Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಪಗಳನ್ನು ನಿಲ್ಲಿಸಿ ಸಂಧಾನ ಮಾಡಿಕೊಳ್ಳಿ: ರೂಪ-ರೋಹಿಣಿಗೆ ಸುಪ್ರೀಂಕೋರ್ಟ್‌ ಸಲಹೆ

ಬೆಂಗಳೂರು: ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳ ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಸುಪ್ರೀಂಕೋರ್ಟ್‌ ಮಂಗಳವಾರ ಸಲಹೆ ನೀಡಿದೆ.

ಸಿಂಧೂರಿ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿರುವ ಕ್ರಿಮಿನಲ್‌ ಮಾನಹಾನಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿರುವುದನ್ನು ಪ್ರಶ್ನಿಸಿ ರೂಪಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕ್‌ ಮತ್ತು ಪಂಕಜ್‌ ಮಿತ್ತಲ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಇಬ್ಬರೂ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿದ್ದು, ಈ ನಡತೆ ಮುಂದುವರಿಯಬಾರದು. ಇಬ್ಬರೂ ಯುವ ಅಧಿಕಾರಿಗಳಾಗಿದ್ದು, ಈ ಹಣಾಹಣಿ ಮುಂದುವರಿದರೆ ಅವರ ವೃತ್ತಿಗೆ ಹಾನಿಯಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಉಭಯ ಪಕ್ಷಕಾರರು ಆರೋಪಗಳನ್ನು ಹಿಂಪಡೆಯಲು ಒಪ್ಪಿದರೆ ಬಾಕಿ ಇರುವ ಪ್ರಕರಣಗಳು ಸೇರಿ ಇಬ್ಬರ ನಡುವೆ ಬಾಕಿ ಇರುವ ಎಲ್ಲಾ ದಾವೆಗಳು ರದ್ದಾಗಲಿವೆ ಎಂದು ನ್ಯಾಯಾಲಯ ಹೇಳಿದೆ.

ಕಳೆದ ಡಿಸೆಂಬರ್‌ 15ರಂದು ಪ್ರಕರಣಕ್ಕೆ ತಡೆ ನೀಡಿದ್ದ ಸರ್ವೋಚ್ಚ ನ್ಯಾಯಾಲಯವು ಮಾಧ್ಯಮಗಳಲ್ಲಿ ಮಾತನಾಡದಂತೆ ಉಭಯ ಅಧಿಕಾರಿಗಳಿಗೆ ನಿರ್ದೇಶಿಸಿತ್ತು. ಅಲ್ಲದೇ, ವಿವಾದ ಬಗೆಹರಿಸಿಕೊಳ್ಳಲು ಸಂಧಾನಕ್ಕೆ ಮುಂದಾಗುವಂತೆ ಸಲಹೆ ನೀಡಿತ್ತು.

ಅಧಿಕಾರಿಗಳಿಬ್ಬರ ಕಚ್ಚಾಟಕ್ಕೆ ಸಂಬಂಧಿಸಿದಂತೆ ಸರ್ಕಾರವು ಇಲಾಖಾ ತನಿಖೆ ನಡೆಸುತ್ತಿದ್ದರೆ, ಈ ವಿಚಾರದಲ್ಲಿ ಮುಂದುವರಿಯದಂತೆ ಸರ್ಕಾರಕ್ಕೂ ಸೂಚಿಸಲಾಗುವುದು ಎಂದು ಹೇಳಿತು.

ಸಿಂಧೂರಿ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ಅವರು ಸಿಂಧೂರಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಬಯಸಿಲ್ಲ. ಪರಿಹಾರ ಸಾಧ್ಯತೆಯ ಬಗ್ಗೆ ಸಿಂಧೂರಿ ಜೊತೆ ಚರ್ಚಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದರು. ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. ಡಿ ರೂಪಾ ಪರವಾಗಿ ಹಿರಿಯ ವಕೀಲ ಆದಿತ್ಯ ಸೋಂಧಿ ವಾದಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*