Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಷ್ಣು ಮಂಚು ಅಭಿನಯದ ಕಣ್ಣಪ್ಪ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್



      ಕಳೆದ 30 ವರ್ಷಗಳ ಹಿಂದಿನ ಸ್ಮರಣೀಯ ಕ್ಷಣಗಳು ಮತ್ತು ಚಿತ್ರರಂಗದ ಸಂಭ್ರಮದ ನಡುವೆ, ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ನಟ ಮೋಹನ್ ಬಾಬು ಚೆನ್ನೈನಲ್ಲಿ ಮತ್ತೆ ಒಂದಾದರು.

     ಇದಕ್ಕೆ ಕಾರಣ 'ಪೆದರಾಯುಡು' ಸಿನಿಮಾ. ಈ ಚಿತ್ರ ಜೂನ್ 15, 1995ರಂದು ತೆರೆಕಂಡಿತ್ತು. ಇದೀಗ 30 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಬ್ಬರೂ ಸ್ಟಾರ್ ನಟರು ವಿಷ್ಣು ಮಂಚು‌ ನಟನೆಯ 'ಕಣ್ಣಪ್ಪ' ಸಿನಿಮಾ ವೀಕ್ಷಿಸಿ ಹಳೇ ನೆನಪಿಗೆ ಹೊರಳಿದರು.

      ರವಿ ರಾಜ‌ ಪಿನಿಸೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ 'ಪೆದರಾಯುಡು' ಸಿನಿಮಾ, ಅಂದಿನ ಕಾಲದಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ಗಟ್ಟಿ ಕಥಾ ಶೈಲಿ, ನೆನಪಲ್ಲಿ ಉಳಿಯುವ ಅಭಿನಯಗಳು ಮತ್ತು ಅದ್ವಿತೀಯ ಮಾಸ್ ಆಕರ್ಷಣೆಯಿಂದ ತೆಲುಗು ಚಿತ್ರರಂಗದಲ್ಲಿ ಈ ಚಿತ್ರ ಶಾಶ್ವತವಾಗಿ ಉಳಿದಿದೆ.

     ಅಂದಹಾಗೆ, ಜೂನ್ 27 ರಂದು ಜಾಗತಿಕ ಮಟ್ಟದಲ್ಲಿ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಕಣ್ಣಪ್ಪ ಸಿನಿಮಾ ಬಿಡುಗಡೆಗೊಳ್ಳಲಿದೆ. ಈ ಚಿತ್ರದಲ್ಲಿ ಶಿವನ ಭಕ್ತರಾದ ಕಣ್ಣಪ್ಪನ ಕಥೆಯನ್ನು ವಿಶಿಷ್ಟವಾಗಿ ಆವರಿಸಿಕೊಂಡಿದ್ದಾರೆ.

ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್ ಕೊಂಚ ಭಾವುಕರಾಗಿದ್ದಾರೆ.

“ಇದು ಅಸಾಧಾರಣ ಚಿತ್ರ. ಭಾವನೆ, ದೃಶ್ಯ ವೈಭವ ಮತ್ತು ಆಧ್ಯಾತ್ಮ ಎಲ್ಲವೂ ಎಕ್ಸ್ಟ್ರಾಡಿನರಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಜನಿಕಾಂತ್ ಬಗ್ಗೆಯೂ ಮಾತನಾಡಿದ ಮೋಹನ್ ಬಾಬು, "ಇವತ್ತು 22 ವರ್ಷಗಳಿಂದ ನಿರೀಕ್ಷಿಸುತ್ತಿದ್ದ ರಜನಿಕಾಂತ್ ಅವರ ಆಲಿಂಗನ ದೊರೆತಿದೆ. ಈಗ ನಾನು ಹೆದರುವುದಿಲ್ಲ. ನಾನು ಅಜೇಯ. ಕಣ್ಣಪ್ಪ ಬರುತ್ತಾನೆ” ಎಂದು ಸಂಭ್ರಮದಿಂದ ಹೇಳಿದರು.

    'ಕಣ್ಣಪ್ಪ' ಚಿತ್ರವನ್ನು  ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ‌ ಮಾಡಿದ್ದಾರೆ. ಪುತ್ರ‌ನ ಚಿತ್ರಕ್ಕೆ ಮೋಹನ್‌ ಬಾಬು ಬಂಡವಾಳ ಹೂಡಿ ನಿರ್ಮಾಪಕರಾಗಿದ್ದಾರೆ. ಬಹುತಾರಾಗಣದ ಈ‌ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ‌ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ