ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಪ್ರಯಾಣ ವಿನಾಯಿತಿ ನೀಡಿದ ನಂತರ ಅಮೀರ್ ಖಾನ್ ಮುತ್ತಾಕಿ ಅವರ ಪ್ರವಾಸ ಸಾಧ್ಯವಾಗಿದೆ. ಇದು 2021 ರಲ್ಲಿ ಅಮೆರಿಕ ತನ್ನ ನೇತೃತ್ವದ ಪಡೆಗಳನ್ನು ಹಿಂತೆಗೆದುಕೊಂಡ ಬೆನ್ನಲ್ಲೆ ಅಧಿಕಾರಕ್ಕೆ ಮರಳಿದ ನಂತರ ಉನ್ನತ ತಾಲಿಬಾನ್ ನಾಯಕರೊಬ್ಬರು ಭಾರತಕ್ಕೆ ನೀಡಿದ ಮೊದಲ ಭೇಟಿಯಾಗಿದೆ.
ಮಹಿಳಾ ಪತ್ರಕರ್ತರು ಸೇರಿದಂತೆ ಹಲವಾರು ನಾಯಕರು ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ನಮ್ಮ ದೇಶದ ಮೇಲೆ, ವಿಶೇಷವಾಗಿ ನಮ್ಮ ಸ್ವಂತ ನೆಲದಲ್ಲಿ ತನ್ನ ಷರತ್ತುಗಳನ್ನು ಹೇರಲು ಮುತ್ತಖಿ ಯಾರು ಎಂದು ಕೇಳಲಾಗುತ್ತಿದೆ.