Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ, ಸೆಪ್ಟೆಂಬರ್ 30: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ.

ಈ ಹಿಂದೆ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಷರತ್ತು ವಿಧಿಸಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್‌ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು.

ಪೂರ್ವಾನುಮತಿ ಪಡೆದು ಈಗಾಗಲೇ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಿದ್ದಾರೆ. ಆದರೆ, ಇನ್ಮುಂದೆ ಮುಕ್ತವಾಗಿ ಬಳ್ಳಾರಿಗೆ ತೆರಳಬಹುದಾಗಿದೆ.

ತಮ್ಮ ರಾಜಕೀಯದ ಪ್ರಮುಖ ನೆಲೆಯಾಗಿರುವ ಬಳ್ಳಾರಿ ಭೇಟಿಗೆ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸಿದ್ದು, ಜನಾರ್ದನ ರೆಡ್ಡಿ ಅವರಿಗೆ ತೀವ್ರ ಹಿನ್ನಡೆ ಉಂಟುಮಾಡಿತ್ತು.

ಕಳೆದ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿದ್ದ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದ ಇತರ ಅಭ್ಯರ್ಥಿಗಳು ಯಾರೂ ಗೆಲುವು ಸಾಧಿಸಿರಲಿಲ್ಲ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ