Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮರ್ಪಣಾ ಭಾವದಿಂದ ಶಿಕ್ಷಕ ವೃತ್ತಿಯನ್ನು ನಿರ್ವಹಿಸಬೇಕು : ಎಸ್.ಆರ್.ಬೆಳಗಲಿ

ಮೂಡಲಗಿ : ಇಂದಿನ ಸ್ಪರ್ಧಾತ್ಮಕ ಮತ್ತು ಒತ್ತಡಭರಿತ ಯುಗದಲ್ಲಿ ಶಿಕ್ಷಕರು, ತಮ್ಮ ವೃತ್ತಿಯನ್ನು ಕೇವಲ ಉದ್ಯೋಗವೆಂದು ಪರಿಗಣಿಸದೆ, ಕಾಯಾ-ವಾಚಾ-ಮನಸಾ ಸಮರ್ಪಣಾ ಭಾವದಿಂದ ಆತ್ಮತೃಪ್ತಿಗಾಗಿ ವೃತ್ತಿಯನ್ನು ನಿರ್ವಹಿಸಬೇಕು ಎಂದು ಶಿಕ್ಷಕರು, ಅಧ್ಯಾತ್ಮ ಪ್ರವಚನಕಾರರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಎಸ್.ಆರ್.ಬೆಳಗಲಿ ಹೇಳಿದರು. 

ತಾಲೂಕಿನ ಜೋಕಾನಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯೋಗಿಸಿದ್ದೇಶ್ವರ ತೋಟ, ಶಾಲೆಯಲ್ಲಿ ಆಯೋಜಿಸಲಾದ ವಾರದ ಅತಿಥಿ ಕಾರ್ಯಕ್ರಮದ ಅಂಗವಾಗಿ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಗಾರದಲ್ಲಿ ಮುಖ್ಯ ಆತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಕರ ವ್ಯಕ್ತಿತ್ವ, ನಡವಳಿಕೆ ಮತ್ತು ಮೌಲ್ಯಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ. ವಿದ್ಯಾರ್ಥಿಗಳು ಕೂಡ ಗುರುವಿನ ಮೇಲೆ ವಿಶ್ವಾಸ, ಗೌರವ ಮತ್ತು ಭಕ್ತಿಯನ್ನು ಬೆಳೆಸಿಕೊಂಡು ನಿರಂತರ ಅಭ್ಯಾಸ, ಶಿಸ್ತು, ಸಮಯಪಾಲನೆ ಮತ್ತು ಸಕಾರಾತ್ಮಕ ಚಿಂತನೆಯಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸುತ್ತ, ಶಿಕ್ಷಕರಿಗೆ ವ್ಯಕ್ತಿತ್ವ ವಿಕಸನದ ಕುರಿತು ಸಮಗ್ರ ಮಾರ್ಗದರ್ಶನ ನೀಡಿದರು.  

ಕಾರ್ಯಗಾರದಲ್ಲಿ ಶಿಕ್ಷಕರಾದ ಈರಣ್ಣ ನಿಡುಗುಂದಿ, ಜಯಶ್ರೀ ಪೂಜಾರಿ, ಚೈತ್ರ ಗಿರೆನ್ನವರ, ನಿರ್ಮಲಾ ಯಡ್ರಾವಿ ಹಾಗೂ ಸವಿತಾ ಮಾದರ ಉಪಸ್ಥಿತರಿದ್ದರು. ಶಿಕ್ಷಕರ ವೃತ್ತಿಪರ ಕೌಶಲ್ಯ, ಮಾನವೀಯ ಮೌಲ್ಯಗಳು ಹಾಗೂ ವಿದ್ಯಾರ್ಥಿ ಕೇಂದ್ರಿತ ಬೋಧನಾ ವಿಧಾನಗಳ ಕುರಿತು ನಡೆದ ಚರ್ಚೆಗಳು ಕಾರ್ಯಗಾರಕ್ಕೆ ವಿಶೇಷ ಮೆರುಗು ನೀಡಿದವು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯ ವಿವಾಹ ಸಾಮಾಜಿಕ ಅನಿಷ, ಎಲ್ಲಾ ಇಲಾಖೆ ಸಮುದಾಯದ ಸಹಕಾರದಿಂದ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಿಸಿಬೇಕಾಗಿದೆ: ಮಂಜುನಾಥ ನಾಯಕಶ್ರೀ ಗ್ರಾಮದೇವತೆ(ದ್ಯಾಮವ್ವ)ದೇವಿಯ ಜಾತ್ರೋತ್ಸವಸಂಗೀತದ ಮೂಲಕ ಸಮಾಜವನ್ನು ತಿದ್ದುವ ಕೆಲಸವಾಗಬೇಕು: ಆರ್ ಆರ್ ಕುಲಕರ್ಣಿ ಜುಲೈ ೨೦ರಂದು ಪತ್ರಿಕಾ ದಿನಾಚರಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ  ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ಶಿವಯೋಗದ ಮಹಾಪರ್ವತ ಶ್ರೀಮುರುಘೇಂದ್ರ ಶಿವಯೋಗಿಗಳು : ಡಾ.ಶಂಭುಲಿಂಗ ಹೆಗಡಾಳ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ನಿಯೋಗ ಮನವರಿಕೆ: 93 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಒಪ್ಪಿದ KHB ಅಧಿಕಾರಿಗಳು ಅಛಲ ನಿರ್ಧಾರ ದೊಂದಿಗೆ ಅಧ್ಯಯನ ಮಾಡಿದರೆ ಜೀವನದಲ್ಲಿ ಯಶಸ್ಸು : ಸಾಲಿಮಠಮಾದ್ಯಮರತ್ನ ರಾಜ್ಯ ಪ್ರಶಸ್ತಿಗೆ ಘೋರ್ಪಡೆ ಆಯ್ಕೆ ಭೀಮಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಮನವಿ