LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎಲ್ ನಿನೋ ಪರಿಣಾಮ ಎದುರಿಸಲು ರಾಜ್ಯ ಸಜ್ಜಾಗಿದೆ: ಈಶ್ವರ ಖಂಡ್ರೆ

* ಜನರು ಹಿತಮಿತವಾಗಿ ನೀರು ಬಳಸಬೇಕು, ಸೋರಿಕೆ ತಡೆಯಬೇಕು- ಖಂಡ್ರೆ

* ಗ್ರಾಮೀಣ ಕುಡಿಯುವ ನೀರಿಗೆ 117 ಕೋಟಿ ರೂ. ಬಿಡುಗಡೆ: ಈಶ್ವರ ಖಂಡ್ರೆ

ಬೆಂಗಳೂರು, ಜು 2: ಎನ್ ನಿ ನೋ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಕೊರತೆ ಆಗಿದ್ದು, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಮುಂಗಡವಾಗಿ 117 ಕೋಟಿ ರೂ. ಬಿಡುಗಡೆ ಮಾಡಲಾಗಿದೆ, ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸುಮಾರು 85 ಕೋಟಿ ರೂಪಾಯಿಗಳಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. 30 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಗಳ ಒಳಗಾಗಿ ಪರಿಹರಿಸುವಂತೆ ಸೂಚಿಸಲಾಗಿದೆ. ಖಾಸಗಿ ತೆರೆದ ಬಾವಿ, ಬೋರ್ ವೆಲ್ ಗಳಿಂದ ನೀರುಪಡೆದು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ತೀರಾ ಅಗತ್ಯಬಿದ್ದ ಸಂದರ್ಭದಲ್ಲಿ ಮಾತ್ರ ಕೊಳವೆ ಬಾವಿ ಕೊರೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 2-3 ದಿನದಿಂದ ಮಳೆ ಆಗುತ್ತಿದ್ದು, ಕೆಲವು ಜಲಾಶಯಗಳಿಗೆ ನೀರು ಬರುತ್ತಿದೆ. ಈ ಸಂಕಷ್ಟದ ಸಮಯದಲ್ಲಿ ಜೀವಜಲವನ್ನು ಹಿತಮಿತವಾಗಿ ಜನರು ಬಳಸಬೇಕು. ಪೋಲು ಮಾಡಬಾರದು ಎಂದು ಮನವಿ ಮಾಡಿದ ಅವರು, ಪಂಚಾಯ್ತಿಗಳು ನೀರು ಸೋರಿಕೆ ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 *ಕಾರ್ಯಕ್ರಮದಲ್ಲಿ ಡಾ. ರಾಮಕೃಷ್ಣ ರೆಡ್ಡಿಯವರಿಗೆ ಗೌರವ, ಸನ್ಮಾನ,,* 15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆನಾಳೆ ಶ್ರೀ ದ್ಯಾಮವ್ವ, ದುರಗಮ್ಮ ದೇವಿಯರ ಅದ್ದೂರಿ ಮೇರವಣಿಗೆ: ರಾಜು ಖಾನಪ್ಪನವರಮಾಧ್ಯಮ ಮಿತ್ರರು ಕ್ರೀಡೆಯಲ್ಲಿ ಭಾಗವಹಿಸಿದ್ದು ಉತ್ತಮ ಬೆಳವಣಿಗೆಕೊಪ್ಪಳ ತಾ.ಪಂ. ಇಒ ಎತ್ತಂಗಡಿಗೆ ಆಗ್ರಹಿಸಿ ಆ. 31ಕ್ಕೆ ಬೃಹತ್ ಪ್ರತಿಭಟನೆಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳಸಪ್ಟೆಂಬರ್ 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ: ಜಿಲ್ಲೆಯಲ್ಲಿ 13,53,946 ಮತದಾರರ ಕರಡು ಪಟ್ಟಿ ಪ್ರಕಟ30ರಂದು  ಶ್ರೀ ಬಾಳುಮಾಮಾ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನಿತ್ಯ ನೇಮ ಉಪಾಷಣೆಯಿಂದ ನೆಮ್ಮದಿ ಜೀವನ.....ಪ್ರಭುಜಿ   ಮಹಾರಾಜ.ಮಳೆ ದೇವರು ಕೊಡುತ್ತಾನೆ, ಅದರ ಹಂಚಿಕೆ ಸರ್ಕಾರ ಮಾಡಬೇಕು  : ಮಹಾಂತೇಶ ದೊಡ್ಡಗೌಡರ