ಬೆಳಗಾವಿ,
ಬೆಳಗಾವಿ ಜಿಲ್ಲಾ ಪಂಚಾಯತ್ , ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಣ್ಣೂರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚನ್ನಮ್ಮನ ಕಿತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಉಲ್ಲಾಸ ನವಭಾರತ ಸಾಕ್ಷರತಾ ಕಾರ್ಯಕ್ರಮದ ಬೋಧಕರ ತರಬೇತಿ ಶಿಬಿರವನ್ನು ಇಂದು ಹೊಸಕಾದರವಳ್ಳಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಮತಿ ಗಾಯತ್ರಿ ಅಜ್ಜನ್ನವರ ಮಾತನಾಡಿ, “ಇದು ರಾಷ್ಟ್ರೀಯ ಹೆಮ್ಮೆಯ ಕೆಲಸವಾಗಿದೆ. ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಿ ಅವರ ಬಾಳಿಗೆ ಬೆಳಕಾಗಿಸುವ ಮಹತ್ವದ ಜವಾಬ್ದಾರಿ ನಿಮ್ಮದಾಗಿದೆ” ಎಂದು ಹೇಳಿದರು.
ತರಬೇತಿ ಶಿಬಿರದಲ್ಲಿ ಸಾಕ್ಷರತಾ ಕಾರ್ಯಕ್ರಮದ ಉದ್ದೇಶಗಳು, ಬೋಧನಾ ವಿಧಾನಗಳು ಹಾಗೂ ಕಾರ್ಯಯೋಜನೆ ಕುರಿತು ಮಾರ್ಗದರ್ಶನ ನೀಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಣ್ಣಪ್ಪ ರಾಮರಾವ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಿ.ಆರ್.ಪಿ ಗಳಾದ ಎಂ.ವೈ. ಕಡಕೋಳ, ಇ.ಸಿ.ಓ ಎಸ್.ಎಂ. ಶಹಪೂರಮಠ, ಶ್ರೀಮತಿ ಜೆ.ಸಿ. ಕೋಟಗಿ, ಸಿ.ಆರ್.ಪಿ ಗಳಾದ ವಿನಾಯಕ ಲಕ್ಕನಗೌಡರ, ವಿನೋದ ಪಾಟೀಲ, ಬಸವರಾಜ ಕುಂಬಾರ ಹಾಗೂ ವಿವಿಧ ಗ್ರಾಮಗಳ ಬೋಧಕರು ಉಪಸ್ಥಿತರಿದ್ದರು.