Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಿಯಾ ಘಟಕದಲ್ಲಿ ಬರೋಬ್ಬರಿ 900 ಕಾರು ಇಂಜಿನ್​ಗಳು ಕಳ್ಳತನ

ಪೆನುಗೊಂಡ (ಆಂಧ್ರ ಪ್ರದೇಶ): ಇಲ್ಲಿನ ಕಿಯಾ ಘಟಕದಲ್ಲಿ ಬರೋಬ್ಬರಿ 900 ಕಾರು ಇಂಜಿನ್​ಗಳು ಕಳ್ಳತನವಾಗಿರುವ ಪ್ರಕರಣ ಬಯಲಾಗಿದೆ. ಶ್ರೀ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡದಲ್ಲಿರುವ ಕಿಯಾ ಘಟಕದಲ್ಲಿ ನಡೆದಿರುವ ಈ ಬೃಹತ್​ ಕಳ್ಳತನ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಇದು ಗಂಭೀರ ಆತಂಕವನ್ನು ಸೃಷ್ಟಿಸಿದೆ.


ಆರಂಭದಲ್ಲಿ ಕಿಯಾ ಮಂಡಳಿ ಆತಂರಿಕವಾಗಿ ಈ ಕಳ್ಳತನ ಪ್ರಕರಣ ತನಿಖೆಗೆ ಮುಂದಾಯಿತು. ಆದರೆ, ಇದು ಬಗೆಹರಿಯದ ಹಿನ್ನೆಲೆ ಅವರು ಮಾರ್ಚ್​ 19ರಂದು ಪೊಲೀಸರ ಮೊರೆ ಹೋಗಿದ್ದಾರೆ. ಆದರೆ, ಅಧಿಕೃತ ದೂರಿನ ಬಳಿಕವೇ ಈ ಪ್ರಕರಣ ಕುರಿತು ತನಿಖೆ ಕೈಗೆತ್ತಿಕೊಳ್ಳಲು ಸಾಧ್ಯ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ ಬೆನ್ನಲ್ಲೇ ಕಿಯಾ ಪ್ರತಿನಿಧಿಗಳು ಅಧಿಕೃತ ದೂರು ಸಲ್ಲಿಸಿದ್ದಾರೆ. ಇದೀಗ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಇದಕ್ಕಾಗಿ ವಿಶೇಷ ತಂಡವನ್ನು ಜಿಲ್ಲಾಡಳಿತ ಪೊಲೀಸರು ರಚಿಸಿದ್ದು, ತನಿಖೆ ಸಾಗಿದೆ.


ವಿವಿಧ ಸ್ಥಳಗಳಿಂದ ಕಿಯಾದ ಬಿಡಿ ಭಾಗಗಳು ಬರುತ್ತವೆ. ಕಾರ್​ ಇಂಜಿನ್​ ತಮಿಳುನಾಡಿನಿಂದ ಬರುತ್ತದೆ ಎಂದು ಕಿಯಾ ಮೂಲಗಳು ತಿಳಿಸಿವೆ. ತಮಿಳುನಾಡಿನಿಂದ ಬರುವಾಗ ಕಾರಿನ ಇಂಜಿನ್​ಗಳು ನಾಪತ್ತೆಯಾಗಿವೆಯಾ ಅಥವಾ ಪೆನುಕೊಂಡಾಗೆ ಬಂದ ಬಳಿಕ ಇವು ಕಣ್ಮರೆಯಾಗಿವೆಯಾ ಎಂಬ ಎರಡು ದಿಕ್ಕಿನಲ್ಲಿ ತನಿಖೆ ಸಾಗಿದೆ. ಈ ತನಿಖೆ ಹೆಚ್ಚು ಸಂಕೀರ್ಣತೆಯಿಂದ ಕೂಡಿದ್ದು, ಶೀಘ್ರದಲ್ಲಿ ಈ ಕುರಿತು ಪೊಲೀಸರು ಮಾಧ್ಯಮಗೋಷ್ಟಿ ನಡೆಸಿ ವಿವರ ನೀಡುವ ಸಾಧ್ಯತೆ ಇದೆ. ಸದ್ಯ ಕಿಯಾ ಘಟಕದಲ್ಲಿ ನಡೆದಿರುವ ಇಷ್ಟು ದೊಡ್ಡ ಮಟ್ಟದ ಕಳ್ಳತನ ಪ್ರಕರಣ ಸಾಕಷ್ಟು ಅನುಮಾನ ಮತ್ತು ಅಚ್ಚರಿಗೆ ಕಾರಣವಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ