Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಮಟ್ಟದ 79 ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಪೂರ್ಣ; ಮೊದಲ ಬಾರಿಗೆ ನಾಗರಿಕರಿಗೆ ಬಾರಿಗೆ 'ಇ-ಪಾಸ್' ವ್ಯವಸ್ಥೆ

ಬೆಂಗಳೂರು: ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ 79 ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ಇದೇ ಮೊದಲ ಬಾರಿಗೆ 'ಇ-ಪಾಸ್' ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಆಸಕ್ತರು ಸೇವಾಸಿಂಧು ವೆಬ್‌ಸೈಟ್ www.sevasindhu.karnataka.gov. in ಮೂಲಕ ಆಧಾರ್‌ಹಾಗೂ ಮೊಬೈಲ್ ಫೋನ್ ಸಂಖ್ಯೆಯನ್ನು ನಮೂದಿಸಿ ಒಟಿಪಿ ಮೂಲಕ ಇ-ಪಾಸ್ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.

ಇ-ಪಾಸ್‌ನೊಂದಿಗೆ ಮೂಲ ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು. ಬೆಳಗ್ಗೆ 8.15ರ ಒಳಗೆ ಗೇಟ್ ಸಂಖ್ಯೆ 4ರಿಂದ ಮಾತ್ರ ಮೈದಾನವನ್ನು ಪ್ರವೇಶಿಸಬೇಕು. ನಿಗದಿತ ಸಮಯದ ನಂತರ ಇ-ಪಾಸ್ ಅಮಾನ್ಯವಾಗುತ್ತದೆ.

ಇ-ಪಾಸ್‌ ವರ್ಗಾಯಿಸುವಂತಿಲ್ಲ. ಒಂದು ಇಪಾಸ್‌ಗೆ ಒಬ್ಬರಿಗೆ ಮಾತ್ರ ಪ್ರವೇಶ. ಕಾರ್ಯಕ್ರಮದ ಸಂದರ್ಭದಲ್ಲಿ ಇ-ಪಾಸ್‌ನ ಮುದ್ರಿತ ಪ್ರತಿ ಅಥವಾಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ-ಪಾಸ್ ಬೇಕಾಗುವುದಿಲ್ಲ.

3 ಸಾವಿರ ಇ-ಪಾಸ್‌ಗಳನ್ನು ಮೊದಲು ಬಂದವರಿಗೆ ಮೊದಲ ಆದ್ಯತೆ ಮೇಲೆ ವಿತರಿಸಲಾಗುತ್ತದೆ. ಇ ಪಾಸ್ ನವರಿಗೆ ಮೈದಾನದೊಳಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ. ಪೊಲೀಸ್ ಇಲಾಖೆಯ ನಿರ್ದೇಶನದಂತೆ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಲುಗಡೆ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*