Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷ್ಕೃತ ವೇತನ ಜಾರಿಗಾಗಿ  ಎಐಯುಟಿಯುಸಿಯಿಂದ ಮನವಿ ಪತ್ರ ಸಲ್ಲಿಕೆ.

ಬಳ್ಳಾರಿ, ಜೂ.04: ಎಐಯುಟಿಯುಸಿ ನೇತೃತ್ವದಲ್ಲಿ ವಸತಿ ನಿಲಯಗಳ ಕಾರ್ಮಿಕರು, ಬಳ್ಳಾರಿ ವೖದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಕೇಂದ್ರದ ಕಾರ್ಮಿಕರಿಂದ, ವೇತನ ಹೆಚ್ಚಳ ಪರಿಷ್ಕರಣೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ, ಸಂಬಂಧಪಟ್ಟ ಸಮಾಜ ಕಲ್ಯಾಣ , ಪರಿಶಿಷ್ಟ ವರ್ಗ , ಹಿಂದುಳಿದ  ವರ್ಗ, ಅಲ್ಪಸಂಖ್ಯಾತ ಇಲಾಖೆಗಳ ಜಿಲ್ಲಾ ಅಧಿಕಾರಿಗಳು ಹಾಗೂ ಬಿ.ಎಂ.ಸಿ.ಆರ್. ಸಿ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಎಲ್ಲಾ ಅಧಿಕಾರಿಗಳು ಪರಿಷ್ಕೃತ ವೇತನ ಜಾರಿಗೊಳಿಸಲು ಕೂಡಲೆ ಸೂಕ್ತ ಕ್ರಮ ಕೖಗೊಳ್ಳುವುದಾಗಿ  ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ  ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷರಾದ ಎ. ದೇವದಾಸ್ ಮಾತನಾಡುತ್ತಾ  "ತೀವ್ರ ಸಂಕಷ್ಟದಲ್ಲಿರುವ ಕಾರ್ಮಿಕ ವರ್ಗಕ್ಕೆ ವೇತನ ಹೆಚ್ಚಿಸುವಂತೆ ಎಐಯುಟಿಯುಸಿ ಅನೇಕ ಬಾರಿ ಸ್ವತಂತ್ರವಾಗಿ ಹಾಗೂ ಇತರ ಕಾರ್ಮಿಕ ಸಂಘಗಳೊಂದಿಗೆ ಸೇರಿ ಜಂಟಿ ಹೋರಾಟ ಹಾಗೂ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಬೃಹತ್ ಹೋರಾಟ ನಡೆಸಿದೆ.ಇಂದಿನ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚಕ್ಕೆ ಅನುಗುಣವಾಗಿ ಕಾರ್ಮಿಕರಿಗೆ ಕನಿಷ್ಠ 36,000 ವೇತನ ನಿಗದಿಪಡಿಸಬೇಕೆಂದು ಕಾರ್ಮಿಕ ಸಂಘಟನೆಗಳು ನಿರಂತರವಾಗಿ ಒತ್ತಾಯಿಸುತ್ತಾ ಬಂದಿದ್ದವು. ಆದರೆ ಮಾಲೀಕ ವರ್ಗವು ಇದಕ್ಕೆ ತೀವ್ರ ಅಡ್ಡಿಪಡಿಸುತ್ತಲೆ ಇತ್ತು. ಮಾಲೀಕ ವರ್ಗದ ಒತ್ತಡಕ್ಕೆ ಮಣಿದಿದ್ದ ಸರ್ಕಾರವು ಆದೇಶ ಜಾರಿ ಮಾಡಲು ಮೀನಾಮೇಷ ಎಣಿಸುತ್ತಿತ್ತು. ಇದನ್ನು ಪ್ರತಿಭಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ಇದೇ ಮೇ 27 ರಂದು ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟಕ್ಕೆ ಕರೆ ನೀಡಿತ್ತು. ಹೋರಾಟದ ತೀವ್ರತೆಯನ್ನು ಅರಿತ ಸರ್ಕಾರವು ಕೊನೆಗೂ ಮಣಿದು, ಈ ಆದೇಶವನ್ನು ಹೊರಡಿಸಿದೆ ಎಂದರು.ಇದು ಕಾರ್ಮಿಕರ ಹೋರಾಟದ ಶಕ್ತಿಗೆ ಸಿಕ್ಕ ಪ್ರತಿಫಲವಾಗಿದೆ". ಎಂದರು
ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಡಾ. ಪ್ರಮೋದ್ ಮಾತನಾಡುತ್ತಾ "ಸರ್ಕಾರದ ಈ ಆದೇಶ ಕೇವಲ ಕಾಗದದ ಮೇಲಿದ್ದರೆ ಸಾಲದು. ಎಲ್ಲಾ  ಸರ್ಕಾರಿ  ಇಲಾಖೆಗಳಲ್ಲಿ,  ಅನುಸೂಚಿತ ಉದ್ಯಮಗಳ ಮಾಲೀಕರು ಈ  ಪರಿಷ್ಕೃತ ಕನಿಷ್ಠ ವೇತನವನ್ನು  ವಿಳಂಬಗೊಳಿಸದೆ ತಕ್ಷಣದಿಂದಲೇ ಜಾರಿಗೊಳಿಸಬೇಕು. ಯಾವುದೇ ಕಾರಣಕ್ಕೂ ಮಾಲೀಕ ವರ್ಗದ  ಒತ್ತಡಕ್ಕೆ ಮಣಿಯದೆ, ಈ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಮಾಡಲು ಕಾರ್ಮಿಕರು ಸದಾ ಜಾಗರೂಕರಾಗಿರಬೇಕು ಮತ್ತು ಒಗ್ಗಟ್ಟಿನಿಂದ ನಿಲ್ಲಬೇಕು." ಎಂದು ಕರೆ ನೀಡಿದರು.
ನಿಯೋಗದಲ್ಲಿ ಎಐಯುಟಿಯುಸಿ ಜಿಲ್ಲಾ ಉಪಾಧ್ಯಕ್ಷರಾದ ಶಾಂತ, ಜಂಟಿ ಕಾರ್ಯದರ್ಶಿ ಸುರೇಶ್. ಜಿ, ಮುಖಂಡರಾದ ಕಿರಣ್ ಕುಮಾರ್, ಚೇತನ್, ಮುರಳಿ ಕೃಷ್ಣ, ಹುಲಗಪ್ಪ, ಚಿಟ್ಟಮ್ಮ, ಪಾರ್ವತಿ, ಲಕ್ಷ್ಮಿ ದೇವಿ, ಮುಂತಾದವರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ