Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಷ್ಣು ಮಂಚು ಅಭಿನಯದ ಕಣ್ಣಪ್ಪ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್



      ಕಳೆದ 30 ವರ್ಷಗಳ ಹಿಂದಿನ ಸ್ಮರಣೀಯ ಕ್ಷಣಗಳು ಮತ್ತು ಚಿತ್ರರಂಗದ ಸಂಭ್ರಮದ ನಡುವೆ, ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ನಟ ಮೋಹನ್ ಬಾಬು ಚೆನ್ನೈನಲ್ಲಿ ಮತ್ತೆ ಒಂದಾದರು.

     ಇದಕ್ಕೆ ಕಾರಣ 'ಪೆದರಾಯುಡು' ಸಿನಿಮಾ. ಈ ಚಿತ್ರ ಜೂನ್ 15, 1995ರಂದು ತೆರೆಕಂಡಿತ್ತು. ಇದೀಗ 30 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಬ್ಬರೂ ಸ್ಟಾರ್ ನಟರು ವಿಷ್ಣು ಮಂಚು‌ ನಟನೆಯ 'ಕಣ್ಣಪ್ಪ' ಸಿನಿಮಾ ವೀಕ್ಷಿಸಿ ಹಳೇ ನೆನಪಿಗೆ ಹೊರಳಿದರು.

      ರವಿ ರಾಜ‌ ಪಿನಿಸೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ 'ಪೆದರಾಯುಡು' ಸಿನಿಮಾ, ಅಂದಿನ ಕಾಲದಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಗಟ್ಟಿ ಕಥಾ ಶೈಲಿ, ನೆನಪಲ್ಲಿ ಉಳಿಯುವ ಅಭಿನಯಗಳು ಮತ್ತು ಅದ್ವಿತೀಯ ಮಾಸ್ ಆಕರ್ಷಣೆಯಿಂದ ತೆಲುಗು ಚಿತ್ರರಂಗದಲ್ಲಿ ಈ ಚಿತ್ರ ಶಾಶ್ವತವಾಗಿ ಉಳಿದಿದೆ.

     ಅಂದಹಾಗೆ, ಜೂನ್ 27 ರಂದು ಜಾಗತಿಕ ಮಟ್ಟದಲ್ಲಿ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಕಣ್ಣಪ್ಪ ಸಿನಿಮಾ ಬಿಡುಗಡೆಗೊಳ್ಳಲಿದೆ. ಈ ಚಿತ್ರದಲ್ಲಿ ಶಿವನ ಭಕ್ತರಾದ ಕಣ್ಣಪ್ಪನ ಕಥೆಯನ್ನು ವಿಶಿಷ್ಟವಾಗಿ ಆವರಿಸಿಕೊಂಡಿದ್ದಾರೆ.

ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್ ಕೊಂಚ ಭಾವುಕರಾಗಿದ್ದಾರೆ.

“ಇದು ಅಸಾಧಾರಣ ಚಿತ್ರ. ಭಾವನೆ, ದೃಶ್ಯ ವೈಭವ ಮತ್ತು ಆಧ್ಯಾತ್ಮ ಎಲ್ಲವೂ ಎಕ್ಸ್ಟ್ರಾಡಿನರಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಜನಿಕಾಂತ್ ಬಗ್ಗೆಯೂ ಮಾತನಾಡಿದ ಮೋಹನ್ ಬಾಬು, "ಇವತ್ತು 22 ವರ್ಷಗಳಿಂದ ನಿರೀಕ್ಷಿಸುತ್ತಿದ್ದ ರಜನಿಕಾಂತ್ ಅವರ ಆಲಿಂಗನ ದೊರೆತಿದೆ. ಈಗ ನಾನು ಹೆದರುವುದಿಲ್ಲ. ನಾನು ಅಜೇಯ. ಕಣ್ಣಪ್ಪ ಬರುತ್ತಾನೆ” ಎಂದು ಸಂಭ್ರಮದಿಂದ ಹೇಳಿದರು.

    'ಕಣ್ಣಪ್ಪ' ಚಿತ್ರವನ್ನು  ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ‌ ಮಾಡಿದ್ದಾರೆ. ಪುತ್ರ‌ನ ಚಿತ್ರಕ್ಕೆ ಮೋಹನ್‌ ಬಾಬು ಬಂಡವಾಳ ಹೂಡಿ ನಿರ್ಮಾಪಕರಾಗಿದ್ದಾರೆ. ಬಹುತಾರಾಗಣದ ಈ‌ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ‌ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*