LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌! ಕಾಯ್ದೆ ತಿದ್ದುಪಡಿಗೆ ನಿರ್ಧರಿಸಿದ ಸರ್ಕಾರ

ಬೆಂಗಳೂರು, ಮಾರ್ಚ್ 6: ಕರ್ನಾಟಕ ಲೋಕಸೇವಾ ಆಯೋಗದ ಅವ್ಯವಹಾರ, ಭ್ರಷ್ಟಾಚಾರ ಮತ್ತು ಒಂದರ ಮೇಲೊಂದು ಎಡವಟ್ಟುಗಳಿಂದ ಪ್ರಾಮಾಣಿಕ ಅಭ್ಯರ್ಥಿಗಳು ಬೇಸತ್ತು ಹೋಗಿದ್ದಾರೆ. ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತಿರುವ ರಾಜ್ಯಸರ್ಕಾರ  ಇದೀಗ ಕೆಪಿಎಸ್ಸಿಗೆ ಕಾಯಕಲ್ಪ ನೀಡಲು ಮುಂದಾಗಿದೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕೆಪಿಎಸ್ಸಿ ಕಾಯ್ದೆ 1959’ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ನಿರ್ಧರಿಸಿದೆ.

ಈ ತಿದ್ದುಪಡಿ ಮಸೂದೆ ಪ್ರಕಾರ ನೇಮಕಾತಿ ಸಂದರ್ಶನ ಮಂಡಳಿಯಲ್ಲಿ ಆಯೋಗ ನಿಯೋಜಿಸಬಹುದಾದ ಒಬ್ಬ ಸದಸ್ಯ ಮಾತ್ರ ಇರಲಿದ್ದಾರೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮದಲ್ಲಿ ಇರುವಂತೆ ಸಂದರ್ಶನ ನಡೆಸಬೇಕು ಎಂದು ತಿದ್ದುಪಡಿ ಮಾಡಲಾಗುತ್ತದೆ.

ಪ್ರಸ್ತುತ ನಿಯಮದಲ್ಲಿ ಆಯೋಗ ನಿಯೋಜಿಸಿದ ಇಬ್ಬರು ಅಥವಾ ಹೆಚ್ಚು ಸದಸ್ಯರು ಅಭ್ಯರ್ಥಿಗಳ ಸಂದರ್ಶನ ನಡೆಸಬಹುದಾಗಿದೆ. ಈ ಸಂದರ್ಶನದ ಫಲಿತಾಂಶಗಳನ್ನು ಆಯೋಗದ ಮುಂದೆ ಮಂಡಿಸಿ, ಅಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂಬ ಅಂಶ ಇದೆ. ಇದು ಸ್ವಜನ ಪಕ್ಷಪಾತ, ಅಕ್ರಮಕ್ಕೆ ಎಡೆ ಮಾಡಿ ಕೊಟ್ಟಿದೆ ಎಂಬ ಆರೋಪವಿತ್ತು. ಅದನ್ನು ಬದಲಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ತಿದ್ದುಪಡಿಯಂತೆ ಆಯೋಗದ ಸಭೆಗೆ ಅಧ್ಯಕ್ಷರನ್ನು ಸೇರಿಸಿ ಒಟ್ಟು ಸದಸ್ಯರ ಪೈಕಿ ಶೇ 50ರಷ್ಟು ಕೋರಂ ಅಗತ್ಯ ಇದೆ ಎಂದು ಬದಲಾಯಿಸಲಾಗುವುದು‌. ಈ ಹಿಂದೆ ಅಧ್ಯಕ್ಷರು ಇಲ್ಲದಿದ್ದರೂ ಶೇ 50ರಷ್ಟು ಎಂದಿತ್ತು. ಆಯೋಗದ ಎಲ್ಲ ನಿರ್ಣಯಗಳು ಎಲ್ಲ ಸದಸ್ಯರಿಗೂ ಮುಕ್ತ ಆಗಿರಬೇಕು. ಒಂದು ವೇಳೆ ಆಯೋಗದ ನಿರ್ಣಯಗಳ ಸಂಬಂಧ ಸದಸ್ಯ ಭಿನ್ನಾಭಿಪ್ರಾಯ ಹೊಂದಿದ್ದರೆ, ಅದಕ್ಕೆ ಕಾರಣದೊಂದಿಗೆ ದಾಖಲಿಸಬೇಕು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್