LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ 23 ಜನರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಭಯೋತ್ಪಾದಕರು

ಕ್ವೆಟ್ಟಾ: ಬಂದೂಕುಧಾರಿಗಳು ಟ್ರಕ್‌ ಮತ್ತು ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ 23 ಜನರನ್ನು ಕೆಳಗಿಳಿಸಿ, ಅವರ ಜನಾಂಗೀಯತೆ ಪರಿಶೀಲಿಸಿ ಗುಂಡಿಕ್ಕಿ ಹತ್ಯೆ ಮಾಡಿರುವ ಭೀಕರ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

ಭದ್ರತಾ ಪಡೆಗಳು, ಪಂಥೀಯ, ಜನಾಂಗೀಯ ಮತ್ತು ಪ್ರತ್ಯೇಕತಾವಾದಿ ಹಿಂಸಾಚಾರದ ವಿರುದ್ಧ ಹೋರಾಡುತ್ತಿರುವ ಬಲೂಚಿಸ್ತಾನ್ ಪ್ರಾಂತ್ಯದ ಮುಸಾಖೈಲ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಈ ದಾಳಿ ನಡೆದಿದೆ. ದಾಳಿಕೋರರು ಘಟನಾ ಸ್ಥಳದಿಂದ ಪರಾರಿಯಾಗುವುದಕ್ಕೂ ಮುನ್ನ 10 ವಾಹನಗಳನ್ನು ಸುಟ್ಟುಹಾಕಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

"ಪಾಕಿಸ್ತಾನದ ಪಂಜಾಬ್‌ನಿಂದ ಬಲೂಚಿಸ್ತಾನ್‌ಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಭಯೋತ್ಪಾದಕರು, ಹಲವು ಬಸ್‌ಗಳು, ಟ್ರಕ್‌ ಮತ್ತು ವ್ಯಾನ್‌ಗಳನ್ನು ತಡೆದು ಕನಿಷ್ಠ 23 ಜನರು ಹತ್ಯೆ ಮಾಡಿದ್ದಾರೆ ಮತ್ತು 5 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಂಜಾಬ್​ಗೆ ಕಡೆಗೆ ತೆರಳುವ ವಾಹನಗಳನ್ನು ಪರಿಶೀಲಿಸಿ, ಅದರಲ್ಲಿದ್ದ ಪಂಜಾಬ್​ ಜನರನ್ನು ಗುರುತಿಸಿ ಗುಂಡಿಕ್ಕಿ ಕೊಲ್ಲಲಾಗಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಪಂಜಾಬಿನ ಕಾರ್ಮಿಕರಾಗಿದ್ದಾರೆ" ಎಂದು ಮುಸಾಖೈಲ್‌ ಜಿಲ್ಲೆಯ ಹಿರಿಯ ಅಧಿಕಾರಿ ನಜಿಬುಲ್ಲಾ ಕಾಕರ್ ತಿಳಿಸಿದ್ದಾರೆ.

ಜಿಲ್ಲೆಯ ಮತ್ತೋರ್ವ ಹಿರಿಯ ಅಧಿಕಾರಿ ಹಮೀದ್ ಜೆಹ್ರಿ ಪ್ರತಿಕ್ರಿಯಿಸಿ, "ಘಟನೆಯ ಹಿಂದೆ ಬಿಎಲ್‌ಎ (ಬಲೂಚ್ ಲಿಬರೇಶನ್ ಆರ್ಮಿ) ಭಯೋತ್ಪಾದಕರು ಇದ್ದಾರೆ ಎಂದು ಮೇಲ್ನೋಟಕ್ಕೆ ತೋರುತ್ತದೆ" ಎಂದು ಶಂಕಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್