Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಯುಪಡೆ ಅಧಿಕಾರಿಗಳ ಸಮವಸ್ತ್ರ ಕದ್ದು ಧರಿಸಿದ್ದ ಇಬ್ಬರ ಬಂಧನ


ಪಟಿಯಾಲ (ಪಂಜಾಬ್‌): ಭಾರತೀಯ ವಾಯುಪಡೆಯ ಸಮವಸ್ತ್ರಗಳನ್ನು ಕದ್ದು ಧರಿಸಿಕೊಂಡು ಐಎಎಫ್ ಸಿಬ್ಬಂದಿ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ ಇಬ್ಬರನ್ನು ಪಂಜಾಬ್‌ನ ಪಟಿಯಾಲಾದ ಜಿರಾಕ್‌ಪುರದಲ್ಲಿ ಬಂಧಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಮಧ್ಯೆ ಸೇನಾ ಡ್ರೆಸ್​ನಲ್ಲಿ ಅಧಿಕಾರಿಗಳಂತೆ ಸುತ್ತಾಡುತ್ತಿದ್ದ ಇಬ್ಬರು ಖದೀಮರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.


ವಾಯುಪಡೆಯ ಸಮವಸ್ತ್ರಗಳನ್ನು ಕದ್ದಿದ್ದ ಆರೋಪಿಗಳು, ಬಳಿಕ ಅದನ್ನು ಧರಿಸಿ ಬೀದಿಗಳಲ್ಲಿ ಸುತ್ತಾಡುತ್ತಿದ್ದರು. ಜಿರಾಕ್‌ಪುರ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪಟಿಯಾಲದ ಜಿರಾಕ್‌ಪುರದ ಡಿಎಸ್‌ಪಿ ಜಸ್ಪಿಂದರ್ ಸಿಂಗ್ ಗಿಲ್​ ಮಾಹಿತಿ ನೀಡಿದ್ದಾರೆ.












ಜಿರಾಕ್‌ಪುರ ನಿವಾಸಿಗಳಾದ ಸುಖ್‌ಪ್ರೀತ್ ಸಿಂಗ್ ಮತ್ತು ಸುಖ್‌ಬೀರ್ ಸಿಂಗ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಅವರಲ್ಲಿ ಸುಖ್‌ಪ್ರೀತ್ ಸಿಂಗ್ ವಾಯುಪಡೆಯ ಸಮವಸ್ತ್ರ ಧರಿಸಿದ್ದರು. ಈ ಸಮವಸ್ತ್ರವು ಗುಜರಾತ್‌ನ ವಾಯುಪಡೆ ಅಧಿಕಾರಿಯೊಬ್ಬರಿಗೆ ಸೇರಿದ್ದಾಗಿದೆ. ಸೇನೆ ಮತ್ತು ವಾಯುಪಡೆಯ ಸಮವಸ್ತ್ರಗಳನ್ನು ಹೊಲಿಯುವ ಜಿರಾಕ್‌ಪುರದ ಪಕ್ಕದಲ್ಲಿರುವ ಹಳ್ಳಿಯ ದರ್ಜಿಯೊಬ್ಬರು ಈ ಸಮವಸ್ತ್ರವನ್ನು ಕೊರಿಯರ್ ಮೂಲಕ ಕಳಿಸಿದ್ದರು. ಆದರೆ ಈ ಇಬ್ಬರೂ ಆರೋಪಿಗಳು ಮೇ 5ರ ರಾತ್ರಿ ಕೊರಿಯರ್ ಕಚೇರಿಯಿಂದಲೇ ಸಮವಸ್ತ್ರವನ್ನು ಕದ್ದಿದ್ದರು. ಇಬ್ಬರೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಇದೇ ವೇಳೆ, ಪೊಲೀಸರು ಕೊರಿಯರ್ ಸಿಬ್ಬಂದಿಯನ್ನೂ ವಿಚಾರಣೆ ಮಾಡುತ್ತಿದ್ದಾರೆ ಎಂದು ಡಿಎಸ್‌ಪಿ ಗಿಲ್ ಮಾಹಿತಿ ನೀಡಿದರು.

Advertisement


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*