Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರು ಹಿರಿಯರನ್ನು ಆತ್ಮೀಯವಾಗಿ ನೋಡಿಕೊಳ್ಳಿ : ಬಸವರಾಜ ಹಟ್ಟೀಗೌಡರ





ಘಟಪ್ರಭಾ. ಇಂದಿನ ದಿನಮಾನದಲ್ಲಿ ಹಿರಿಯರ ಭಾವನೆಗಳನ್ನು ನಾವೆಲ್ಲರೂ ಗೌರವಿಸಬೇಕು ಮತ್ತು ಅವರನ್ನು ಆತ್ಮೀಯತೆಯಿಂದ ನೋಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದ್ದು  ಹಿರಿಯರ ನಾಗರೀಕರ ಮನಸ್ಸು ಸೂಕ್ಷ್ಮತೆಯಿಂದ ಕೂಡಿರುತ್ತದೆ ಅವರಿಗೆ ಶಾಂತಿ ಸಹನೆಗಳಿಂದ ವರ್ತನೆ ನಾವು ಮಾಡಿದರೆ ಅವರು ಸಹ ಶಾಂತವಾಗಿರುತ್ತಾರೆ ಎಂದು ಭಾರತ ಸೇವಾ ದಳದ  ಕರ್ನಾಟಕ   ರಾಜ್ಯ ನಿವೃತ್ತ ರಾಜ್ಯಾಧಿಪತಿಗಳಾದ ಬಸವರಾಜ ಹಟ್ಟೀಗೌಡರ ಅವರು ಹೇಳಿದರು.

          ಅವರು  ಘಟಪ್ರಭಾದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ದಿನಾಂಕ, 14-10-2025 ರಂದು ಘಟಪ್ರಭಾ ಹಿರಿಯ ನಾಗರಿಕರ ವೇದಿಕೆ ಮತ್ತು ಜೈಂಟ್ಸ್ ಗ್ರೂಪ್ ಆಫ್ ಘಟಪ್ರಭಾ ಇವರು ಸಂಯುಕ್ತವಾಗಿ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಾದ ಸುರೇಶ ಪಾಟೀಲ ಮತ್ತು ಪುಂಡಲೀಕ ನಾಯಿಕ  ಅವರನ್ನು ಸನ್ಮಾನ ಮಾಡಿ ಗೌರವಿಸಲಾಯಿತು

       ಅತಿಥಿ  ರಾಮಣ್ಣ ಹುಕ್ಕೇರಿ ಮಾತನಾಡಿ ಹಿರಿಯ ನಾಗರಿಕರು ತಮ್ಮ ಜೀವನದಲ್ಲಿ ಸಾಕಷ್ಟು ತೊಂದರೆ ಅನುಭವಿಸಿ ಮಕ್ಕಳನ್ನು ಬೆಳೆಸಿ ದೊಡ್ಡವರನ್ನು ಮಾಡಿರುತ್ತಾರೆ ಅವರ ಭಾವನೆಗಳನ್ನು ಮಕ್ಕಳು ಹಾಗೂ ಕುಟುಂಬದ ಎಲ್ಲಾ ಸದಸ್ಯರು ಗೌರವಿಸುವದು ಆದ್ಯ ಕರ್ತವ್ಯವಾಗಿದೆ ಎಂದರು.

      ಸತ್ಕಾರ ಸ್ವೀಕರಿಸಿದ ಸುರೇಶ ಪಾಟೀಲ ಮತ್ತು ಪುಂಡಲೀಕ ನಾಯಿಕ ಅವರು ಮಾತನಾಡಿ ಎಲ್ಲಾ ಹಿರಿಯ ನಾಗರಿಕರು ಸಾಮಾಜಿಕ ಧಾರ್ಮಿಕ ಆಧ್ಯಾತ್ಮಿಕ ರಂಗಗಳಲ್ಲಿ ಸಕ್ರಿಯವಾಗಿ  ಭಾಗವಹಿಸಿ ಸಾಮಾಜಿಕ ಸೇವೆ ಮಾಡುವ ಮೂಲಕ ಸಾರ್ಥಕ ಬದುಕು ಸಾಧಿಸಬೇಕು ಎಂದು ಸನ್ಮಾನ ಮಾಡುವ ಮೂಲಕ ನಮ್ಮ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ ಎಂದರು.

        ಜೈಂಟ್ಸ್ ಗ್ರೂಪ್ ಆಫ್ ಘಟಪ್ರಭಾ ಅಧ್ಯಕ್ಷ ಭೂಪಾಲ್ ಖೆಮಲಾಪುರೆ, ಮತ್ತು ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ ಅವರು ಮಾತನಾಡಿ ಹಿರಿಯ ನಾಗರಿಕರ ಯಾವುದೇ ತೊಂದರೆಗಳು ಇದ್ದರೂ ಪರಿಹರಿಸಲು ನಾವು ಸದಾ ಸಹಾಯ ಮಾಡುತ್ತೇವೆ ಎಂದರು.

               ಹಿರಿಯ  ವೇದಿಕೆ ಸಂಸ್ಥಾಪಕ ಕಾರ್ಯದರ್ಶಿ ಸುಭಾಷ್ ದಡ್ಡೀಕರ ಪ್ರಾಸ್ತಾವಿಕವಾಗಿ ಮಾತನಾಡಿದರು.

        ಕಾರ್ಯಕ್ರಮದಲ್ಲಿ ಕೆ ಡಿ ವಾಲಿಕಾರ, ಕೆ ಪಿ ಕಳ್ಳೀಮಠ  ಮಹಾದೇವ ಯರನಾಳ, ರಾಜು ಕತ್ತಿ, ಮಲ್ಲಪ್ಪ ನಾಯಿಕ ಪ್ರಭಾಕರ ಸುಳೆಗಾವಿ, ಹರಿ ಪ್ರಕಾಶ ಕಾಳೆ, ಕೆಂಚಪ್ಪಾ ಪಾಟೀಲ ಪಶುಪತಿಮಠ ಚಿರಾಕಲಿಶಾ ಮಕಾನದಾರ, ಪ್ರಕಾಶ ಕುಲಕರ್ಣಿ,  ಮುರಳೀಧರ ಜತ್ಕರ  ಪ್ರಭು ಅಂತರಗಂಗಿ, ಶಂಕರ ವಾಘ, ಮನಗುತ್ತಿ, ಮಹಾದೇವ ಬಡೋದೆ, ಮಣಿಕಂಠ ನಾಯಿಕ ಕೆಂಚಪ್ಪಾ ನಾಯಿಕ  ಸೇರಿದಂತೆ ಹಲವು ನಾಗರಿಕರು ಭಾಗವಹಿಸಿದ್ದರು.ಕಾರ್ಯಕ್ರಮದ ನಿರೂಪಣೆ, ಸ್ವಾಗತವನ್ನು ಅರ್ಥಗರ್ಭಿತವಾಗಿ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಮಹಾಜನ ನೆರವೇರಿಸಿದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ