Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌! ಕಾಯ್ದೆ ತಿದ್ದುಪಡಿಗೆ ನಿರ್ಧರಿಸಿದ ಸರ್ಕಾರ

ಬೆಂಗಳೂರು, ಮಾರ್ಚ್ 6: ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಮತ್ತು ಒಂದರ ಮೇಲೊಂದು ಎಡವಟ್ಟುಗಳಿಂದ ಪ್ರಾಮಾಣಿಕ ಅಭ್ಯರ್ಥಿಗಳು ಬೇಸತ್ತು ಹೋಗಿದ್ದಾರೆ. ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತಿರುವ ರಾಜ್ಯಸರ್ಕಾರ  ಇದೀಗ ಕೆಪಿಎಸ್ಸಿಗೆ ಕಾಯಕಲ್ಪ ನೀಡಲು ಮುಂದಾಗಿದೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕೆಪಿಎಸ್ಸಿ ಕಾಯ್ದೆ 1959’ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ನಿರ್ಧರಿಸಿದೆ.

ಈ ತಿದ್ದುಪಡಿ ಮಸೂದೆ ಪ್ರಕಾರ ನೇಮಕಾತಿ ಸಂದರ್ಶನ ಮಂಡಳಿಯಲ್ಲಿ ಆಯೋಗ ನಿಯೋಜಿಸಬಹುದಾದ ಒಬ್ಬ ಸದಸ್ಯ ಮಾತ್ರ ಇರಲಿದ್ದಾರೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮದಲ್ಲಿ ಇರುವಂತೆ ಸಂದರ್ಶನ ನಡೆಸಬೇಕು ಎಂದು ತಿದ್ದುಪಡಿ ಮಾಡಲಾಗುತ್ತದೆ.

ಪ್ರಸ್ತುತ ನಿಯಮದಲ್ಲಿ ಆಯೋಗ ನಿಯೋಜಿಸಿದ ಇಬ್ಬರು ಅಥವಾ ಹೆಚ್ಚು ಸದಸ್ಯರು ಅಭ್ಯರ್ಥಿಗಳ ಸಂದರ್ಶನ ನಡೆಸಬಹುದಾಗಿದೆ. ಈ ಸಂದರ್ಶನದ ಫಲಿತಾಂಶಗಳನ್ನು ಆಯೋಗದ ಮುಂದೆ ಮಂಡಿಸಿ, ಅಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂಬ ಅಂಶ ಇದೆ. ಇದು ಸ್ವಜನ ಪಕ್ಷಪಾತ, ಅಕ್ರಮಕ್ಕೆ ಎಡೆ ಮಾಡಿ ಕೊಟ್ಟಿದೆ ಎಂಬ ಆರೋಪವಿತ್ತು. ಅದನ್ನು ಬದಲಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ತಿದ್ದುಪಡಿಯಂತೆ ಆಯೋಗದ ಸಭೆಗೆ ಅಧ್ಯಕ್ಷರನ್ನು ಸೇರಿಸಿ ಒಟ್ಟು ಸದಸ್ಯರ ಪೈಕಿ ಶೇ 50ರಷ್ಟು ಕೋರಂ ಅಗತ್ಯ ಇದೆ ಎಂದು ಬದಲಾಯಿಸಲಾಗುವುದು‌. ಈ ಹಿಂದೆ ಅಧ್ಯಕ್ಷರು ಇಲ್ಲದಿದ್ದರೂ ಶೇ 50ರಷ್ಟು ಎಂದಿತ್ತು. ಆಯೋಗದ ಎಲ್ಲ ನಿರ್ಣಯಗಳು ಎಲ್ಲ ಸದಸ್ಯರಿಗೂ ಮುಕ್ತ ಆಗಿರಬೇಕು. ಒಂದು ವೇಳೆ ಆಯೋಗದ ನಿರ್ಣಯಗಳ ಸಂಬಂಧ ಸದಸ್ಯ ಭಿನ್ನಾಭಿಪ್ರಾಯ ಹೊಂದಿದ್ದರೆ, ಅದಕ್ಕೆ ಕಾರಣದೊಂದಿಗೆ ದಾಖಲಿಸಬೇಕು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*