LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್



*ವಿಧಾನಸೌಧ (ವಿಧಾನಸಭೆ):* ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಬ್ಬಾಗುತ್ತಿದೆ, ಬಾಲ್ಯ ವಿವಾಹಗಳ ಸಂಖ್ಯೆ ಹೆಬ್ಬಾಗುತ್ತಿರುವುದರಿಂದ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಚಿವರು ಉತ್ತರಿಸಿದರು.


ಬಾಲ್ಯವಿವಾಹಗಳನ್ನು ತಡೆಗಟ್ಟಲು ಸರ್ಕಾರ ಈಗಾಗಲೇ ಕಾಯ್ದೆಯನ್ನು ಜಾರಿಗೆ ತಂದಿದೆ. ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿ (ಸಿಡಬ್ಲ್ಯುಸಿ) ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರಿನಲ್ಲಿ 4 ಕೇಂದ್ರಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ತಲಾ ಒಂದು ಸಿಡಬ್ಲ್ಯುಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.


ಬಾಲ್ಯ ವಿವಾಹ ತಡೆಗಟ್ಟುವ ಸಲುವಾಗಿ ಸೋಷಿಯಲ್ ಮೀಡಿಯಾಗಳಿಗೆ ಕಡಿವಾಣ ಹಾಕಬೇಕು, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಗೃಹ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಇಲಾಖೆಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಮಕ್ಕಳ ಸುರಕ್ಷತೆಗಾಗಿ ಮಕ್ಕಳ ಸಹಾಯವಾಣಿ 1098 ಸಂಖ್ಯೆಯೂ ದಿನ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಬಂದರೂ ತಕ್ಷಣ ಮಗುವನ್ನು ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.


ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ  ಕಾವಲು ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


** ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕಾ ಪಡೆ*

ಶಾಲಾ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕಾ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವರು ಉತ್ತರಿಸಿದರು.


ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಗಸ್ಟ್ 15 ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕಾ ಪಡೆ  ಆರಂಭಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್