Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಥಾರ್ಥಿಗಳು ಪ್ರಶ್ನೆ ಮಾಡುವುದನ್ನು ಕಲಿಯಿರಿ : ಹೊನ್ನೂರು ವಲಿ







ಬಳ್ಳಾರಿ,ಜ.21.: ನಗರದ ಸರಳಾದೇವಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಸ್ವಾಯತ್ತ) ಜ.೨೪ರಂದು ಬೆಂಗಳೂರಿನಲ್ಲಿ ಜನಪರ ಶಿಕ್ಷಣ ನೀತಿಗಾಗಿ ಒತ್ತಾಯಿಸಿ ನಡೆಯುತ್ತಿರುವ ಅಖಿಲ ಭಾರತ ಜನ ಸಂಸತ್ತು ಅಂಗವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಅರ್ಥಶಾಸ್ತçದ ವಿಭಾಗದ ಮುಖ್ಯಸ್ಥ ಹೊನ್ನೂರು ವಲಿ ಮಾತನಾಡುತ್ತಾ “ವಿದ್ಯಾರ್ಥಿಗಳು ಪ್ರಶ್ನೆ ಮಾಡುವುದನ್ನು ಕಲಿಯಬೇಕು. ಅಂಧವಾಗಿ ಯಾರನ್ನೂ ಅನುಕರಿಸಬಾರದು. ಶಿಕ್ಷಣ ನೀತಿ ರೂಪಿಸುವಾಗ ಶಿಕ್ಷಣಕ್ಕೆ ಸಂಬAಧಪಟ್ಟವರ ಅಭಿಪ್ರಾಯ ಪಡೆಯುವುದು ಅತ್ಯಾವಶ್ಯಕ” ಎಂದರು.

ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಸಂಚಾಲಕರಾದ ಸೋಮಶೇಖರ ಗೌಡ ಮಾತನಾಡುತ್ತಾ “ಕೇಂದ್ರ ಬಿಜೆಪಿ ಸರ್ಕಾರ ರಾಷ್ಟಿçÃಯ ಶಿಕ್ಷಣ ನೀತಿ ೨೦೨೦ (ಎನ್.ಇ.ಪಿ) ಜಾರಿಗೊಳಿಸಿದ ನಂತರ ದೇಶವ್ಯಾಪಿ ಈ ಶಿಕ್ಷಣ ವಿರೋಧಿ ನೀತಿಯ ವಿರುದ್ಧ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಲಾಯಿತು. ಮನವಿಗಳನ್ನು ಸಲ್ಲಿಸಲಾಯಿತು. ಇದಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ, ಎನ್.ಇ.ಪಿಗೆ ಪರ್ಯಾಯವಾಗಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಿ ಜಾರಿಗೆ ತಂದಿತು. ಆದರೆ ವಿಪರ್ಯಾಸವೆಂದರೆ, ರಾಜ್ಯ ಸರ್ಕಾರ ರಾಷ್ಟಿçÃಯ ಶಿಕ್ಷಣ ನೀತಿಯ ಭಾಗವಾದ, ಸರ್ಕಾರಿ ಶಾಲೆಗಳನ್ನು ಮುಚ್ಚುವ, ಕೆ.ಪಿ.ಎಸ್ ಮ್ಯಾಗ್ನೆಟ್ ಯೋಜನೆಯನ್ನು ಜಾರಿಗೆ ತಂದಿದೆ. ಇದು ಅತ್ಯಂತ  ನೋವಿನ ವಿಚಾರ. ಜನವರಿ ೨೪ರಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಜನ ಸಂಸತ್ತು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ” ಕರೆ ನೀಡಿದರು.

ಪ್ರಾಸ್ತಾವಿಕ ಪ್ರಾಧ್ಯಾಪಕ ಹುಚ್ಚುಸಾಬ್ ಮಾತನಾಡುತ್ತಾ, ಅಖಿಲ ಭಾರತ ಶಿಕ್ಷಣ ಸಮಿತಿಯು ಜನತೆಯ ಸಂಸತ್ತು ಸಂಘಟಿಸಿ, ಶಿಕ್ಷಣದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರಕ್ಕೆ ಪರ್ಯಾಯ ಶಿಕ್ಷಣದ ನೀತಿಯ ಕರಡನ್ನು ಸಲ್ಲಿಸುತ್ತಿರುವ ಅತ್ಯಂತ ಸಮಂಜಸ ಹಾಗೂ ಶ್ಲಾಘನೀಯ ಕ್ರಮ” ಎಂದರು.

ಉಪನ್ಯಾಸಕ ದುರ್ಗಪ್ಪ ಮಾತನಾಡುತ್ತಾ, “ಸರ್ಕಾರಿ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ ಬದಲಿಗೆ ದೊಡ್ಡ ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಇರುವುದು ಶಿಕ್ಷಣದ ಪರಿಸ್ಥಿತಿಯನ್ನು ಸೂಚಿಸುತ್ತದೆ” ಎಂದರು.

ಈ ಸಂದರ್ಭದಲ್ಲಿ ಬೋಧಕ ಮತ್ತು ಬೋಧಕೇತರರ ಸಿಬ್ಬಂದಿ ಮತ್ತಿತರರು ಇದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ