Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ನಿಧನ: ಮರುಗಿದ ವಿಶ್ವ!

ತಬಲಾ ಮಾಂತ್ರಿಕ ಎಂದೇ ಖ್ಯಾತರಾಗಿರುವ ಜಾಕಿರ್ ಹುಸೇನ್ ನಿಧನರಾಗಿದ್ದಾರೆ, ಕೇವಲ ಭಾರತ ಮಾತ್ರವಲ್ಲ ಇಡೀ ವಿಶ್ವವೇ ಮರುಗಿದೆ. ಅವರು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು, ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. 73ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರು ತಬಲ ನುಡಿಸುವ ಪರಿ ಜನರನ್ನು ಮಂತ್ರಮುಗ್ದಗೊಳಿಸುತ್ತಿತ್ತು. ಅವರಿಗೆ ಸಂಬಂಧಿಸಿದ ಹಲವು ಮಾಹಿತಿ ಇಲ್ಲಿದೆ.





ಅವರು ತಬಲಾ ವಾದಕ ಉಸ್ತಾದ್ ಅಲ್ಲಾ ರಖಾ ಅವರ ಮಗ, ಜಾಕಿರ್​ ತಂದೆಯಿಂದಲೇ ತಬಲಾ ನುಡಿಸುವುದನ್ನು ಕಲಿತಿದ್ದರು. ಅವರು ಶ್ಲೋಕ, ಮಂತ್ರಗಳನ್ನೂ ಕಲಿತಿದ್ದರು. ಅವರ 11ನೇ ವಯಸ್ಸಿನಲ್ಲಿ ಅಮೆರಿಕದಲ್ಲಿ ತಮ್ಮ ಮೊದಲ ಸಂಗೀತ ಕಚೇರಿ ನಡೆಸಿದ್ದರು. ಅವರು 1973 ರಲ್ಲಿ ತಮ್ಮ ಮೊದಲ ಆಲ್ಬಂ ಲಿವಿಂಗ್ ಇನ್ ದಿ ಮೆಟೀರಿಯಲ್ ವರ್ಲ್ಡ್ ಅನ್ನು ಪ್ರಾರಂಭಿಸಿದರು.



ತಬಲಾ ವಾದನ ಜಾಕಿರ್ ಪಯಣ ಜಾಕಿರ್ ಚಿಕ್ಕ ವಯಸ್ಸಿನಲ್ಲೇ ತಬಲಾ ಮೇಲಿನ ಹಿಡಿತವನ್ನು ಗಟ್ಟಿಗೊಳಿಸಿದ್ದರು. 11-12ರಿಂದಲೇ ತಬಲಾ ನುಡಿಸುವ ಪಯಣ ಆರಂಭಿಸಿದ್ದರು. ಸಂಗೀತ ಕಚೇರಿಗಳಿಗಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಿದ್ದರು. ತಾವು ರೈಲಿನಲ್ಲಿ ಪ್ರಯಾಣಿಸುವಾಗ ಕಾಯ್ದಿರಿಸಿದ ಟಿಕೆಟ್​ಗಳನ್ನು ಪಡೆಯುವಷ್ಟು ಹಣ ತನ್ನ ಬಳಿ ಇರಲಿಲ್ಲ ಎಂದು ಹೇಳಿಕೊಂಡಿದ್ದರು.

ತಬಲಾವನ್ನು ಮಡಿಲಿನಲ್ಲಿಟ್ಟುಕೊಳ್ಳುತ್ತಿದ್ದರು ಜನರು ಕಿಕ್ಕಿರಿದು ತುಂಬಿರುವ ಜನರಲ್ ಕೋಚ್​ಗೆ ಅವರು ಹತ್ತುತ್ತಿದ್ದರು. ಯಾರ ಪಾದವಾಗಲೀ, ಪಾದರಕ್ಷೆಯಾಗಲೀ ತಾಗದಂತೆ ತಡೆಯಲು ಅವರು ತಬಲಾವನ್ನು ಮಗುವಿನಂತೆ ತೊಡೆಯ ಮೇಲೆ ಇಟ್ಟುಕೊಳ್ಳುತ್ತಿದ್ದರು.

ಗ್ರ್ಯಾಮಿ ಪ್ರಶಸ್ತಿಯೂ ಬಂದಿತ್ತು ಅನೇಕ ಕಠಿಣ ಹಾದಿಗಳು, ಸವಾಲುಗಳನ್ನು ದಾಟಿ ಪ್ರಪಂಚದಾದ್ಯಂತ ಜನರ ಹೃದಯದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಜಾಕಿರ್ ಹುಸೇನ್​ಗೆ 2009ರಲ್ಲಿ ಗ್ರ್ಯಾಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. 1988 ರಲ್ಲಿ ಪದ್ಮಶ್ರೀ ಮತ್ತು 2002 ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. 1990 ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ