Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಬಾಬಾಸಾಹೇಬರ ತತ್ವಗಳನ್ನು ಅಳವಡಿಸಿಕೊಂಡಾಗ ಮಾತ್ರ ದಿನಾಚರಣೆಗೆ ನಿಜವಾದ ಅರ್ಥ"

ಮೂಡಲಗಿ : ಬಾಬಾಸಾಹೇಬರು ನಮ್ಮನ್ನು ದೈಹಿಕವಾಗಿ ಅಗಲಿದ್ದರೂ, ಅವರು ಕೊಟ್ಟ ಸಂವಿಧಾನ ಮತ್ತು ಅವರ ವಿಚಾರಗಳು ಇಂದಿಗೂ ನಮ್ಮನ್ನು ಮುನ್ನಡೆಸುತ್ತಿವೆ. ನಾವು ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಈ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ ಹೇಳಿದರು

ಮಂಗಳವಾರದಂದು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಅರಭಾವಿ ಮಂಡಲ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಬೇಡ್ಕರರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಏಪ್ರಿಲ್ 14, 1891 ರಂದು ಮಧ್ಯಪ್ರದೇಶದ ಮಾಹೂ ಎಂಬಲ್ಲಿ ಜನಿಸಿದ ಅಂಬೇಡ್ಕರರವರು, ಬಾಲ್ಯದಲ್ಲಿ ಅನುಭವಿಸಿದ ಜಾತಿ ತಾರತಮ್ಯ ಮತ್ತು ಅವಮಾನಗಳು ಅವರನ್ನು ಕುಗ್ಗಿಸಲಿಲ್ಲ, ಬದಲಿಗೆ ಅವು ಅವರನ್ನು ಶಕ್ತಿಯುತವಾಗಿಸಿದವು. ಶಿಕ್ಷಣವೇ ಶಕ್ತಿ ಎಂದು ನಂಬಿದ ಮಹಾನುಭಾವ ಬಾಬಾಸಾಹೇಬರು ವಿದ್ಯೆಗೆ ನೀಡಿದ ಮಹತ್ವ ಅಸಾಮಾನ್ಯ. ಅರ್ಥಶಾಸ್ತ್ರ, ಕಾನೂನು, ರಾಜ್ಯಶಾಸ್ತ್ರ, ಸಮಾಜಶಾಸ್ತದಂತಹ ಹಲವು ವಿಷಯಗಳಲ್ಲಿ ಪಾಂಡಿತ್ಯ ಪಡೆದ ಕೆಲವೇ ಕೆಲವು ಭಾರತೀಯರಲ್ಲಿ ಅವರು ಒಬ್ಬರು. "ಶಿಕ್ಷಣ ಪಡೆಯಿರಿ, ಸಂಘಟಿತರಾಗಿ ಹೋರಾಡಿ" ಎಂಬ ಅವರ ಮಂತ್ರ ಇಂದಿಗೂ ಲಕ್ಷಾಂತರ ಜನರಿಗೆ ದಾರಿದೀಪವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಕಲ್ಮೇಶ ಗೋಕಾಕ್, ಡಾ.ಬಸವರಾಜ ಪಾಲಬಾಂವಿ, ಪಾಂಡು ಮಹೇಂದ್ರಕರ, ಕೇದಾರಿ ಭಸ್ಮೆ, ಚಂದ್ರಶೇಖರ್ ಪತ್ತಾರ್, ಶ್ರೀಶೈಲ ಶೇಕ್ಕಿ, ಮಲ್ಲಿಕಾರ್ಜುನ ಬೆಳ್ಳೆಶಿ, ಪ್ರಭು ಹಡಪದ, ಚೇತನ್ ನಿಶಾನಿಮಠ, ಬಸವರಾಜ್ ಶೇಕ್ಕಿ, ಶಿವು ಗೋಕಾಕ್, ಅರ್ಷದ ಡಾಂಗೆ, ಭೀಮಶಿ ಬಡಿಗೇರ ಸೇರಿದಂತೆ ಅನೇಕ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ