Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪದ್ಮಶ್ರೀ ಪ್ರಶಸ್ತಿ ಕೆಎಲ್ಇ ಕುಟುಂಬಕ್ಕೆ ಸಂದ ಗೌರವ

ಅಭಿನಂದನಾ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಡಾ.ಪ್ರಭಾಕರ ಕೋರೆ ಅರ್ಪಣೆ

ಹಸಿರು ಕ್ರಾಂತಿ ವರದಿ ಬೆಳಗಾವಿ

ಕಳೆದ 110 ವರ್ಷಗಳಿಂದ ಕೆಎಲ್ಇ ಸಂಸ್ಥೆ ಹಾಗೂ ಕಾಹೇರ್‌ನ ಬೆಳವಣಿಗೆಗೆ ಶ್ರಮಿಸಿದ ಎಲ್ಲ ಶಿಕ್ಷಕರು, ವೈದ್ಯರು, ಸಿಬ್ಬಂದಿ ಮತ್ತು ಕೆಎಲ್ಇ ಕುಟುಂಬದ ಸದಸ್ಯರಿಗೆ ಈ ಪದ್ಮಶ್ರೀ ಪ್ರಶಸ್ತಿಯನ್ನು ಸಮರ್ಪಿಸುತ್ತೇನೆ. ಇದು ವೈಯಕ್ತಿಕ ಗೌರವವಲ್ಲ, ಇಡೀ ಕೆಎಲ್ಇ ಕುಟುಂಬಕ್ಕೆ ಸಂದ ಗೌರವ ಎಂದು ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಕಾಹೇರ್) ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ, ಪದ್ಮಶ್ರೀ ಪುರಸ್ಕೃತ ಡಾ.ಪ್ರಭಾಕರ ಕೋರೆ ಹೇಳಿದರು.

ಶಿಕ್ಷಣ, ಆರೋಗ್ಯ ಹಾಗೂ ಸಾಹಿತ್ಯ ಕ್ಷೇತ್ರಗಳಿಗೆ ನೀಡಿದ ವಿಶಿಷ್ಟ ಸೇವೆಗಾಗಿ ಭಾರತ ಸರ್ಕಾರ ನೀಡುವ ಪದ್ಮಶ್ರೀ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಕಾಹೇರ್ ಆವರಣದಲ್ಲಿ ಕೆಎಲ್ಇ ವತಿಯಿಂದ ಬುಧವಾರ ಆಯೋಜಿಸಿದ ಅದ್ಧೂರಿ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕೆಎಲ್ಇ ಸಂಸ್ಥೆಯ 110 ವರ್ಷಗಳ ಸೇವಾ ಪರಂಪರೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಇಂದಿನ ಆಡಳಿತ ಮಂಡಳಿಯ ಮೇಲಿದೆ. ವೈದ್ಯರು ಸಹಾನುಭೂತಿ, ನೈತಿಕತೆ, ಪ್ರಾಮಾಣಿಕತೆ ಹಾಗೂ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿ ವೈದ್ಯರ ದಿನಾಚರಣೆಯ ಅಂಗವಾಗಿ ವೈದ್ಯ ಸಮುದಾಯಕ್ಕೆ ಶುಭಾಶಯ ಕೋರಿದರು.

Advertisement

ಕಾಹೇರ್ ಕುಲಪತಿ ಡಾ.ಸಂದೀಪ ಶ್ರೀವಾಸ್ತವ ಮಾತನಾಡಿ, ಡಾ.ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕೆಎಲ್ಇ ಕುಟುಂಬಕ್ಕೆ ಹೆಮ್ಮೆಯ ಕ್ಷಣವಾಗಿದೆ. ಅವರ ದೂರದೃಷ್ಟಿಯ ನಾಯಕತ್ವ ಹಾಗೂ ಶಿಕ್ಷಣ, ಆರೋಗ್ಯ ಮತ್ತು ಸಾಹಿತ್ಯ ಕ್ಷೇತ್ರಗಳಿಗೆ ಸಲ್ಲಿಸಿದ ಜೀವಮಾನ ಸಾಧನೆಗೆ ರಾಷ್ಟ್ರ ನೀಡಿರುವ ಸೂಕ್ತ ಗೌರವ ಇದಾಗಿದೆ ಎಂದರು.

ಹಿರಿಯ ಶಿಕ್ಷಣತಜ್ಞ ಡಾ.ಎಚ್.ಬಿ.ರಾಜಶೇಖರ ಮಾತನಾಡಿ, ಡಾ.ಪ್ರಭಾಕರ ಕೋರೆಯವರ ನಾಯಕತ್ವದಿಂದ ಕೆಎಲ್ಇ ಶಿಕ್ಷಣ, ಆರೋಗ್ಯ, ಕೃಷಿ, ಸಂಶೋಧನೆ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಗುರುತನ್ನು ಪಡೆದುಕೊಂಡಿದೆ. ಪದ್ಮಶ್ರೀ ಪ್ರಶಸ್ತಿಯು ಅವರ ಸಮಾಜಮುಖಿ ಸೇವೆಗೆ ದೊರೆತ ರಾಷ್ಟ್ರೀಯ ಮಾನ್ಯತೆಯಾಗಿದೆ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು ಡಾ.ಪ್ರಭಾಕರ ಕೋರೆ ಅವರನ್ನು ಸನ್ಮಾನಿಸಿದರು. ವೇದಿಕೆಯಲ್ಲಿ ಆಶಾತಾಯಿ ಕೋರೆ, ಕಾಹೇರ್ ಕುಲಸಚಿವ ಡಾ.ವಿ.ಎಂ.ಪಟ್ಟಣಶೆಟ್ಟಿ, ಪರೀಕ್ಷಾ ನಿಯಂತ್ರಕ ಡಾ.ಚಂದ್ರ ಮೆಟಗುಡ, ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಎಸ್.ಕೌಜಲಗಿ, ಉಪಾಧ್ಯಕ್ಷ ಬಸವರಾಜ ಎಸ್.ತಟವಟಿ, ಆಡಳಿತ ಮಂಡಳಿಯ ಸದಸ್ಯರಾದ ಎಂ.ಕೆ.ಕವಟಗಿಮಠ, ಜಯಾನಂದ ಎಸ್.ಮುನವಳ್ಳಿ, ಡಾ.ವಿ.ಐ.ಪಾಟೀಲ, ವೈ.ಎಸ್.ಪಾಟೀಲ, ಪ್ರವೀಣ ಬಾಗೇವಾಡಿ, ಡಾ.ಪ್ರೀತಿ ದೊಡ್ಡವಾಡ, ಎಂ.ಸಿ.ಕೊಲ್ಲಿ ಹಾಗೂ ಕೆಎಲ್ಇ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ.ಎಸ್.ಎಸ್.ಜಲಾಲಪೂರೆ, ಕೆಎಲ್ಇ ಸಂಸ್ಥೆಯ ಆಜೀವ ಸದಸ್ಯರು, ವಿಶ್ವವಿದ್ಯಾಲಯದ ಅಧಿಕಾರಿಗಳು ಸೇರಿದಂತೆ ಕೆಎಲ್ಇ ಹಾಗೂ ಕಾಹೇರ್‌ನ ವಿವಿಧ ಘಟಕ ಸಂಸ್ಥೆಗಳ ಪ್ರಾಂಶುಪಾಲರು, ವೈದ್ಯರು, ಅಧ್ಯಾಪಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಕಾಹೇರ್ ಕುಲಸಚಿವ ಡಾ.ವಿ.ಎಂ.ಪಟ್ಟಣಶೆಟ್ಟಿ ಸ್ವಾಗತಿಸಿ, ಪ್ರಶಂಸಾ ಪತ್ರ ವಾಚಿಸಿದರು. ಶಿಕ್ಷಣ, ಆರೋಗ್ಯ, ಸಂಶೋಧನೆ ಹಾಗೂ ಸಾಹಿತ್ಯ ಕ್ಷೇತ್ರಗಳ ಅಭಿವೃದ್ಧಿಗೆ ಡಾ.ಪ್ರಭಾಕರ ಕೋರೆ ಅವರು ನೀಡಿರುವ ಅಸಾಧಾರಣ ಕೊಡುಗೆ, ಗುಣಮಟ್ಟದ ಶಿಕ್ಷಣ ಹಾಗೂ ಜನಸಾಮಾನ್ಯರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಅವರ ದೂರದೃಷ್ಟಿಯ ನಾಯಕತ್ವವನ್ನು ಪ್ರಶಂಸಾ ಪತ್ರದಲ್ಲಿ ಸ್ಮರಿಸಲಾಯಿತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಉಪನ್ಯಾಸಕ ಬಂಧನಸರ್ಕಾರಿ ಜಾಗದ ಕೊರತೆಯಿಂದ ಅಭಿವೃದ್ಧಿಗೆ ಹಿನ್ನಡೆ: ಶಾಸಕ ಬಾಬಾಸಾಹೇಬ ಪಾಟೀಲವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಜಾಗೃತಿ ಜಾಥಾ: ಮತದಾರರಾಗಿ ನೋಂದಾಯಿಸಿಕೊಳ್ಳುವಂತೆ ಸಿಓ ಪ್ರಶಾಂತ ಸಿ. ಕರೆದಲಿತ ನಾಯಕರ ಅವಹೇಳನ ಸಹಿಸುವುದಿಲ್ಲ: ಉಗ್ರ ಹೋರಾಟದ ಎಚ್ಚರಿಕೆ ನೀಡಿದ ದಲಿತ ಮುಖಂಡ ಸಂಜಯ ತಳವಲ್ಕರ್!ಮುದ್ದೇಬಿಹಾಳದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಅರ್ಥಪೂರ್ಣ ಆಚರಣೆ"ಸತ್ಯ ಸಂಶೋಧನೆಯ ಭಾಗವೇ ಪತ್ರಕರ್ತ : ಡಾ||ಆನಂದ ಮಹಾರಾಜ ಗೋಸಾವಿ,ಎಲ್ ನಿನೋ ಪರಿಣಾಮ ಎದುರಿಸಲು ರಾಜ್ಯ ಸಜ್ಜಾಗಿದೆ: ಈಶ್ವರ ಖಂಡ್ರೆ ವಚನ ಸಾಹಿತ್ಯ ಸಂರಕ್ಷಣೆಗೆ ಡಾ. ಫ.ಗು. ಹಳಕಟ್ಟಿ  ಅವರ ಕೊಡುಗೆ ಅಪಾರ: ಡಾ. ಔದ್ರಾಮಜು.೫ರಂದು ೧೬ನೇ ಶಿವಯೋಗ ಸಮಾಧಿಯ ಮುಕ್ತಾಯ ಸಮಾರಂಭ