Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಗರಿಕ ಸೌಲಭ್ಯಕ್ಕಾಗಿ ಸಂಗ್ರಹಿಸಿದ ಸಹಿಗಳ ಪತ್ರ ಡಿಸಿಗೆ ಸಲ್ಲಿಕೆ 

ಬಳ್ಳಾರಿ.ಜು.31..ನಗರದಲ್ಲಿನ ಅನೇಕ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಬಳ್ಳಾರಿ ನಾಗರೀಕ ಹೋರಾಟ ಸಮಿತಿ ವತಿಯಿಂದ ಸಂಗ್ರಹಿಸಲಾದ ಒಂದು ಲಕ್ಷ ಸಹಿಗಳುಳ್ಳ ಮನವಿ ಪತ್ರವನ್ನು ಬುಧವಾರ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.


ಅಧಿಕಾರಿಗಳು ಮತ್ತು ನಾಗರಿಕರ ಸಭೆ ನಡೆಸಿ ಸಭೆಯಲ್ಲಿ ನಗರದ ಸಮಸ್ಯೆ ಮತ್ತು ಮೂಲಭೂತ ಸೌಲಭ್ಯಗಳ ಬಗ್ಗೆ ಚರ್ಚಿಸಿ ಪರಿಹರಿಸಲು ಆದಷ್ಟು ಬೇಗ ಒಂದು ಸಭೆಯನ್ನು ಕರೆಯಲು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿತ್ರ ಅವರಿಗೆ ಮನವಿ ಮಾಡಿಕೊಳ್ಳಲಾಯಿತು ಮನವಿ ಪತ್ರವನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಮತ್ತು ನಾಗರಿಕ ಹೋರಾಟ ಸಮಿತಿಯ ಪದಾಧಿಕಾರಿಗಳೊಂದಿಗೆ ಸಭೆಯನ್ನು ಕರೆಯುವುದಾಗಿ ಮತ್ತು ಚರ್ಚಿಸುವುದಾಗಿ ಭರವಸೆ ಇತ್ತರು.


ಇದೇ ದಿನ ನಾಗರಿಕ ಹೋರಾಟ ಸಮಿತಿ ವತಿಯಿಂದ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮತ್ತು ಮೇಯರ್ ರವರಿಗೂ ಹಲವಾರು ದಿನಗಳಿಂದ ಬಳ್ಳಾರಿ ನಾಗರಿಕರಿಂದ ಸಂಗ್ರಹಿಸಿದ ಸಾವಿರಾರು ಸಹಿಗಳನ್ನು ಮತ್ತು ಮನವಿ ಪತ್ರವನ್ನು ಸಲ್ಲಿಸಲಾಯಿತು. ಬಳ್ಳಾರಿಯ ಬಾಪೂಜಿನಗರ, ಪಿಂಜಾರ ಓಣಿ, ಜನತಾ ಗ್ಯಾರೇಜ್, ನಾಲಾ ಬೀದಿ, ಕಪ್ಪಗಲ್ ರಸ್ತೆ, ಸುಧಾಕ್ರಾಸ್ ಬಡಾವಣೆಗಳಿಂದ ಬಂದAತಹ ನಾಗರೀಕರ ಸಮಸ್ಯೆಗಳನ್ನು ಆಲಿಸಿ, ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ ಆಯುಕ್ತರು ಮತ್ತು ಮೇಯರ್ ರವರು ಎಲ್ಲಾ ಸಮಸ್ಯೆಗಳ ಬಗ್ಗೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳುವುದಾಗಿ ಮತ್ತು ಬಡಾವಣೆಗಳಿಗೆ ಭೇಟಿ ಇತ್ತು ಸಮಸ್ಯೆಗಳನ್ನು ಪರಿಶೀಲಿಸುವುದಾಗಿ ಭರವಸೆಯಿತ್ತರು.

ಈ ಸಂದರ್ಭದಲ್ಲಿ ವಕೀಲರು ಹಾಗೂ ಬಳ್ಳಾರಿ ನಾಗರೀಕ ಹೋರಾಟ ಸಮಿತಿಯ ಸಂಚಾಲಕ ಸೋಮಶೇಖರ ಗೌಡ , ನರಸಪ್ಪ ಉಪ್ಪಾರ್, ನಾಗರತ್ನ ಎಸ್ ಜಿ, ಗೋವಿಂದ್, ಗುರುಳ್ಳಿ ರಾಜ ಸೇರಿದಂತೆ ಸಂಘಟನೆಯ ಕಾರ್ಯಕಾರಿ ಸಮಿತಿಯ ಸದಸ್ಯರು ನಾಗರಿಕರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ