Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳು ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ





ಬಳ್ಳಾರಿ,ಮಾ.೦4.: ಮಕ್ಕಳು ಪ್ರಾಪಂಚಿಕ ಜ್ಞಾನವನ್ನು ಹೆಚ್ಚಿಸಿಕೊಳ್ಳುವಲ್ಲಿ ಪತ್ರಿಕೆಗಳು ಮಹತ್ವದ ಪಾತ್ರವನ್ನುವಹಿಸುತ್ತವೆ. ಪ್ರಪಂಚ ಇಂದು ಯುದ್ಧದ ಭೀತಿಯಲ್ಲಿದೆ. ಅದನ್ನು ಎದುರಿಸುವಂತಹ ಧೀರ ನಿರ್ಧಾರ ತೆಗೆದುಕೊಳ್ಳುವಲ್ಲಿ ಪರಸ್ಪರ ಹೋರಾಟಕ್ಕಿಳಿದಿವೆ. ಯಾವ ಯಾವ ಕಾಲಕ್ಕೆ ಪ್ರಾಪಂಚಿಕ ಘಟನಾವಳಿಗಳು ಸಂಭವಿಸಿವೆ. ಅವುಗಳ ಮಹತ್ವ ಸಂಗತಿಗಳು ಪತ್ರಿಕೆಗಳಲ್ಲಿ ಪ್ರಕಟಗೊಂಡಿರುತ್ತವೆ. ಅವುಗಳಲ್ಲಿ ಸಣ್ಣ ಪುಸ್ತಕಗಳಲ್ಲಿ ನೆನಪಿನ ಬುತ್ತಿಗಳಲ್ಲಿ ದಾಖಲಿಸುತ್ತಾ ಹೋದಲ್ಲಿ ನಿಮ್ಮಜ್ಞಾನ ಹೆಚ್ಚುವುದಲ್ಲದೇ ಜೀವನಕ್ಕೂ ಅವು ಉಪಯೋಗಕ್ಕೆ ಬರಲಿವೆ. ಪ್ರಶ್ನಿಸದೇ ಯಾವುದನ್ನೂ ಒಪ್ಪಿಕೊಳ್ಳ ಬೇಡಿ ಎಂದು ಬಳ್ಳಾರಿ ಜಿಲ್ಲಾ ಪತ್ರಿಕಾ ವರದಿಗಾರರ ಸಂಘದ ಅಧ್ಯಕ್ಷರಾದ ಎನ್.ವೀರಭದ್ರಗೌಡ ನುಡಿದರು.


ನಗರದ ಕಂಟೋನ್ಮೆAಟ್ ನಲ್ಲಿನ ಶ್ರೀ ನಂದ ವಸತಿ ಶಾಲೆ ಮತ್ತು ಕಾಲೇಜ್ ನಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ನಮ್ಮ ವಿಜ್ಞಾನಿ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿ ಗವಿಸಿದ್ಧರವರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಏಷ್ಯಾ ಬುಕ್ ಆಫ್ ವರ್ಲ್ಡ್ ಪ್ರಶಸ್ತಿ ಮತ್ತು ಇಂಡಿಯಾ ಬುಕ್ ಆಫ್ ಅವಾರ್ಡ್ ಹಾಗೂ ಚಿನ್ನದ ಪದಕವನ್ನು ನೀಡಿ ಗೌರವಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.


ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಜಿಲ್ಲಾಧ್ಯಕ್ಷ ಆರ್.ಎಚ್.ಎಂ.ಚನ್ನಬಸವಸ್ವಾಮಿ ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆಗಳು ಮೂಡಬೇಕು. ಪಂಚಾAಗದ ಮೇಲಿನ ನಂಬಿಕೆಗಿAತ ಪಂಚ ಅಂಗಗಳ ಮೇಲೆ ನಂಬಿಕೆ ಇರಿಸಿ ಎಂದರಲ್ಲದೇ ಮೂಢನಂಬಿಕೆಗಳ ಬೆನ್ನು ಹತ್ತದೇ ದ ಮೂಲ ನಂಬಿಕೆಯ ಮೇಲೆ ವಿಶ್ವಾಸ ಇರಿಸಿ ಎಂದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಯು.ರಮೇಶ್ ಮಾತನಾಡಿ, ವೈಜ್ಞಾನಿಕ ಚಿಂತನೆಯ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೂ ಶಿಕ್ಷಕರಿಗೂ ಬೋಧಿಸಿದರು.

ಶ್ರೀನಂದಾ ವಸತಿ ಶಾಲೆ ಕಾಲೇಜಿನ ಮುಖ್ಯಸ್ಥ ವಿ.ಗಾಂಧಿ ಮಾತನಾಡಿ, ವಿಶ್ವದ ಯುದ್ಧದ ಪರಿಸ್ಥಿತಿ ನಮ್ಮೆಲ್ಲರನ್ನು ತಲ್ಲಣಗೊಳಿಸುತ್ತಿದೆ. ಶಾಂತಿ ನೆಮ್ಮದಿ ಸ್ನೇಹ ಭಾ ತೃತ್ವದ ತಳಹದಿಯಲ್ಲಿನ ಭಾರತವೂ ಕೂಡ ಎಚ್ಚರದ ಹೆಜ್ಜೆಗಳನ್ನಿರಿಸುತ್ತಿದೆ.  ವಿಶ್ವದಆಗುಹೋಗುಗಳು, ಯುದ್ಧ ಸನ್ನಿವೇಶಗಳ ಕುರಿತಾಗಿ ನಾರ್ಥ ಡೋಮಶ್ ಭವಿಷ್ಯ ನಿಜವಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕರಾ.ವೈ,ಸಂಶೋ, ಪರಿಷತ್ತನ ಉಪಾಧ್ಯಕ್ಷರು ಹಾಗೂ ವೀರಶೈವ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯರಾದ ಶಿವಾರೆಡ್ಡಿ ಹಾಗೂ ವೀರಶೈವ ತರುಣ ಸಂಘದ ಅಧ್ಯಕ್ಷರಾದ ನಂದೀಶಮಠ ಉಪಸ್ತಿತರಿದ್ದರು. ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕಿ ಹೆಚ್. ಜೆ. ಸರಿತಾ ನಿರ್ವಹಿಸಿದರು. ನಂತರದಲ್ಲಿ ಜ್ಞಾನಾಮೃತ ಪ್ರೌಢಶಾಲೆಯ  ವಿದ್ಯಾರ್ಥಿ ಮೊಹಮ್ಮದ್ ಸಾಹಿಲ್ ಇವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ