ವೀರಶೈವ ಲಿಂಗಾಯತ ಮಠಾಧೀಶರ ಸೂಚನೆ ಮಧ್ಯೆಯೂ ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾದ ಹಿನ್ನೆಲೆ ಹೇಳಿಕೆ ನೀಡಿರುವ ಸ್ವಾಮೀಜಿ, ‘ಸಿಎಂ ಪ್ರತ್ಯೇಕ ಲಿಂಗಾಯತ ಧರ್ಮ ಸಮಾರಂಭಕ್ಕೆ ಹೋಗಿರುವುದು ಒಂದು ಕಡೆ ಸಂತೋಷ , ಒಂದು ಕಡೆಗೆ ದುಃಖ ಆಗಿದೆ. ಬಸವಣ್ಣನ ಹೆಸರು ನಮ್ಮ ಮೆಟ್ರೋಗೆ ಇಡುವುದು, ಬಸವ ಕಲ್ಯಾಣದಲ್ಲಿ ವಚನ ವಿವಿ ಸ್ಥಾಪನೆ ಸೇರಿ ಕೆಲವು ವಿಷಯ ಸ್ವಾಗತಾರ್ಹವಾಗಿದೆ.
ಈ ಹಿಂದೆ ಸಿದ್ದರಾಮಯ್ಯನವರು ಒಂದುಗೂಡಿದ ಧರ್ಮ ಇಬ್ಬಾಗ ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದರು. ಈಗ ಜೇನು ಗೂಡಿಗೆ ಕೈ ಹಾಕಿ ಜೇನಿನಿಂದ ಕಚ್ಚಿಸಿಕೊಳ್ಳುವುದು ಬೇಡ ಎಂದು ಹೇಳಿದ್ದೆವು. ಆದರೂ ಆ ಸಭೆ (ಪ್ರತ್ಯೇಕ ಲಿಂಗಾಯತರ ಸ್ವಾಮೀಜಿಗಳ ಸಭೆ) ಗೆ ಹೋಗಿ ಪ್ರತ್ಯೇಕ ಧರ್ಮದ ಬಗ್ಗೆ ಹೇಳಿಕೆ ನೀಡದೇ ಜಾಣ ನಡೆ ಅನುಸರಿಸಿದ್ದಾರೆ. ಆದರೂ ಸಹ ಆ ಸಭೆಗೆ ಹೋಗಿದ್ದರಿಂದ ಸರ್ಕಾರಕ್ಕೆ ಸ್ವಲ್ಫ ಗೊಂದಲ ಉಂಟಾಗಿದೆ.