Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊನೆಯುಸರೆಳೆದ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ

ದೇಶದ ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ಅವರು ಕೊನೆಯುಸರೆಳೆದಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು 1975 ಮತ್ತು 1998 ರ ಪರಮಾಣು ಪರೀಕ್ಷೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಣುಶಕ್ತಿ ಇಲಾಖೆಯ ಅಧಿಕಾರಿಯೊಬ್ಬರು ಈ ಕುರಿತು ಮಾಹಿತಿ ನೀಡಿದ್ದಾರೆ.


ಪರಮಾಣು ಶಸ್ತ್ರಾಸ್ತ್ರಗಳ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿದ್ದ ಚಿದಂಬರಂ ಅವರು ಮುಂಬೈನ ಜಸ್ಲೋಕ್ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ 3.20 ಕ್ಕೆ ಕೊನೆಯುಸಿರೆಳೆದರು ಎಂದು ಅಧಿಕಾರಿ ತಿಳಿಸಿದ್ದಾರೆ. ಅವರು ಪರಮಾಣು ಶಕ್ತಿ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಚಿದಂಬರಂ ಅವರಿಗೆ 1975 ಮತ್ತು 1999 ರಲ್ಲಿ ಪದ್ಮಶ್ರೀ ಮತ್ತು ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.


 ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯ ಸರಿ ಇರಲಿಲ್ಲ. ವಿಜ್ಞಾನಿಯಾಗಿ ತಮ್ಮ ವೃತ್ತಿ ಜೀವನದಲ್ಲಿ, ಡಾ. ಚಿದಂಬರಂ ಅವರು ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕರಾಗಿ, ಪರಮಾಣು ಶಕ್ತಿ ಆಯೋಗದ (AEC) ಅಧ್ಯಕ್ಷರಾಗಿ ಮತ್ತು ಪರಮಾಣು ಶಕ್ತಿ ಇಲಾಖೆ (DAE) ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಅವರು 1994-95ರ ಅವಧಿಯಲ್ಲಿ ಇಂಟರ್ನ್ಯಾಷನಲ್ ಅಟಾಮಿಕ್ ಎನರ್ಜಿ ಏಜೆನ್ಸಿಯ (IAEA) ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ