಜ್ಯಗಳು ತಾವಾಗಿಯೇ ಮುಂದೆ ಬಂದು ನಮಗೆ ಅನುಮತಿ ನೀಡಿವೆ. ಅಲ್ಲಿ ಸುಮಾರು ೬,೦೦೦ ಕೋಟಿ ರೂ. ಹೂಡಿಕೆ ಮಾಡಿ ಬಯೋ ಪ್ಲಾಸ್ಟಿಕ್ ಕಾರ್ಖಾನೆಗಳು ಸ್ಥಾಪಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ನಗರದ ವಿಶಾಲ ಸೌಹಾರ್ದ ಪತ್ತಿನ ಸಹಕಾರ ಸಂಘದ ಕಾರ್ಯಾಲಯದಲ್ಲಿ  ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಅನ್ಯ ರಾಜ್ಯದವರಿಗೆ ನಮ್ಮ ಸರ್ಕಾರಗಳು ಮಣೆ ಹಾಕುತ್ತವೆ. ಆದರೆ ಸ್ಥಲಿಯ ಕನ್ನಡಿಗರಿಗೆ ಅವಕಾಶ ನೀಡಲು ನೀರಾಕರಿಸುವುದು ಸರಿಯಲ್ಲ. ಕೇವಲ ಮಾರ್ವಾಡಿಗಳಿಗೆ ಅವಕಾಶ ನೀಡುವುದು  ಎಷ್ಟು ಸಮಂಜಸ್ ಅವರಿಂದ ನಮ್ಮ ಜನರ ಸಹಾಯ ಹಸ್ತ ನೀಡಲು ಮುಂದೆ ಬರದೆ ಇರುವುದು ವಿಶಾದನಿಯ. ಇನ್ನೂ ಮುಂದೆಯಾದರು ಕನ್ನಡಿಗರಿಗೇ ಮೊದಲ ಆದ್ಯತೆ ಮತ್ತು ಅನುಕೂಲ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. 
ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆಗಳ ಲಾಭಕ್ಕಾಗಿ ಹೊಸ ದರ ನೀತಿಯನ್ನು ಪ್ರಸ್ತಾಪಿಸಿದ ನಿರಾಣಿ, ಸಾಮಾನ್ಯ ಜನರಿಗೆ ಒಂದು ದರ ಮತ್ತು ದೊಡ್ಡ ಕಂಪನಿಗಳಿಗೆ ಮತ್ತೊಂದು ದರ ನಿಗದಿ ಪಡಿಸಬೇಕು. ಸಾಮಾನ್ಯರಿಗೆ ಪ್ರತಿ ಕೆಜಿಗೆ ೪೦ ರೂ.ಹಾಗೂ ಶ್ರೀಮಂತ ಕಾರ್ಖಾನೆ/ಕಂಪನಿಗಳಿಗೆ ೬೦ ರೂ.ರಂತೆ ಸಕ್ಕರೆ ಖರೀದಿಗೆ ಸರ್ಕಾರ ಆದೇಶ ಹೊರಡಿಸಿದರೆ, ಕಬ್ಬು ಬೆಳೆಗಾರರಿಗೂ ಮತ್ತು ಸಕ್ಕರೆ ಉದ್ಯಮಕ್ಕೂ ಹೆಚ್ಚಿನ ಲಾಭ ತರಲು ಸಾಧ್ಯವಾಗುತ್ತದೆ. ಉದ್ಯಮ ರಂಗದಲ್ಲಿ ಸರ್ಕಾರಗಳು ರಾಜಕೀಯ ದ್ವೇ? ಸಾಧಿಸುವುದು ಸರಿಯಲ್ಲ ಉದ್ಯಮಗಳಿಗೆ ಬೆಂಬಲ ನೀಡಿದಾಗ ಮಾತ್ರ ರಾಜ್ಯದ ಅಭಿವೃದ್ದಿ ಸಾಧ್ಯ ಎಂದರು.
ತಮ್ಮ ಉದ್ಯಮದ ಯಶೋಗಾಥೆ ಹಂಚಿಕೊಂಡ ಅವರು, ಕೇವಲ ೧೦ ಲಕ್ಷ ರೂ. ಹೂಡಿಕೆಯೊಂದಿಗೆ ಪ್ರಾರಂಭವಾದ ಸಕ್ಕರೆ ಕಾರ್ಖಾನೆ, ಇಂದು ೨೫,೦೦೦ ಕೋಟಿ ರೂಪಾಯಿ ಬಂಡವಾಳದ ಬೃಹತ್ ಉದ್ಯಮವಾಗಿ ಬೆಳೆದಿದೆ. ಪ್ರಸ್ತುತ ನಮ್ಮ ಸಂಸ್ಥೆಯಲ್ಲಿ ೭೨,೦೦೦ಕ್ಕೂ ಹೆಚ್ಚು ಜನ ಉದ್ಯೋಗ ಮಾಡುತ್ತಿದ್ದಾರೆ. ಮುಂದಿನ ಎರಡು ವ?ಗಳಲ್ಲಿ ನಿರಾಣಿ ಗ್ರೂಪ್ ಒಟ್ಟು ಒಂದು ಲಕ್ಷ ಜನರಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಯುವಕರು ಕೈಗಾರಿಕೆಗಳ ಬಗ್ಗೆ ಜ್ಞಾನ ಬೆಳೆಸಿಕೊಳ್ಳಬೇಕು, ಪುಸ್ತಕಗಳನ್ನು ಓದಬೇಕು. ಸರ್ಕಾರದ ಸಹಾಯಧನ, ಸಾಲ ಸೌಲಭ್ಯಗಳ ಸದುಪಯೋಗ ಪಡಿಸಿಕೊಂಡು ಸ್ವಂತ ಉದ್ಯಮ ನಿರ್ಮಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್