Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾಕುಂಭವು ಪೂರ್ವ ನಿರ್ಧಾರಿತವಾದಂತೆ ಫೆಬ್ರವರಿ 26ರಂದು ಸಮಾಪ್ತಿ

ಮಹಾಕುಂಭ ನಗರ (ಉತ್ತರ ಪ್ರದೇಶ): ಪ್ರಯಾಗ್​ರಾಜ್​ನಲ್ಲಿ 144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಸಾಗರೋಪಾದಿಯಲ್ಲಿ ಕೋಟ್ಯಂತರ ಭಕ್ತರು ಆಗಮಿಸುತ್ತಿದ್ದಾರೆ. ಭಾರಿ ಜನದಟ್ಟಣೆ ಹಿನ್ನೆಲೆಯಲ್ಲಿ ಮಹಾಕುಂಭಮೇಳವನ್ನು ಪೂರ್ವ ನಿರ್ಧರಿತ ದಿನಾಂಕದಂದು ಮುಗಿಸದೇ, ವಿಸ್ತರಣೆ ಮಾಡಲಾಗುತ್ತಿದೆ ಎಂಬ ವದಂತಿಗಳು ಹರಡಿವೆ.


ಜನವರಿ 13ರಂದು ಆರಂಭಗೊಂಡಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಇದುವರೆಗೂ ನಿರೀಕ್ಷೆಗೂ ಮೀರಿ 50 ಕೋಟಿಗೂ ಅಧಿಕ ಜನರು ಭಾಗವಹಿಸಿ, ಪವಿತ್ರ ಸ್ನಾನ ಮಾಡಿದ್ದಾರೆ. ಅಲ್ಲದೇ, ಮಹಾಕುಂಭವು ಪೂರ್ವ ನಿರ್ಧಾರಿತವಾದಂತೆ ಫೆಬ್ರವರಿ 26ರಂದು ಸಮಾಪ್ತಿಯಾಗಲಿದೆ.


ಮಹಾಕುಂಭಮೇಳವು ವಿಸ್ತರಣೆ ಆಗಲಿದೆ ಎಂಬ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳನ್ನು ಪ್ರಯಾಗರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ರವೀಂದ್ರ ಮಂದರ್ ಮಂಗಳವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ''ಕಾರ್ಯಕ್ರಮದ ವೇಳಾಪಟ್ಟಿಯನ್ನು ಧಾರ್ಮಿಕ ಮುಹೂರ್ತಗಳನ್ನು (ಶುಭ ಸಮಯಗಳು) ಆಧರಿಸಿ ನಿರ್ಧರಿಸಲಾಗುತ್ತದೆ ಹಾಗೂ ಅದರಲ್ಲಿ ಯಾವುದೇ ಬದಲಾಣೆ ಇಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.


"ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆಗಳ ಪ್ರಕಾರ, ಆಡಳಿತವು ಎಲ್ಲ ಭಕ್ತರಿಗೆ ಸುಗಮ ಪ್ರಯಾಣ ಮತ್ತು ಇತರ ವ್ಯವಸ್ಥೆಗಳನ್ನು ಕಲ್ಪಿಸುತ್ತಿದೆ. ಮೇಳದ ದಿನಾಂಕ ವಿಸ್ತರಿಸಲು ಸರ್ಕಾರ ಅಥವಾ ಜಿಲ್ಲಾಡಳಿತದಿಂದ ಯಾವುದೇ ಪ್ರಸ್ತಾಪವಿಲ್ಲ. ಯಾತ್ರಿಕರು ಅಂತಹ ತಪ್ಪು ಮಾಹಿತಿ ನಂಬಬಾರದು" ಎಂದು ಡಿಎಂ ಹೇಳಿದ್ದಾರೆ.


''ತ್ರಿವೇಣಿ ಸಂಗಮದಲ್ಲಿ ಯಾವುದೇ ತೊಡಕುಗಳಿಲ್ಲದೇ ಪವಿತ್ರ ಸ್ನಾನ ಮಾಡಲು ಅನುಕೂಲವಾಗುವಂತೆ ಮಹಾಕುಂಭದ ಉಳಿದ ದಿನಗಳಲ್ಲಿಯೂ ಎಲ್ಲ ಅಗತ್ಯ ವ್ಯವಸ್ಥೆಗಳು ಮುಂದುವರೆಯಲಿದೆ. ಪ್ರಯಾಗ್‌ರಾಜ್‌ನಲ್ಲಿ ಭಕ್ತರ ಚಲನವಲನ ಮತ್ತು ಸಾಮಾನ್ಯ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳಲು ಆಡಳಿತವು ಸಂಚಾರ ನಿರ್ವಹಣೆಯತ್ತ ಗಮನಹರಿಸಿದೆ'' ಎಂದು ತಿಳಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ