Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಯಿ ಪಲ್ಲವಿ ಬರ್ತ್​ಡೇಗೆ 'ತಂಡೆಲ್' ಸ್ಪೆಷಲ್​​ ವಿಡಿಯೋ ಅನಾವರಣ

ದಕ್ಷಿಣ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯರಾಗಿರುವ ಸಹಜ ಸುಂದರಿ ಸಾಯಿ ಪಲ್ಲವಿ ಜನ್ಮದಿನದ ಸಂಭ್ರಮದಲ್ಲಿದ್ದಾರೆ. 32ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ನ್ಯಾಚುರಲ್​​ ಬ್ಯೂಟಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನಟಿಯ ಮುಂದಿನ ಬಹುನಿರೀಕ್ಷಿತ ಚಿತ್ರವಾದ 'ತಂಡೆಲ್' ತಂಡ ಸ್ಪೆಷಲ್​​ ವಿಡಿಯೋ ಅನಾವರಣ​ಗೊಳಿಸಿ ನಟಿಗೆ ವಿಶೇಷವಾಗಿ ಶುಭ ಕೋರಿದೆ.


ಚಂದು ಮೊಂಡೇಟಿ ನಿರ್ದೇಶನದ ತಂಡೆಲ್​​ ಚಿತ್ರದಲ್ಲಿ ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರ ರಾಷ್ಟ್ರೀಯತೆಯಂತಹ ಅಂಶಗಳೊಂದಿಗೆ, ಗ್ರಾಮೀಣ ಹಿನ್ನೆಲೆಯಲ್ಲಿ ನಡೆಯುವ ಪ್ರೇಮಕಥೆಯನ್ನೂ ಹೇಳಲಿದೆ. ನಾಗ ಸಾಯಿ ಪ್ರೇಮ್​ಕಹಾನಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.


ತಂಡೆಲ್​​ ಚಿತ್ರತಂಡ ಶೇರ್ ಮಾಡಿರುವ ಹೃದಯಸ್ಪರ್ಶಿ ವಿಡಿಯೋ, ಬರ್ತ್​ ಡೇ ಗರ್ಲ್​​​​ನ ಹಿಂದಿನ ಪಾತ್ರಗಳನ್ನು, ನಟಿಯಾಗಿ ಅವರ ವೃತ್ತಿಜೀವನ ಪ್ರಯಾಣವನ್ನು ಪ್ರದರ್ಶಿಸಿದೆ. ನಂತರ ನಾಗ ಚೈತನ್ಯ ಜೊತೆಗಿನ ಪ್ರಸ್ತುತ ಚಿತ್ರಕ್ಕೆ ಎಂಟ್ರಿ ಕೊಡುತ್ತದೆ. ತೆರೆಮರೆ ದೃಶ್ಯಾವಳಿಗಳು ಸೆಟ್‌ನಲ್ಲಿನ ಸಾಯಿ ಪಲ್ಲವಿ ಅವರ ನಗು, ಅಳು, ಮೋಜು-ಮಸ್ತಿಯಂತಹ ಕ್ಷಣಗಳನ್ನು ತೋರಿಸುತ್ತದೆ. ವಿಡಿಯೋ ನಟಿಮಣಿಯ ಶೂಟಿಂಗ್​ ವೇಳೆಯ ಫನ್ನಿ ಮಿಸ್ಟೇಕ್ಸ್​​ (bloopers) ಅನ್ನೂ ಸಹ ಒಳಗೊಂಡಿದೆ. ನಟಿ ಅಭಿಮಾನಿಗಳನ್ನು ಅಪ್ಪಿಕೊಳ್ಳುವ ಮತ್ತು ಸೆಟ್‌ನಲ್ಲಿನ ಭಾವನಾತ್ಮಕ ಕ್ಷಣಗಳನ್ನು ಈ ವಿಡಿಯೋ ಒಳಗೊಂಡಿದೆ.


ಸೋಷಿಯಲ್​​ ಮೀಡಿಯಾ ಪ್ಲಾಟ್​ಫಾರ್ಮ್​​ಗಳಲ್ಲಿ ವಿಡಿಯೋ ಹಂಚಿಕೊಂಡ ಚಿತ್ರತಂಡ, ''ಅಭಿನಯ ನಿಮ್ಮದು, ಆಚರಣೆ ನಮ್ಮದು. ನೀವು ನಿರ್ವಹಿಸಿ, ನಾವು ಗೌರವಿಸುತ್ತೇವೆ. ಹ್ಯಾಪಿ ಬರ್ತ್​ ಡೇ 'ಬುಜ್ಜಿ ತಲ್ಲಿ'. ನಿಮ್ಮ ಈ ವಿಶೇಷ ದಿನದಂದು ನಮ್ಮ ತಂಡದ ವಿಶೇಷ ಉಡುಗೊರೆ ಇಲ್ಲಿದೆ'' ಎಂದು ಬರೆದುಕೊಂಡಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ