LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಸೂರಜ್ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್: ಇಂದು ಸಿಐಡಿ ಕಸ್ಟಡಿ !?

ಬೆಂಗಳೂರು: ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿ ವಿಧಾನ ಪರಿಷತ್​ ಸದಸ್ಯ ಡಾ. ಸೂರಜ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ ಬೆನ್ನಲ್ಲೇ ಅವರನ್ನು ಭಾನುವಾರ ರಾತ್ರಿ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಯಿತು.


ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವಹಿಸಿದ್ದು, ಇಂದು ಬಾಡಿ ವಾರಂಟ್​​​ ಮೇಲೆ ತನಿಖಾಧಿಕಾರಿಗಳು ಸೂರಜ್ ಅವರನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಭಾನುವಾರ ಜೈಲಿಗೆ ತಲುಪುವುದು ತಡವಾದ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣಗೆ ಸೋಮವಾರ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ ನೀಡಲಿದ್ದಾರೆ. ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಸೂರಜ್ ಅವರನ್ನು ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.


ಯುವಕನಿಗೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 377 (ಅಸಹಜ ಲೈಂಗಿಕ ದೌರ್ಜನ್ಯ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಜೀವ ಬೆದರಿಕೆ) ಅಡಿ ಪ್ರಕರಣ ದಾಖಲಾಗಿತ್ತು. ಅಸಹಜ ಲೈಂಗಿಕ ದೌರ್ಜನ್ಯ ಆರೋಪಿಸಿ ಜೆಡಿಎಸ್‌ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದರು. ತನ್ನ ಮೇಲೆ ಹೊಳೆನರಸೀಪುರದ ಗನ್ನಿಕಂಡದ ಫಾರ್ಮ್‌ಹೌಸ್‌ನಲ್ಲಿ ಜೂನ್ 16ರ ಸಂಜೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್