ಅಕ್ಟೋಬರ್ನಲ್ಲಿ ಕಜಾನ್ನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ-ಜಿನ್ಪಿಂಗ್ ನಡುವೆ ಒಪ್ಪಿಕೊಂಡಂತೆ ಎರಡೂ ಕಡೆಯವರು ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಸಂಬಂಧಗಳನ್ನು ಸ್ಥಿರಗೊಳಿಸಲು ಮತ್ತು ಪುನರ್ನಿರ್ಮಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ.
ಭಾರತ-ಚೀನಾ ಸಂಬಂಧಗಳು ದ್ವಿಪಕ್ಷೀಯ ಸಂಬಂಧಗಳ ಸಾಮಾನ್ಯೀಕರಣದತ್ತ ಸಾಗುತ್ತಿರುವಾಗ ಭಾರತ ಮತ್ತು ಚೀನಾ ಎರಡೂ ದೇಶಗಳ ನಡುವೆ ನೇರ ವಿಮಾನಗಳ ಮೂಲಕ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಒಪ್ಪಿಕೊಂಡಿವೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರ ಬೀಜಿಂಗ್ಗೆ 2 ದಿನಗಳ ಭೇಟಿಯ ಸಮಯದಲ್ಲಿ ಈ ನಿರ್ಧಾರ ಬಂದಿದೆ. ಈ ಸಭೆಯಲ್ಲಿ 2025ರ ಬೇಸಿಗೆಯಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಎರಡೂ ಕಡೆಯವರು ನಿರ್ಧರಿಸಿದರು.