Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ : ಉಟಗಿ

ಹಸಿರು ಕ್ರಾಂತಿ ವರದಿಜಮಖಂಡಿ. ಶಿಕ್ಷಕ ವೃತ್ತಿ ಎಲ್ಲಾ ವೃತ್ತಿಗಳಲ್ಲಿ ಅತ್ಯಂತ ಶ್ರೇಷ್ಠವಾದ ವೃತ್ತಿಯಾಗಿದೆ. ವಿದ್ಯಾರ್ಥಿಗಳ ಪಾಲಿನ ಮಾರ್ಗದರ್ಶಕರಾಗಿ ವಿದ್ಯಾರ್ಥಿಗಳ ಜೀವನವನ್ನು ರೂಪಿಸುವ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದು ಶಿಕ್ಷಕ ಸಂಗನಬಸವ ಉಟಗಿ ಹೇಳಿದರು.

  ಅವರು ಸಮೀಪದ ಕುಂಬಾರ ಹಳ್ಳ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ವಿದ್ಯಾರ್ಥಿಗಳು ಉತ್ತಮವಾದ ನಡತೆಯನ್ನು ಹೊಂದಿ ಏಕಾಗ್ರತೆಯಿಂದ ಓದಿದರೆ ಜೀವನವನ್ನು ರೂಪಿಸಿಕೊಳ್ಳಬಹುದು ಎಂದು ಹೇಳಿದರು. ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರವಿದ್ದು ಪುಸ್ತಕದ ಕಡೆ ಹೆಚ್ಚು ಗಮನಹರಿಸಿ ಹೆಚ್ಚು ಅಂಕಗಳನ್ನು ಗಳಿಸಲು ಪ್ರಯತ್ನಿಸಬೇಕು ಆಗ ಮಾತ್ರ ತಂದೆ ತಾಯಿಗಳ ಹಾಗೂ ಶಿಕ್ಷಕರಿಗೆ ನೀವು ಕೊಡುವ ದೊಡ್ಡ ಬಹುಮಾನವಾಗಿದೆ ಎಂದು ಹೇಳಿದರು.

   ದೈಹಿಕ ಶಿಕ್ಷಕ ಬಾಹುಬಲಿ ಮುತ್ತೂರ ಮಾತನಾಡಿ ವಿದ್ಯಾರ್ಥಿಗಳು ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಿ ಎಲ್ಲರೊಂದಿಗೆ ಬೆರೆತು ಚೆನ್ನಾಗಿ ಓದಿದಲ್ಲಿ ಮಾತ್ರ ಸಮಾಜದಲ್ಲಿ ಗೌರವಯುತವಾಗಿ ಬದುಕಬಹುದು ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿದ ಹಿರಿಯ ಶಿಕ್ಷಕ ಸಂಜೀವ್ ಝಂಬುರೆ, ಶಿಕ್ಷಕಿ ಶಕುಂತಲಾ ಬಿರಾದಾರ, ಸವಿತಾ ಬೆನಕಟ್ಟಿ ಮಾತನಾಡಿದರು.

    ಶಾಲೆಯ ವಿದ್ಯಾರ್ಥಿಗಳೆಲ್ಲರೂ ಸೇರಿ ಶಿಕ್ಷಕರಿಗೆ ವಿವಿಧ ಬಗೆಯ ಆಟಗಳನ್ನು ಆಡಿಸಿ ಬಹುಮಾನವನ್ನು ವಿತರಿಸಿದರು.

  ಶಿಕ್ಷಕ ದಿನಾಚರಣೆಯ ಕುರಿತು ವಿದ್ಯಾರ್ಥಿಗಳಾದ ಪೂಜಾ ಚಿಗರಿ, ಶೈಹೀನಾ ಬೇಗಂ ನದಾಫ್, ಸಹನಾ ಕಡಪಟ್ಟಿ, ಚೈತ್ರ ತೇರದಾಳ, ವೀರೇಶ್ ಸೊನ್ನದ್, ಶ್ರೀಶೈಲ್ ಮಾಳಿ, ಧನಶ್ರೀ ಬೀಳಗಿ, ಪೂಜಾ ಜಕನೂರ್, ಸುಧಾ ದಡ್ಡಿಮನಿ, ರೇಷ್ಮಾ ನದಾಫ್ ಮುಂತಾದ ವಿದ್ಯಾರ್ಥಿಗಳು ಶಿಕ್ಷಕರ ಕುರಿತು ಅನಿಸಿಕೆಗಳನ್ನು  ಹಂಚಿಕೊಂಡರು.

  ಕಾರ್ಯಕ್ರಮದಲ್ಲಿ ಶಿಕ್ಷಕರಾದ ಚಂದ್ರಕಾಂತ ಪೊಲೀಸ್, ಆಶಿಫಾ ಭಾನು ಮೋಮಿನ್ ಉಪಸ್ಥಿತರಿದ್ದರು.

  ಕಾರ್ಯಕ್ರಮವನ್ನು ಕುಮಾರಿ ಸನ್ಮತಿ ಶಿರಹಟ್ಟಿ ನಡೆಸಿಕೊಟ್ಟರು. ಕುಮಾರಿ ನಿಂಗವ್ವ ಮರನೂರ ಸ್ವಾಗತಿಸಿದಳು. ಕುಮಾರ ಸಾಗರ್ ಕುರಣಿ ವಂದಿಸಿದನು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ