Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಂ ಕೇರ್ಸ್ ಫಂಡ್ ಮೇಲೂ ಶುರುವಾಯ್ತು ಅನುಮಾನ: ತನಿಖೆಗೆ ಆಗ್ರಹ

ಬೆಂಗಳೂರು,06: ಚುನಾವಣಾ ಬಾಂಡ್‌ಗಳು ಅಸಂವಿಧಾನಿಕ ಎಂದು ಘೋಷಿಸಲ್ಪಟ್ಟ ಬೆನ್ನಲ್ಲೇ, ಪಿಎಂ ಕೇರ್ಸ್ ಫಂಡ್ ಬಗ್ಗೆಯೂ ಇದೀಗ ಅನುಮಾನಗಳು ಮೂಡತೊಡಗಿದ್ದು, ಇದರ ಬಗ್ಗೆಯೂ ತನಿಖೆ ನಡಸಬೇಕೆಂದು ಹಲವರು ಆಗ್ರಹಿಸುತ್ತಿದ್ದಾರೆ.

ಚುನಾವಣಾ ಬಾಂಡ್‌ಗಳ ಮೂಲಕ ಪಾರದರ್ಶಕತೆಯನ್ನು ತಂದಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು, ಆದರೆ, ಹಗರಣ ಬಯಲಿಗೆ ಬಂದಿದೆ. ಇದೀಗ ಪಿಎಂ ಕೇರ್ಸ್ ನಿಧಿಯನ್ನು ಯಾವುದಕ್ಕೆ ಬಳಸಲಾಗುತ್ತಿದೆ, ಯಾವ ಉದ್ದೇಶಕ್ಕೆ ಎಷ್ಟು ಖರ್ಚು ಮಾಡಲಾಗಿದೆ ಎಂಬುದನ್ನು ತಿಳಿದುಕೊಳ್ಳುವ ಹಕ್ಕು ಸಾರ್ವಜನಿಕರಿಗೆ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ಕಲ್ಯಾಣ ಯೋಜನೆಗಳ ಹಣ ಆರ್‌ಎಸ್‌ಎಸ್‌ಗೆ ಹೋಗಿವೆ. ಇಂದು, ಆರ್‌ಎಸ್‌ಎಸ್ ಸೈನಿಕ ಶಾಲೆಗಳು ಮತ್ತು ಕೇಂದ್ರೀಯ ವಿದ್ಯಾಲಯಗಳ ಮೇಲೆ ನೇರ ಅಥವಾ ಪರೋಕ್ಷ ನಿಯಂತ್ರಣವನ್ನು ಹೊಂದಿದೆ. ಸರಕಾರ ಹಲವಾರು ಶಾಲೆಗಳನ್ನು ಅವರಿಗೆ ಹಸ್ತಾಂತರಿಸಿದೆ. ಅದು ಯಾರ ಆಸ್ತಿ? ಖಾಸಗಿ ಸಂಸ್ಥೆಗಳಿಗೆ ಶಾಲೆಗಳ ನಿಯಂತ್ರಣವನ್ನು ನೀಡಿದರೆ, ಮೀಸಲಾತಿ ಏನಾಗುತ್ತದೆ? ಇಂತಹ ಶಾಲೆಗಳಲ್ಲಿ ಬಡವರಿಗೆ ಸೀಟು ಕೊಡುತ್ತಾರೆಯೇ? ಮೋದಿಯವರು ಬಡವರ ಆಶಾಭಾವನೆಗಳನ್ನು ನಾಶಮಾಡಿ ಈ ದೇಶವನ್ನು ಶ್ರೀಮಂತರ ಕೈಗೆ ಕೊಡುತ್ತಿದ್ದಾರೆ. ಇಲ್ಲಿಯವರೆಗೆ, ಅವರು ಎಷ್ಟು ಖರ್ಚು ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಲೆಕ್ಕವನ್ನು ತೋರಿಸಿಲ್ಲ, ಯಾರು ಎಷ್ಟು ಕೊಡುಗೆ ನೀಡಿದ್ದಾರೆ ಎಂಬುದು ಯಾರಿಗೂ ತಿಳಿದಿಲ್ಲ. ಎಲೆಕ್ಟೋರಲ್ ಬಾಂಡ್‌ಗಳಂತೆ ಯಾವುದೇ ಮಾಹಿತಿಗಳಿಲ್ಲದಂತಾಗಿದೆ ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಜಸ್ಟಿಸ್ ಮದನ್ ಲೋಕೂರ್ ಅವರು ಮಾತನಾಡಿ, ಪಾರದರ್ಶಕತೆ ಇರಬೇಕು. ಖಾಸಗಿ ಟ್ರಸ್ಟ್‌ಗಳೊಂದಿಗೆ ವ್ಯವಹರಿಸುವ ಸಕ್ಷಮ ಪ್ರಾಧಿಕಾರವು ಇದನ್ನು ಈ ಕೆಲಸವನ್ನು ಮಾಡಬೇಕು ಎಂದು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ