ವಿದೇಶಾಂಗ ಸಚಿವರಿಗೆ ಸಿಆರ್ಪಿಎಫ್ ಕಮಾಂಡೋಗಳು ಭದ್ರತೆ ಒದಗಿಸುತ್ತಾರೆ. ಇದರಲ್ಲಿ, 33 ಕಮಾಂಡೋಗಳು ಅವರ ಸುತ್ತಮುತ್ತಲಿರುತ್ತಾರೆ. ಅಕ್ಟೋಬರ್ 2023 ರಲ್ಲಿ ಅವರ ಭದ್ರತೆಯನ್ನು Y-ವರ್ಗದಿಂದ Z-ವರ್ಗಕ್ಕೆ ಭದ್ರತೆ ಹೆಚ್ಚಿಸಲಾಗಿತ್ತು.
ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಿರುವ ಸಮಯದಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಷ್ಟೇ ಅಲ್ಲ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಿಒಕೆ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು .