Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಮ್ಯೂನಿಸ್ಟ್ ಮೈಂಡ್​ಸೆಟ್​ನ ಸ್ವಾಮೀಜಿಗಳಿಂದ ಹಿಂದೂ ಧರ್ಮ ಛಿದ್ರಗೊಳಿಸುವ ಸಂಚು: ಶಾಸಕ ಯತ್ನಾಳ್‌

ಹುಬ್ಬಳ್ಳಿ, ಸೆಪ್ಟೆಂಬರ್ 19: ಕೆಲವು ಮಂದಿ ಕಮ್ಯೂನಿಸ್ಟ್ ಮೈಂಡ್​ಸೆಟ್​ನ ಸ್ವಾಮೀಜಿಗಳು ಹಿಂದೂ ಧರ್ಮದಿಂದ ಲಿಂಗಾಯತರ ದೂರ ಮಾಡಲು ಸಂಚು ಹೂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು. ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವಿನ ಸಾಮ್ಯತೆಗಳನ್ನು ಒತ್ತಿ ಹೇಳಿದರು. ದುರದೃಷ್ಟವಶಾತ್, ಕೆಲವು ಸ್ವಾಮೀಜಿಗಳು ತಮ್ಮ ಸ್ವಾರ್ಥಕ್ಕಾಗಿ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವೆ ಕಂದಕವನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು. ಈ ಸ್ವಾಮೀಜಿಗಳು ಲಿಂಗಾಯತ ಧರ್ಮ ಅಥವಾ ಶೈವರ ಉದ್ಧಾರದಲ್ಲಿ ಆಸಕ್ತಿ ಹೊಂದಿಲ್ಲ. ಬದಲಾಗಿ, ಅವರು ಇಡೀ ವೀರಶೈವ-ಲಿಂಗಾಯತ ಸಮುದಾಯವನ್ನು ಸನಾತನ ಹಿಂದೂ ಧರ್ಮದಿಂದ ದೂರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು.

ಹಿಂದೂ ಧರ್ಮದ ಪದ್ಧತಿಗಳು ಮತ್ತು ಆಚರಣೆಗಳನ್ನು ಅವಮಾನಿಸುವುದೇ ಕೆಲವು ಮಠಾಧೀಶರ ಉದ್ಯೋಗವಾಗಿದೆ. ಬಸವಣ್ಣನವರ ತತ್ವಗಳನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದು ಅವರಿಗೆ ಚಾಳಿಯಾಗಿಬಿಟ್ಟಿದೆ ಎಂದು ಯತ್ನಾಳ್ ಟೀಕಿಸಿದರು. ಅಲ್ಲದೇ, ಹಿಂದೂ ಧರ್ಮದ ಆಚರಣೆಗಳನ್ನು ಅಪಮಾನಿಸುವ ನೀವು, ಬಸವಣ್ಣನ ತತ್ವ ಅನುಸರಿವು ನೀವು ಪಾದ ಪೂಜೆ ಯಾಕೆ ಮಾಡಿಸಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು. ಲಿಂಗಾಯತ ಮತ್ತು ವೀರಶೈವ ಧರ್ಮಗಳು ಇನ್ನೂ ಭಾರತ ಸರ್ಕಾರದಿಂದ ಅಧಿಕೃತ ಮಾನ್ಯತೆಯನ್ನು ಪಡೆದಿಲ್ಲ ಎಂಬುದನ್ನೂ ಅವರು ಸ್ಪಷ್ಟಪಡಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ