LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಮ್ಯೂನಿಸ್ಟ್ ಮೈಂಡ್​ಸೆಟ್​ನ ಸ್ವಾಮೀಜಿಗಳಿಂದ ಹಿಂದೂ ಧರ್ಮ ಛಿದ್ರಗೊಳಿಸುವ ಸಂಚು: ಶಾಸಕ ಯತ್ನಾಳ್‌

ಹುಬ್ಬಳ್ಳಿ, ಸೆಪ್ಟೆಂಬರ್ 19: ಕೆಲವು ಮಂದಿ ಕಮ್ಯೂನಿಸ್ಟ್ ಮೈಂಡ್​ಸೆಟ್​ನ ಸ್ವಾಮೀಜಿಗಳು ಹಿಂದೂ ಧರ್ಮದಿಂದ ಲಿಂಗಾಯತರ ದೂರ ಮಾಡಲು ಸಂಚು ಹೂಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು. ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವಿನ ಸಾಮ್ಯತೆಗಳನ್ನು ಒತ್ತಿ ಹೇಳಿದರು. ದುರದೃಷ್ಟವಶಾತ್, ಕೆಲವು ಸ್ವಾಮೀಜಿಗಳು ತಮ್ಮ ಸ್ವಾರ್ಥಕ್ಕಾಗಿ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ನಡುವೆ ಕಂದಕವನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು. ಈ ಸ್ವಾಮೀಜಿಗಳು ಲಿಂಗಾಯತ ಧರ್ಮ ಅಥವಾ ಶೈವರ ಉದ್ಧಾರದಲ್ಲಿ ಆಸಕ್ತಿ ಹೊಂದಿಲ್ಲ. ಬದಲಾಗಿ, ಅವರು ಇಡೀ ವೀರಶೈವ-ಲಿಂಗಾಯತ ಸಮುದಾಯವನ್ನು ಸನಾತನ ಹಿಂದೂ ಧರ್ಮದಿಂದ ದೂರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದರು.

ಹಿಂದೂ ಧರ್ಮದ ಪದ್ಧತಿಗಳು ಮತ್ತು ಆಚರಣೆಗಳನ್ನು ಅವಮಾನಿಸುವುದೇ ಕೆಲವು ಮಠಾಧೀಶರ ಉದ್ಯೋಗವಾಗಿದೆ. ಬಸವಣ್ಣನವರ ತತ್ವಗಳನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದು ಅವರಿಗೆ ಚಾಳಿಯಾಗಿಬಿಟ್ಟಿದೆ ಎಂದು ಯತ್ನಾಳ್ ಟೀಕಿಸಿದರು. ಅಲ್ಲದೇ, ಹಿಂದೂ ಧರ್ಮದ ಆಚರಣೆಗಳನ್ನು ಅಪಮಾನಿಸುವ ನೀವು, ಬಸವಣ್ಣನ ತತ್ವ ಅನುಸರಿವು ನೀವು ಪಾದ ಪೂಜೆ ಯಾಕೆ ಮಾಡಿಸಿಕೊಳ್ಳುತ್ತೀರಿ ಎಂದು ಪ್ರಶ್ನಿಸಿದರು. ಲಿಂಗಾಯತ ಮತ್ತು ವೀರಶೈವ ಧರ್ಮಗಳು ಇನ್ನೂ ಭಾರತ ಸರ್ಕಾರದಿಂದ ಅಧಿಕೃತ ಮಾನ್ಯತೆಯನ್ನು ಪಡೆದಿಲ್ಲ ಎಂಬುದನ್ನೂ ಅವರು ಸ್ಪಷ್ಟಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ