Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸಭಾ ಅಧಿವೇಶನದ ಮೊದಲ ದಿನವೇ ಒಳಮಿಸಲಾತಿ ಘೋಷಿಸಬೇಕು.


ಧಾರವಾಡ: ರಾಜ್ಯ ಸರ್ಕಾರ ಮಾದಿಗ ಡೋಹರ ಕಕ್ಕಯ್ಯ ಮತ್ತು ಸಂಬಂಧಿತ ಜಾತಿಗಳಿಗೆ ಪ್ರತ್ಯೇಕ ಶೇ.6 ರ ಮೀಸಲಾತಿಯನ್ನು ವಿಧಾನಸಭಾ ಅಧಿವೇಶನದ ಮೊದಲ ದಿನವೇ ಘೋಷಿಸಬೇಕು. ಇಲ್ಲವಾದರೆ ಮತ್ತೆ ಮಾದಿಗ ಡೋಹರ ಕಕ್ಕಯ್ಯ ಹಾಗೂ ಸಂಬಂಧಿತ ಜಾತಿಗಳು ಬೀದಿಗೆ ಇಳಿದು ಉಗ್ರ ಹೋರಾಟಕ್ಕೆ ಕೈ ಹಾಕಬೇಕಾಗುತ್ತದೆ ಎಂದು

ಅಖಿಲ ಕರ್ನಾಟಕ ಡೋಹರ ಕಕ್ಕಯ್ಯ ಸಮಾಜ ಸಂಘದ ಅಧ್ಯಕ್ಷ ಸಂತೋಷ ಸವಣೂರ ಎಚ್ಚರಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾದಿಗ ಡೋಹರ ಕಕ್ಕಯ್ಯಾ ಸಮಾಜ ಹಾಗೂ ಸಂಬಂಧಿತ ಜಾತಿಗಳು ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ವರದಿಯನ್ನು ಸ್ವಾಗತಿಸುತ್ತೇವೆ.


ಆಗಸ್ಟ್ 1 ಕ್ಕೆ ಸುಪ್ರೀಂಕೋರ್ಟ್ ತೀರ್ಪು ಬಂದು ಒಂದು ವರ್ಷ ಕಳೆದರೂ ಕರ್ನಾಟಕ ಸರ್ಕಾರ ಒಳಮೀಸಲಾತಿ ಜಾರಿಯಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜನಾಕ್ರೋಶ ಪ್ರತಿಭಟನೆಗಳು ದೊಡ್ಡಮಟ್ಟದಲ್ಲಿ ನೆಡೆದಿದ್ದವು. ಈ ಪ್ರತಿಭಟನೆಯಿಂದ ಈಗ ಸರ್ಕಾರ ಎಚ್ಚೆತ್ತಿದೆ. ಆದರೆ ಕೆಲವರು ಸರ್ಕಾರವನ್ನು ಹಿಂದಕ್ಕೆ ಎಳೆಯುತ್ತಿದ್ದಾರೆ.


ನ್ಯಾ ನಾಗಮೋಹನ್ ದಾಸ್ ಅವರ ವರದಿಯನ್ನು ಕರ್ನಾಟಕ ಸರ್ಕಾರ ಸ್ವೀಕರಿಸಿದೆ. ಆದರೆ ವರದಿಯ ಶಿಫಾರಸ್ಸನ್ನು ಜಾರಿ ಮಾಡಲು ಮುಂದಾಗಿಲ್ಲ. ಸರ್ಕಾರದ ಈ  ವಿಳಂಬ ನೀತಿ ಕಾಣಿಸುತ್ತದೆ.

ಸಿದ್ದರಾಮಯ್ಯನವರು ಅಹಿಂದ ನಾಯಕರು ಎಂದು ಸಾಬೀತುಪಡಿಸಲು ಇದೊಂದು ಸುವರ್ಣ ಅವಕಾಶ.  ನಾಗಮೋಹನ್ ದಾಸ್ ಅವರ ಶಿಫಾರಸ್ಸಿನ ಅನ್ವಯ ಒಳ ಮೀಸಲಾತಿ ಜಾರಿ ಮಾಡುವ ತೀರ್ಮಾನವನ್ನು ಘೋಷಿಸಬೇಕಿತ್ತು. ಆದರೆ ಈ ನಿರೀಕ್ಷೆ ಹುಸಿಯಾಗಿದೆ.

ನ್ಯಾ ಸದಾಶಿವ ಆಯೋಗ, ಮಾಧುಸ್ವಾಮಿ ಆಯೋಗ, ಈಗ ನ್ಯಾ ನಾಗಮೋಹನ ದಾಸ್ ಆಯೋಗ ಎಲ್ಲ ಮೂರೂ ಆಯೋಗಗಳು ಕರ್ನಾಟಕದಲ್ಲಿ ಮಾದಿಗ ಡೊಹರ ಕಕ್ಕಯ್ಯ ಮತ್ತು ಅದರ ಉಪಜಾತಿಗಳೆ ಪರಿಶಿಷ್ಟ ಜಾತಿಗಳಲ್ಲಿ ಅತ್ಯಂತ ದೊಡ್ಡ ಸಮೂಹ ಎಂದು ಸ್ಪಷ್ಟವಾಗಿ ಹೇಳಿವೆ. ಎಲ್ಲಾ ಆಯೋಗಗಳು ಮಾದಿಗೆ ಡೊಹರ ಕಕ್ಕಯ್ಯ ಉಪ ಜಾತಿಗಳ ಗುಂಪಿಗೆ ಶೇ.6 ಮೀಸಲಾತಿಯನ್ನು ನಿಗದಿಪಡಿಸಿವೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ಮಾದಿಗ ಡೊಹರ ಕಕ್ಕಯ್ಯ ಹಾಗೂ ಸಂಬಂಧಿತ ಜಾತಿಗಳ ಪಾಲಿನ ಶೇ.೬ ಮೀಸಲಾತಿಯನ್ನು ಪ್ರತ್ಯೇಕಿಸಿ ಘೋಷಿಸಲಿ. ಉಳಿದ ಹಂಚಿಕೆಯನ್ನು ನಿಧಾನವಾಗಿ ಮಾಡಲಿ ಎಂದು ಆಗ್ರಹಿಸುತ್ತೆವೆ. ಈ ಮೀಸಲಾತಿಯನ್ನು ವಿಧಾನಸಭಾ ಅಧಿವೇಶನದ ಮೊದಲ ದಿನವೇ ಘೋಷಿಸಬೇಕು. ಇಲ್ಲವಾದರೆ ಮತ್ತೆ ಮಾದಿಗ ಡೋಹರ ಕಕ್ಕಯ್ಯ ಹಾಗೂ ಸಂಬಂಧಿತ ಜಾತಿಗಳು ಬೀದಿಗೆ ಇಳಿದು ಉಗ್ರ ಹೋರಾಟಕ್ಕೆ ಕೈ ಹಾಕಬೇಕಾಗುತ್ತದೆ ಎಂದರು.

ರಾಜ್ಯ ಉಪಾಧ್ಯಕ್ಷ ಗುರು ಪೋಳ, ಮಹಿಳಾ ಘಟಕದ ಅಧ್ಯಕ್ಷೆ ಸಾರಿಕಾ ಸವಣೂರ,ಸಮಾಜದ ಮುಖಂಡರಾದ

ಲಕ್ಷ್ಮಣ ಪೋಳ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ