Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರದ ಧ್ವಂದ ನೀತಿ ಖಂಡಿಸಿ  ಬಿಜೆಪಿಯಿಂದ ಬೃಹತ್ ಪ್ರತಿಭಟನೆ - ಸುಭಾಷ್ ಪಾಟೀಲ





ಬೆಳಗಾವಿ.ಏಪ್ರಿಲ್ 22, 2025ರಂದು ಜಮ್ಮುಕಾಶ್ಮೀರದಲ್ಲಿ ಪಾಕಿಸ್ತಾನದ ನೆರವಿನಿಂದ 26 ಜನ ಅಮಾಯಕ ಭಾರತೀಯ ಪ್ರಜೆಗಳನ್ನು ಉಗ್ರರುಧರ್ಮವನ್ನು ಕೇಳಿ ತಿಳಿದು ಗುಂಡಿಕ್ಕಿ ಕೊಂದಿರುವುದನ್ನು ನೋಡಿ ಇಡೀ ದೇಶ ದಿಗ್ಧಾಂತವಾಗಿದೆ.ಈ ಅತ್ಯಂತ ದಾರುಣವಾದಂತಹ ದಾಳಿಯನ್ನು ಪಾಕಿಸ್ತಾನದಬೇಹುಗಾರಿಕಾ ಸಂಸ್ಥೆಯಾದ ಐ.ಎಸ್.ಐ. ನೆರವಿನಿಂದ ಪಾಕಿಸ್ತಾನ ಸೇನೆ ಇಡೀ ದಾಳಿಯಯೋಜನೆಯನ್ನು ರೂಪಿಸಿ ಇಂತಹ ಬರ್ಬರ ಹತ್ಯಾಕಾಂಡವನ್ನು ಅರಗಿಸಿಕೊಳ್ಳಲಾಗದೆ ಇಡೀದೇಶ ಅತ್ಯಂತ ದೊಡ್ಡ ಆಘಾತಕ್ಕೊಳಗಾಗಿದೆ ಹಾಗೂ ಜಗತ್ತಿನ ಎಲ್ಲಾ ದೊಡ್ಡ ಶಕ್ತಿಶಾಲಿ ರಾಷ್ಟ್ರಗಳು

ಭಾರತದ ಜೊತೆ ನಿಲ್ಲುವುದಾಗಿ ಘೋಷಿಸಿವೆ.


ಸನ್ಮಾನ್ಯ ಪ್ರಧಾನ ಮಂತ್ರಿಗಳಾದ  ನರೇಂದ್ರ ಮೋದಿಯವರು ಈ ಕುಕೃತ್ಯಕ್ಕೆಕಾರಣರಾದವರು ಯಾರೇ ಆಗಿರಲಿ ಜಗತ್ತಿನ ಯಾವುದೇ ಮೂಲೆಯಲ್ಲಿ ಅಡಗಿ ಕುಳಿತಿದ್ದರೂಅವರನ್ನು ಹಾಗೂ ಅವರಿಗೆ ಪ್ರೇರಣೆ ನೀಡಿದವರ ರುಂಡವನ್ನು ಚೆಂಡಾಡುವುದಾಗಿ ಪ್ರತಿಜ್ಞೆಮಾಡಿದ್ದಾರೆ. ಪ್ರಧಾನಿಗಳು ಭಾರತೀಯ ಸೇನಾ ಪಡೆಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲುಮುಕ್ತ ಅನುಮತಿ ನೀಡಿದ್ದಾರೆ. ನಮ್ಮೆಲ್ಲರಿಗೂ ತಿಳಿದೇ ಇದೆ. ನಮ್ಮ ಸೇನಾ ಪಡೆಗಳು ಉಗ್ರರನ್ನುನಾಶ ಮಾಡೇ ತೀರುತ್ತವೆ ಎಂಬ ದೃಢ ವಿಶ್ವಾಸವಿದೆ.ದೇಶದ ಇಡೀ 140 ಕೋಟಿ ಜನರು ಸನ್ಮಾನ್ಯ  ಪ್ರಧಾನ ಮಂತ್ರಿಗಳು ಹಾಗೂ ಸೇನಾ

ಪಡೆಗಳ ಜೊತೆಗೆ ತೊಡೆತಟ್ಟಿ ನಿಂತಿದ್ದಾರೆ.


ಈ ದುರ್ಘಟನೆಯ ನಂತರದಲ್ಲಿ ಕೇಂದ್ರ ಸರ್ಕಾರವು ಸಿಂಧೂ ನದಿ ನೀರಿನ ಒಪ್ಪಂದಕ್ಕೆಇತಿಶ್ರೀ ಹಾಡಿ ಐತಿಹಾಸಿಕ ನಿರ್ಣಯ ತೆಗೆದುಕೊಂಡಿರುವುದು ಮಾತ್ರವಲ್ಲದೇಪಾಕಿಸ್ತಾನದೊಂದಿಗಿನ ಎಲ್ಲಾ ರಾಜತಾಂತ್ರಿಕ ಸಂಬಂಧಗಳನ್ನು ಕಡಿತಗೊಳಿಸಿ ಹಾಗೂ ಪಾಕಿಸ್ತಾನಿಪ್ರಜೆಗಳಿಗೆ ಭಾರತಕ್ಕೆ ಬರುವ ವೀಸಾ ನಿಲ್ಲಿಸಿದೆ ಹಾಗೂ ನಿಯಮಿತ ಸಮಯದಲ್ಲಿ ಭಾರತರಲ್ಲಿರುವಎಲ್ಲಾ ಪಾಕಿಸ್ತಾನಿ ಪ್ರಜೆಗಳು ಹಿಂತಿರುಗುವಂತೆ ಕಟ್ಟಾಜ್ಞೆ ಹೊರಡಿಸಿದೆ.


ಗೃಹ ಸಚಿವಾಲಯದ ಆಜ್ಞಾ ಪತ್ರ ಸಂಖ್ಯೆ 25022/28/2025/F.I ,25/04/25 ರ ಅನ್ವಯ ಹಾಗೂ ಸೆಕ್ಷನ್ 3(1) 1946 ವಿದೇಶಿಗರ ಕಾಯ್ದೆಗೆ ವಿಶೇಷ ಅಧಿಕಾರ ನೀಡಿ(ದೀರ್ಘಾವದಿ ಹಾಗೂ ರಾಜತಾಂತ್ರಿಕ ಮತ್ತು ಅಧೀಕೃತ ವೀಸಾಗಳನ್ನು ಹೊರತುಪಡಿಸಿ)ಪಾಕಿಸ್ತಾನಿ ಪ್ರಜೆಗಳಿಗೆ ಭಾರತದ ವೀಸಾ ವಿತರಣೆಯನ್ನು ಅಮಾನತ್ತಿನಲ್ಲಿಡಲಾಗಿದೆ.


ಈ ನಿಟ್ಟಿನಲ್ಲಿ  (ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ) ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳು92  ಬೆಳಗಾವಿ ಜಿಲ್ಲೆಯಲ್ಲಿರುವ 9 ಜನಅಕ್ರಮವಾಗಿ ನೆಲೆಸುತ್ತಿರುವ ಪಾಕಿಸ್ತಾನಿ ಪ್ರಜೆಗಳು ರದ್ದಾಗಿರುವ

ವೀಸಾಗಳು ಹಾಗೂ ಅಮಾನತ್ತಿನಲ್ಲಿರುವ ವೀಸಾಗಳನ್ನು ಹೊಂದಿಕೊಂಡು ವಾಸಿಸುತ್ತಿರುವಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಗಡಿಪಾರು ಮಾಡಲು ರಾಷ್ಟ್ರೀಯ ನಿರ್ದೇಶನವಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನೂ ಸೂಕ್ತ ಕ್ರಮ ಕೈಗೊಳ್ಳದಿರುವುದು ದುರಾದೃಷ್ಟಕರ ಎಂದು  ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಹಾಗೂ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ ಅವರು ಆಕ್ರೋಶ ವ್ಯಕ್ತಪಡಿಸಿದರು ಇದೇ 6-5-2025 ಮಂಗಳವಾರ ಬೆಳಿಗ್ಗೆ 10:00am ಗಂಟೆಗೆ ನಗರದ ರಾಣಿ ಚೆನ್ನಮ್ಮ ಸರ್ಕಲ್ ಹತ್ತಿರ ರಾಜ್ಯ  ಕಾಂಗ್ರೆಸ್ ಸರ್ಕಾರದ ಧ್ವಂದ ನೀತಿ ಖಂಡಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು  ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ