Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊನೆಯುಸರೆಳೆದ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ

ದೇಶದ ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ಅವರು ಕೊನೆಯುಸರೆಳೆದಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು 1975 ಮತ್ತು 1998 ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಣುಶಕ್ತಿ ಇಲಾಖೆಯ ಅಧಿಕಾರಿಯೊಬ್ಬರು ಈ ಕುರಿತು ಮಾಹಿತಿ ನೀಡಿದ್ದಾರೆ.


ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ 3.20 ಕ್ಕೆ ಕೊನೆಯುಸಿರೆಳೆದರು ಎಂದು ಅಧಿಕಾರಿ ತಿಳಿಸಿದ್ದಾರೆ. ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಚಿದಂಬರಂ ಅವರಿಗೆ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.


 ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಸರಿ ಇರಲಿಲ್ಲ. ವಿಜ್ಞಾನಿಯಾಗಿ ತಮ್ಮ ವೃತ್ತಿ ಜೀವನದಲ್ಲಿ, ಡಾ. ಚಿದಂಬರಂ ಅವರು ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕರಾಗಿ, ಪರಮಾಣು ಶಕ್ತಿ ಆಯೋಗದ (AEC) ಅಧ್ಯಕ್ಷರಾಗಿ ಮತ್ತು ಪರಮಾಣು ಶಕ್ತಿ ಇಲಾಖೆ (DAE) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಅವರು 1994-95ರ ಅವಧಿಯಲ್ಲಿ ಇಂಟರ್ನ್ಯಾಷನಲ್ ಅಟಾಮಿಕ್ ಎನರ್ಜಿ ಏಜೆನ್ಸಿಯ (IAEA) ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*