Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಥಾರ್ಥಿಗಳು ಪ್ರಶ್ನೆ ಮಾಡುವುದನ್ನು ಕಲಿಯಿರಿ : ಹೊನ್ನೂರು ವಲಿ







ಬಳ್ಳಾರಿ,ಜ.21.: ನಗರದ ಸರಳಾದೇವಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಸ್ವಾಯತ್ತ) ಜ.೨೪ರಂದು ಬೆಂಗಳೂರಿನಲ್ಲಿ ಜನಪರ ಶಿಕ್ಷಣ ನೀತಿಗಾಗಿ ಒತ್ತಾಯಿಸಿ ನಡೆಯುತ್ತಿರುವ ಅಖಿಲ ಭಾರತ ಜನ ಸಂಸತ್ತು ಅಂಗವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಅರ್ಥಶಾಸ್ತçದ ವಿಭಾಗದ ಮುಖ್ಯಸ್ಥ ಹೊನ್ನೂರು ವಲಿ ಮಾತನಾಡುತ್ತಾ “ವಿದ್ಯಾರ್ಥಿಗಳು ಪ್ರಶ್ನೆ ಮಾಡುವುದನ್ನು ಕಲಿಯಬೇಕು. ಅಂಧವಾಗಿ ಯಾರನ್ನೂ ಅನುಕರಿಸಬಾರದು. ಶಿಕ್ಷಣ ನೀತಿ ರೂಪಿಸುವಾಗ ಶಿಕ್ಷಣಕ್ಕೆ ಸಂಬAಧಪಟ್ಟವರ ಅಭಿಪ್ರಾಯ ಪಡೆಯುವುದು ಅತ್ಯಾವಶ್ಯಕ” ಎಂದರು.

ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ಸಂಚಾಲಕರಾದ ಸೋಮಶೇಖರ ಗೌಡ ಮಾತನಾಡುತ್ತಾ “ಕೇಂದ್ರ ಬಿಜೆಪಿ ಸರ್ಕಾರ ರಾಷ್ಟಿçÃಯ ಶಿಕ್ಷಣ ನೀತಿ ೨೦೨೦ (ಎನ್.ಇ.ಪಿ) ಜಾರಿಗೊಳಿಸಿದ ನಂತರ ದೇಶವ್ಯಾಪಿ ಈ ಶಿಕ್ಷಣ ವಿರೋಧಿ ನೀತಿಯ ವಿರುದ್ಧ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಲಾಯಿತು. ಮನವಿಗಳನ್ನು ಸಲ್ಲಿಸಲಾಯಿತು. ಇದಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ, ಎನ್.ಇ.ಪಿಗೆ ಪರ್ಯಾಯವಾಗಿ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಿ ಜಾರಿಗೆ ತಂದಿತು. ಆದರೆ ವಿಪರ್ಯಾಸವೆಂದರೆ, ರಾಜ್ಯ ಸರ್ಕಾರ ರಾಷ್ಟಿçÃಯ ಶಿಕ್ಷಣ ನೀತಿಯ ಭಾಗವಾದ, ಸರ್ಕಾರಿ ಶಾಲೆಗಳನ್ನು ಮುಚ್ಚುವ, ಕೆ.ಪಿ.ಎಸ್ ಮ್ಯಾಗ್ನೆಟ್ ಯೋಜನೆಯನ್ನು ಜಾರಿಗೆ ತಂದಿದೆ. ಇದು ಅತ್ಯಂತ  ನೋವಿನ ವಿಚಾರ. ಜನವರಿ ೨೪ರಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಜನ ಸಂಸತ್ತು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ” ಕರೆ ನೀಡಿದರು.

ಪ್ರಾಸ್ತಾವಿಕ ಪ್ರಾಧ್ಯಾಪಕ ಹುಚ್ಚುಸಾಬ್ ಮಾತನಾಡುತ್ತಾ, ಅಖಿಲ ಭಾರತ ಶಿಕ್ಷಣ ಸಮಿತಿಯು ಜನತೆಯ ಸಂಸತ್ತು ಸಂಘಟಿಸಿ, ಶಿಕ್ಷಣದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸರ್ಕಾರಕ್ಕೆ ಪರ್ಯಾಯ ಶಿಕ್ಷಣದ ನೀತಿಯ ಕರಡನ್ನು ಸಲ್ಲಿಸುತ್ತಿರುವ ಅತ್ಯಂತ ಸಮಂಜಸ ಹಾಗೂ ಶ್ಲಾಘನೀಯ ಕ್ರಮ” ಎಂದರು.

ಉಪನ್ಯಾಸಕ ದುರ್ಗಪ್ಪ ಮಾತನಾಡುತ್ತಾ, “ಸರ್ಕಾರಿ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ ಬದಲಿಗೆ ದೊಡ್ಡ ಸಂಖ್ಯೆಯಲ್ಲಿ ಅತಿಥಿ ಉಪನ್ಯಾಸಕರು ಇರುವುದು ಶಿಕ್ಷಣದ ಪರಿಸ್ಥಿತಿಯನ್ನು ಸೂಚಿಸುತ್ತದೆ” ಎಂದರು.

ಈ ಸಂದರ್ಭದಲ್ಲಿ ಬೋಧಕ ಮತ್ತು ಬೋಧಕೇತರರ ಸಿಬ್ಬಂದಿ ಮತ್ತಿತರರು ಇದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ