Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣವೇಷಧಾರಿಗಳ ಆಕರ್ಷಕ ಪಥಸಂಚಲನ: ಹೂಮಳೆ ಸುರಿಸಿ ಸಂಭ್ರಮ



ಸವದತ್ತಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪನೆಯ ಶತಮಾನೋತ್ಸವ ಹಾಗೂ ವಿಜಯದಶಮಿ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಭಾನುವಾರ ಜರುಗಿದ ಗಣವೇಷಧಾರಿ ಗಳ ಆಕರ್ಷಕ ಪಥಸಂಚಲನಕ್ಕೆ ಸ್ಥಳೀಯರು ಜೆಸಿಬಿ ಮೂಲಕ ಹೂಮಳೆ ಸುರಿಸಿ ಸಂಭ್ರಮಿಸಿದರು.

ಎಪಿಎಂಸಿ ಆವರಣದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ನಂತರ ಆರ್‌ಎಸ್‌ಎಸ್ ಪ್ರಮುಖ ನರಸಿಂಹ ಕುಲಕರ್ಣಿ ನೇತೃತ್ವದಲ್ಲಿ ಆರಂಭವಾದ ವಿಜಯದಶಮಿ ಪಥ ಸಂಚಲನ ಹೊಸಪೇಟಿ ಓಣಿ, ಕಟಕೋಳ ಬ್ಯಾಂಕ ವೃತ್ತ, ಆನಿ ಅಗಸಿ, ಬಜಾರ ಮಾರ್ಗವಾಗಿ -ಎ???ಲ್‌ಎಒಕ್ರಾಸ್ ಮೂಲಕ ತಾಲ್ಲೂಕು ಕ್ರೀಡಾಂಗಣ ತಲುಪಿತು.

ಸ್ಥಳೀಯ ಮತ್ತು ತಾಲ್ಲೂಕಿನ ವಿವಿಧೆಡೆಯಿಂದ ಆಗಮಿಸಿದ ಸುಮಾರು ೫೦೦ಕ್ಕೂ ಅಧಿಕ ಗಣವೇಶಧಾರಿಗಳ ಪಥ ಸಂಚಲನ ನೋಡುಗರನ್ನು ಸೆಳೆಯಿತು. ತೆರೆದ ವಾಹನದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಡೆವಾರ್, ಮಾಧವರಾವ್ ಸದಾಶಿವರಾವ್ ಗೋಲವಾಲ್ಕರ್ ಅವರ ಚಿತ್ರವಿರಿಸಿಮೆರವಣಿಗೆ ನಡೆಸಲಾಯಿತು.

ತಾಲ್ಲೂಕು ಕ್ರೀಡಾಂಗಣದಲ್ಲಿ ಸಂಜೆ ಸಭೆ ಜರುಗಿತು. ಸ್ಥಳೀಯ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ವಿರುಪಾಕ್ಷ ಮಾಮನಿ ಗಣವೇಶಧಾರಿಯಾಗಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದು ಯುವಕ ರಲ್ಲಿ ಉತ್ಸಾಹ ಹೆಚ್ಚಿಸಿತು.

ಉಮೇಶ ಶಿಗ್ಲಿ, ಜಿ.ವಾಯ್. ಕರಮಲ್ಲನವರ, ಶಿವಾನಂದ ಸರದಾರ, ಶಂಕರ ವಣ್ಣೂರ, ಹೇಮಂತ ಭಸ್ಮ, ಈಶ್ವರ ಮೇಲಗಿರಿ ಇದ್ದರು. ಸವದತ್ತಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಹಾಗೂ ವಿಜಯದಶಮಿ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಗಣವೇಷಧಾರಿಗಳು ಪಥ ಸಂಚಲನ ನಡೆಸಿದರು

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ