Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನ

ರಾಯಗಢ03: ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ಶುಕ್ರವಾರ ನಡೆದಿದೆ. ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ವಾಲಿದ ಪರಿಣಾಮ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ.

ಘಟನೆ ಸಂಭವಿಸಿದಾಗ ಚಾಪರ್ ಶಿವಸೇನೆಯ ಶಿಂಧೆ ಬಣದ (ಯುಬಿಟಿ) ನಾಯಕಿ ಸುಷ್ಮಾ ಅಂಧಾರೆಯನ್ನು ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಸಾರ್ವಜನಿಕ ರ್ಯಾಲಿಗಾಗಿ ಕರೆದೊಯ್ಯಲು ಹೋಗುತ್ತಿತ್ತು.

ಬೆಳಗ್ಗೆ 9.30ರ ಸುಮಾರಿಗೆ ಹೆಲಿಕಾಪ್ಟರ್‌ನ ಪೈಲಟ್‌ಗಳು ಅದನ್ನು ಮಹುಹಾದ್‌ನಲ್ಲಿರುವ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಇಳಿಸಲು ಪ್ರಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಹೆಲಿಕಾಪ್ಟರ್ ವಾಲಿದ್ದು, ಪೈಲಟ್‌ಗಳಿಗೆ ಗಾಯಗಳಾಗಿವೆ.

ಲ್ಯಾಂಡಿಂಗ್ ಸಮಯದಲ್ಲಿ ಹೆಲಿಕಾಪ್ಟರ್ ತನ್ನ ನಿಯಂತ್ರಣವನ್ನು ಕಳೆದುಕೊಂಡಿತ್ತು, ಹೆಲಿಪ್ಯಾಡ್​ನಲ್ಲಿ ಧೂಳೆಬ್ಬಿಸುತ್ತಿತ್ತು, ದೊಡ್ಡದಾಗಿ ಶಬ್ದ ಮಾಡುತ್ತಾ ಸಮತೋಲನವನ್ನು ಕಳೆದುಕೊಂಡಿತ್ತು. ಘಟನೆಯಲ್ಲಿ ಹೆಲಿಕಾಪ್ಟರ್‌ನ ರೋಟರ್ ಬ್ಲೇಡ್‌ಗಳಿಗೂ ಹಾನಿಯಾಗಿದೆ.

ಘಟನೆಯ ನಂತರ, ಪೊಲೀಸರು ಮತ್ತು ತುರ್ತು ತಂಡದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪೈಲಟ್‌ಗಳನ್ನು ರಕ್ಷಿಸಿದರು ಮತ್ತು ಅವರಿಗೆ ಪ್ರಥಮ ಚಿಕಿತ್ಸೆ ನೀಡಿದರು.

ಮೈದಾನವು ಸಮತಟ್ಟಾಗಿರದ ಕಾರಣ ಘಟನೆ ಸಂಭವಿಸಿದೆ ಎನ್ನಲಾಗಿದೆ. ರಾಯಗಢ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ