Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಲ್ಲಿಯವರೆಗೆ ಶೇ.4ರಷ್ಟು ಸರ್ವೇ: 7 ಕೋಟಿ ಜನರ ಸಮೀಕ್ಷೆ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಸೆಪ್ಟೆಂಬರ್ 26): ಹಲವು ಗೊಂದಗಳ ನಡುವೆಯೂ ಕರ್ನಾಟಕದಲ್ಲಿ ಜಾತಿಗಣತಿ ಐದನೇ ದಿನಕ್ಕೆ ಕಾಲಿಟ್ಟಿದೆ. ನಿಯೋಜನೆಗೊಂಡಿರುವ ಶಿಕ್ಷಕರು ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿದ್ದಾರೆ. ಕೆಲವೆಡೆ ಇಂಟರ್​ ನೆಟ್, ಸರ್ವರ್ ಸಮಸ್ಯೆಗಳ ನಡೆಯೂ ಶಿಕ್ಷಕರು ನಾನಾ ಕಸರತ್ತು ಮಾಡಿ ಸಮೀಕ್ಷೆ ನಡೆಸುತ್ತಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಸೆಪ್ಟೆಂಬರ್ 26) ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಕೆಲ ಮಹತ್ವದ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇನ್ನು ಈವರೆಗೆ ರಾಜ್ಯಾದ್ಯಂತ ಕೇವಲ ಶೇ.4ರಷ್ಟು ಮಾತ್ರ ಸರ್ವೇ ಆಗಿದೆ ಎಂದು ಸ್ವತಃ ಸಿಎಂ ಸ್ಪಷ್ಟಪಡಿಸಿದ್ದಾರೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಇವತ್ತು ಡಿಸಿಗಳು, ಸಿಇಒಗಳ ಜೊತೆ ವಿಡಿಯೋ ಸಂವಾದ ಮಾಡಿದ್ದೇವೆ. ಸರ್ವೇ ಕಾರ್ಯ ಕುಂಠಿತ ಆಗಿತ್ತು. ತಾಂತ್ರಿಕ ಸಮಸ್ಯೆ ಗಳು ಎಲ್ಲಾ ಡಿಸಿ‌ ಹೇಳೋ ಪ್ರಕಾರ 90ರಷ್ಟು ರಷ್ಟು ಪರಿಹಾರ ಆಗಿದ್ದಾವೆ. ಉಳಿದಿರೋ ಸಮಸ್ಯೆ ಇಂದೇ ಪರಿಹಾರ ಆಗುತ್ತದೆ. ನಾನು ಕಮಿಷನರ್ ಅವರಿಗೂ ಹೇಳಿದ್ದೇನೆ, ಕಾರ್ಯದರ್ಶಿ ಗೂ ಹೇಳಿದ್ದೇನೆ. ಏನೇನು ತೊಡಕು ಇದ್ದಾವೆ ಅದನ್ನ ನಿವಾರಣೆ ಮಾಡಬೇಕು. ನಿವಾರಣೆ ಆಗುತ್ತದೆ ಎಂದ ಹೇಳಿದ್ದಾರೆ. ಸಮಸ್ಯೆ ಬಗೆ ಹರಿಯುತ್ತದೆ. ಇಂದಿನಿಂದ ಸರ್ವೇ ಕೆಲಸ ಚುರುಕಾಗಿ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸೆ 22ರಿಂದ ಅಕ್ಟೋಬರ್ ವರೆಗೆ ಸರ್ವೇ ಕೆಲಸ ಮುಗೀಬೇಕು ಅಂತ ತೀರ್ಮಾನ ಮಾಡಿದ್ವಿ. ಆಯೋಗ ಕೂಡ ತೀರ್ಮಾನ ಮಾಡಿತ್ತು. ಆದ್ರೆ ನಾಲ್ಕು ದಿನ ಸರ್ವೇ ಸರಿಯಾಗಿ ನಡೆದಿಲ್ಲ. ಉಳಿದಿರೋ ದಿನಗಳಲ್ಲಿ ಅದನ್ನ ಕವರ್ ಮಾಡಬೇಕು. ಪ್ರತೀ ದಿನ ಶೇ.10ರಷ್ಟು ಹೌಸ್ ಹೋಲ್ಡ್ ಸರ್ವೇ ಅಗಬೇಕು.ನಾವು ಮಾಡುತ್ತೇವೆ ಎಂದು ಎಲ್ಲಾ ಡಿಸಿ‌ ಒಪ್ಪಿಕೊಂಡಿದ್ದಾರೆ. ಶಿಕ್ಷಕರು ಕೆಲ ತಪ್ಪು ಕಲ್ಪನೆಗಳಿಂದ ಸಮಸ್ಯೆ ಆಗಿತ್ತು. ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಇದ್ದಾರೆ. ಎಲ್ಲರೂ ಕೂಡ ಒಪ್ಪಿಕೊಂಡು ಸರ್ವೇ ಕೆಲಸ ಶುರು ಮಾಡಿದ್ದಾರೆ ಎಂದು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ