LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹೊಸ ಸಮಾಜದ ಸ್ಥಾಪನೆಯೇ ಮಹಿಳಾ ವಿಮುಕ್ತಿಗೆ ದಾರಿ

ಬಳ್ಳಾರಿ,ಜು.23: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಬಳ್ಳಾರಿ ಜಿಲ್ಲಾ ಮಟ್ಟದ ಶಿಬಿರವನ್ನು ಎಐಎಂಎಸ್‌ಎಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. 
ಶಿಬಿರವನ್ನು ಉದ್ದೇಶಿಸಿ ಎಐಎಂಎಸ್‌ಎಸ್ ನ ರಾಜ್ಯಾಧ್ಯಕ್ಷೆ ಎಂ.ಎನ್.ಮAಜುಳಾ ಮಾತನಾಡುತ್ತಾ, “ಒಂದು ಸಮಾಜವು ಮುಂದುವರೆದಿದೆಯೋ ಇಲ್ಲವೋ ಎನ್ನುವುದನ್ನು ಅದು ಮಹಿಳೆಯ ಬಗ್ಗೆ ತಳೆಯುವ ಧೋರಣೆಯಿಂದ ತೀರ್ಮಾನಿಸಬಹುದು. ಇಂದಿನ ನಮ್ಮ ಸಮಾಜವನ್ನು ‘ನಾಗರಿಕ’ ಎಂದು ಕರೆಯಲು ಸಾಧ್ಯವೇ? ಇತ್ತೀಚಿನ ರಾಜಸ್ಥಾನ, ಪಶ್ಚಿಮ ಬಂಗಾಳ ಮತ್ತು ದಕ್ಷಿಣ ಕನ್ನಡದ ಬಂಟ್ಟಾಳದಲ್ಲಿ ನಡೆದ ಘಟನೆಗಳು ಈ ಪ್ರಶ್ನೆಯನ್ನು ಮತ್ತೆ ಮತ್ತೆ ನಮ್ಮ ಮುಂದೆ ತರುತ್ತಿವೆ. ಸ್ತಿçà ಭ್ರೂಣ ಹತ್ಯೆ, ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳ, ಮರ್ಯಾದೆಗೇಡು ಹತ್ಯೆ, ಬಾಲ ಗರ್ಭಿಣಿ ಸಮಸ್ಯೆ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ - ದೌರ್ಜನ್ಯ, ಸೈಬರ್ ಸ್ಟಾಕಿಂಗ್, ಆಸಿಡ್ ದಾಳಿ, ಡಿಜಿಟಲ್ ದಾಳಿಗಳು.... ಹೀಗೆ ಹಲವಾರು ಸಮಸ್ಯೆಗಳು ಹೆಣ್ಣು ಮಕ್ಕಳನ್ನು ಪ್ರತಿ ಕ್ಷಣವೂ  ಬಾಧಿಸುತ್ತಿವೆ. ಪರಿಸ್ಥಿತಿ ಹೀಗಿದ್ದರೂ ಸಹ ಆಳ್ವಿಕರು ನಮ್ಮ ದೇಶ ವೇಗವಾಗಿ ಮುನ್ನಡೆಯುತ್ತಿದೆ ಎಂದು ವರ್ಣರಂಜಿತ ಚಿತ್ರಣವನ್ನು ಮುಂದಿಡುತ್ತಿದ್ದಾರೆ. ಇದು ಯಾವ ಮುನ್ನಡೆ?  ಯಾವ ದಿಕ್ಕು? ದೇಶದ ಸ್ವಾತಂತ್ರ‍್ಯ ಸಂಗ್ರಾಮದ ಸಂದರ್ಭದಲ್ಲಿ ಊಳಿಗಮಾನ್ಯ ವ್ಯವಸ್ಥೆಯ ಹಳೆಯ ಮೌಲ್ಯಗಳ ವಿರುದ್ಧ ರಾಜಿ ರಹಿತ ಹೋರಾಟ ನಡೆದು ಉನ್ನತ ಪ್ರಜಾತಾಂತ್ರಿಕ, ಧರ್ಮನಿರಪೇಕ್ಷ ಮೌಲ್ಯಗಳ ಪ್ರವಾಹ ಮುನ್ನೆಲೆಗೆ ಬರಬೇಕಿತ್ತು. ಆದರೆ ಸ್ವಾತಂತ್ರ‍್ಯ ಹೋರಾಟದಲ್ಲಿ ಮೇಲುಗೈ ಪಡೆದಿದ್ದ ರಾಜಿಪರ ಪಂಥ ಈ ಮಹತ್ತರ ಕಾರ್ಯವನ್ನು ಕೈಗೆತ್ತಿಕೊಳ್ಳಲಿಲ್ಲ. ಹೀಗಾಗಿಯೇ ಜಾತಿ-ಲಿಂಗ-ಧರ್ಮ ಆಧಾರಿತ ಅಸಮಾನತೆ, ಪುರುಷಪ್ರಧಾನ ಧೋರಣೆ ಸಮಾಜದ ಮಾನಸಿಕತೆಯಲ್ಲಿ ಉಳಿದುಬಿಟ್ಟವು. ಇದರ ಜೊತೆಗೆ ಇಂದಿನ ಸಾಮಾಜಿಕ ಮಾಧ್ಯಮಗಳಲ್ಲಿ ಅವ್ಯಾಹತವಾಗಿ ಹರಿದಾಡುತ್ತಿರುವ ಅಶ್ಲೀಲತೆ, ಸುಲಭವಾಗಿ ಕೈಗೆಟುಕುವ ಮದ್ಯ-ಮಾದಕ ವಸ್ತುಗಳು ಎಲ್ಲರ ಮೇಲೂ ಕೆಟ್ಟ ಪ್ರಭಾವ ಬೀರುತ್ತಿವೆ. ಇದರ ಪರಿಣಾಮವೇ ಇಂದು ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು. 
ಇಂತಹ ಅಮಾನವೀಯ ವ್ಯವಸ್ಥೆಯ ವಿರುದ್ಧ ಹೋರಾಡಲು ನಾವೆಲ್ಲ ಸಜ್ಜಾಗಬೇಕಾಗಿದೆ. ಎಲ್ಲಾ ಮಹಿಳೆಯರನ್ನು ಜಾಗೃತರನ್ನಾಗಿಸಿ ಸಂಘಟಿಸಬೇಕಾಗಿದೆ. ಮಹಿಳೆಯರಿಗೆ ನೈಜ ಘನತೆ, ಗೌರವ ಖಾತ್ರಿಪಡಿಸುವ ಹೊಸ ಸಮಾಜದತ್ತ ಸಾಗಬೇಕಾಗಿದೆ. ಈ ನಿಟ್ಟಿನಲ್ಲಿ ಮಹಿಳಾ ವಿಮುಕ್ತಿಗಾಗಿ ಶೋಷಣಾ ರಹಿತ ನವ ಸಮಾಜವನ್ನು ಸ್ಥಾಪಿಸಲು ಮುಂದಾಗೋಣ” ಎಂದು ಕರೆ ನೀಡಿದರು.
ಎಐಎಂಎಸ್‌ಎಸ್ ನ ಜಿಲ್ಲಾ ಕಾರ್ಯದರ್ಶಿಗಳಾದ ವಿಜಯಲಕ್ಷಿö್ಮ ಶಿಬಿರದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಜಿಲ್ಲಾಧ್ಯಕ್ಷರಾದ ಈಶ್ವರಿ ಕೆ. ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್