ಇಂಡಿ: ನಗರದ ಸಮಾಜ ಕಲ್ಯಾಣಯ ಡಾ ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಯೊರ್ವ ಆತ್ಮ ಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ನಗರದ ಬಸವೇಶ್ವರ ವೃತ್ತದಲ್ಲಿ ಕೇಲ ಕಾಲ ರಸ್ತೆ ತಡೆದು ಪ್ರತಿಭಟನೆ ಮಾಡಿ ತಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ ಇಂಡಿ ಶಾಖೆಯ ವಿದ್ಯಾರ್ಥಿಗಳು ಉಪವಿಭಾಗಾದಿಕಾರಿ ಚಿದಾನಂದ ಗುರುಸ್ವಾಮಿಯವರಿಗೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ವಾಸವಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೃತ ವಿದ್ಯಾರ್ಥಿ ಅಭಿಜೀತ ಸಮಗಾರ ಎಂಬ ವಿದ್ಯಾರ್ಥಿಯು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಸಂಭವಿಸಿದೆ.ಮೃತ ವಿದ್ಯಾರ್ಥಿಯು ಕಾಲೇಜಿನ ಅತ್ಯಂತ ಪ್ರತಿಭಾವಂತ ಮತ್ತು ಖಚಿಟಿಞ ವಿದ್ಯಾರ್ಥಿಯಾಗಿದ್ದರು. ಇಂತಹ ವಿದ್ಯಾರ್ಥಿಯ ಸಾವು ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಮತ್ತು ನಮ್ಮೆಲ್ಲರಿಗೆ ಆಘಾತವನ್ನುಂಟು ಮಾಡಿದೆ. ಆದ್ದರಿಂದ ಕೂಡಲೆ ಕಟ್ಟು ನಿಟ್ಟಾಗಿ ಸೂಕ್ತ ನ್ಯಾಯಾಂಗ ತನಿಖೆ ನಡೆಸಿ ನೀಲಯದ ವಾರ್ಡನ್ ಹಾಗೂ ಸಿಬ್ಬಂದಿಗಳ ಹೇಳಿಕೆಗಳನ್ನು ಪಡೆಯಬೇಕು. ದಯಮಾಡಿ ಈ ವಿಷಯವನ್ನು ಗಂಭಿರವಾಗಿ ಪರಿಗಣಿಸಿ ಶೀಘ್ರದಲ್ಲಿ ತನಿಖೆ ಪೂರ್ಣಗೊಳಿಸಿ ನಮ್ಮ ಸಂಘಟನೆಗೆ ವರದಿ ಸಲ್ಲಿಸಬೇಕಾಗಿ ವಿನಂತಿಸುತ್ತೇವೆ. ಒಂದು ವೇಳೆ ಇದಕ್ಕೆ ನ್ಯಾಯ ಸಿಗದಿದ್ದಲ್ಲಿ ನಾವು ದೊಡ್ಡ ಮಟ್ಟದ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಹೇಳಿದರು.