Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾನ್ ನಾಯಕರ ಜಯಂತಿಗೆ ಎಲ್ಲರ ಸಹಕಾರ ಅಗತ್ಯ : ತಹಶೀಲ್ದಾರ್ ರವೀಂದ್ರ ಹಾದಿಮನಿ..!

ಕಾಗವಾಡ: ದೇಶದ ಮಾಹಾನ ನಾಯಕರ ಜಯಂತಿಗಳನ್ನು ಆಚರಿಸುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ದೇಶಕ್ಕೆ ಅವರು ನೀಡಿರುವ ತ್ಯಾಗ, ಕೊಡುಗೆ, ಹಾಗೂ ಆದರ್ಶಗಳನ್ನು ತಿಳಿಸುವ ಅಗತ್ಯ ಇದ್ದು, ತಾಲೂಕಾಡಳಿತದ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ, ಜಯಂತಿಗಳನ್ನು ಅದ್ದೂರಿಯಾಗಿ ಆಚರಿಸಬೇಕೆಂದು ತಹಶಿಲ್ದಾರ ರವೀಂದ್ರ ಹಾದಿಮನಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಅವರು ಬುಧವಾರ ದಿ. 01 ರಂದು ಪಟ್ಟಣದ ಡಾ.ಅಂಬೇಡ್ಕರ್ ಸಭಾ ಭವನದಲ್ಲಿ ಡಾ. ಜಗಜೀವನರಾಮ ಹಾಗೂ ಡಾ.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಿದ್ದರು. ಜಯಂತಿಗಳ ಆಚರಣೆಯಲ್ಲಿ ತಾಲೂಕಿನ ಎಲ್ಲ ಮುಖಂಡರು, ಸಂಘಟನೆಗಳು, ಅಧಿಕಾರಿಗಳು ಸಹಕಾರದೊಂದಿಗೆ ಭಾಗವಹಿಸಿದಾಗ ಮಾತ್ರ ಜಯಂತಿಗಳು ಅರ್ಥಪೂರ್ಣವಾಗಲಿವೆ ಎಂದು ಹೇಳಿದರು.

ಇನ್ನೂ ಸಭೆಗೆ ನೀರಾವರಿ, ಅಬಕಾರಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಅನೇಕ ಅಧಿಕಾರಿಗಳು ಗೈರು ಹಾಜರಾಗಿರುವ ಬಗ್ಗೆ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಇರುವ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಅಧಿಕಾರಿಗಳು ಸಭೆಗೆ ಗೈರು ಆಗುತ್ತಾರೆ. ಇದು ಅವರಿಗೆ ಇರುವ ನಿಸ್ಸಕಾಳಜಿಯನ್ನು ತೋರಿಸುತ್ತದೆ. ಅಧಿಕಾರಿಗಳು ಬಾರದೆ ಇದ್ದರೆ ಸಭೆ ಯಾಕೆ ನಡೆಸುತ್ತಿರಿ ಎಂದು ಮುಖಂಡ ವಿವೇಕ ಕರ್ಪೆ ಆಕ್ರೋಶ ವ್ಯಕ್ತಪಡಿಸಿದರು. ಅವರ ವಿರುದ್ಧ ಶಿಸ್ತು ಕ್ರಮ ಆಗಲೇ ಬೇಕು ಎಂದು ಒತ್ತಾಯಿಸಿದರು.

ಈ ವೇಳೆ ತಾ.ಪಂ. ಇಒ ವೀರಣ್ಣ ವಾಲಿ, ಉಪತಶಿಲ್ದಾರ್ ರಶ್ಮಿ ಜಕಾತಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪರಶುರಾಮ ಪತ್ತಾರ, ಐನಾಪುರ ಪಂಚಾಯಿತಿ ಮುಖ್ಯಾಧಿಕಾರಿ ಮಹಾಂತೇಶ ಕವಲಾಪುರ, ಕಾಗವಾಡ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಪ್ರಸನ್ನ ಕಲ್ಯಾಣಶೆಟ್ಟಿ, ಪಿಎಸ್ಐ ರಾಘವೇಂದ್ರ ಖೋತ, ಮಲ್ಲಿಕಾರ್ಜುನ ಮಗದುಮ್ಮ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ದಲಿತ ಮುಖಂಡರಾದ ಸಂಜಯ ತಳವಲ್ಕರ, ಸಚೀನ ಪೂಜಾರಿ, ದೀಪಕ ಕಾಂಬಳೆ, ಜಯಪಲಾ ಬಡಿಗೇರ, ವಿದ್ಯಾಧರ ದೋಂಡರೆ, ಅಶೋಕ ಕಾಂಬಳೆ, ದಯಾನಂದ ಕೆರೂರೆ, ವಿವೇಕ ಕರ್ಪೆ, ವೆಂಕಟೇಶ್ ಕಾಂಬಳೆ, ವಿಜಯ ಅಸೂದೆ, ಹನುಮಂತ ಮದಾಳೆ ಸೇರಿದಂತೆ ಅನೇಕರು ಇದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ