Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಮಿಕ ಸಚಿವರು ಹಾಗೂ ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳ ಎರಡನೇ ದಿನದ ಚಿಂತನ ಶಿಬಿರ



ನವದೆಹಲಿ, ಐಟಿ ಕಂಪೆನಿಗಳು ನೇಮಿಸಿಕೊಳ್ಳುವ ಕಾರ್ಮಿಕರ ವಿವರ, ವೇತನ ಹಾಗೂ ಇತರ ದತ್ತಾಂಶಗಳನ್ನು ನೀಡಿದರೆ ಆ ಎಲ್ಲಾ ಉದ್ಯೋಗಿಗಳನ್ನು ಕಲ್ಯಾಣ ಯೋಜನೆಗಳ ವ್ಯಾಪ್ತಿಗೆ ಸೇರಿಸಲು ಅನುಕೂಲವಾಗುತ್ತದೆ. ಹಾಗೆಯೇ ಅವರ ಮೇಲಾಗುವ ಶೋಷಣೆಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.


ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಇಲಾಖೆ ಆಯೋಜಿಸಿರುವ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಸಚಿವರು ಹಾಗೂ ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳ ಎರಡನೇ ದಿನದ ಚಿಂತನ ಶಿಬಿರದಲ್ಲಿ ಅವರು ಮಾತನಾಡಿದರು.


ಆಸ್ಸಾಂ ರಾಜ್ಯದ ಕಾರ್ಮಿಕ ಸಚಿವರು ಕಾಫಿ ಪ್ಲಾಂಟೇಷನ್ ಕಾರ್ಮಿಕರ ಬಗ್ಗೆ ಮಾಡಿದ ಭಾಷಣವನ್ನು ಉಲ್ಲೇಖಿಸಿ ಮಾತನಾಡಿದ ಸಚಿವ ಲಾಡ್‌ ಅವರು, ಕರ್ನಾಟಕ ರಾಜ್ಯದಲ್ಲೂ ಕಾಫಿ ಪ್ಲಾಂಟೇಷನ್ ಕಾರ್ಮಿಕರಿದ್ದು, ಅವರ ಕಲ್ಯಾಣಕ್ಕಾಗಿ ಸಹ ಯೋಜನೆಗಳನ್ನು ರೂಪಿಸುವ ಬಗ್ಗೆ ಬೆಳಕು ಚೆಲ್ಲಿದರು‌.


*ಗಾರ್ಮೆಂಟ್ಸ್ ಕಾರ್ಮಿಕರಿಗೆ ಹೆಚ್ಚಿನ ವೇತನಕ್ಕೆ ಕ್ರಮ*

ಗಾರ್ಮೆಂಟ್ಸ್ ಉದ್ಯಮಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ತುಂಬ ಕಡಿಮೆ ವೇತನವನ್ನು ಪಾವತಿಸಲಾಗುತ್ತಿದೆ. ಇದರಿಂದ ಅವರ ಜೀವನಮಟ್ಟ ಕಷ್ಟದಲ್ಲಿದೆ. ಈ ಬಗ್ಗೆ ಸೂಕ್ತ ನಿಯಮಗಳನ್ನು ಜಾರಿಗೆ ತರುವುದರ ಬಗ್ಗೆ ಗಮನ ಸೆಳೆದರು.


*ಹೆಚ್ಚಿನ ಚರ್ಚಾ ಶಿಬಿರ ಆಯೋಜಿಸಿದರೆ ಇನ್ನೂ ಉತ್ತಮ*

 ದೇಶದ ಕಾರ್ಮಿಕರ ಸಮಸ್ಯೆಗಳನ್ನಷ್ಟೇ ಚರ್ಚಿಸಲು ಇಂತಹ ಶಿಬಿರ ಆಯೋಜಿಸಿದ್ದು ಒಳ್ಳೆಯದು. ಇಂತಹ ಮತ್ತೊಂದು ಶಿಬಿರವನ್ನು ಆಯೋಜಿಸಿ ಆಗಾಗ ಚರ್ಚಿಸಿದರೆ ಕಾರ್ಮಿಕರ ಕುರಿತ ಹೊಸ ದಿಕ್ಕಿನ ಆಲೋಚನೆಗೆ ಸಹಾಯವಾಗಲಿದೆ. ಕಾರ್ಮಿಕರ ಸಮಸ್ಯೆಯನ್ನೇ ಆದ್ಯತೆ ನೀಡಿ ಚರ್ಚಿಸಬೇಕು. ಏಕೆಂದರೆ ದೇಶದಲ್ಲಿ ಕಾರ್ಮಿಕರ ಸಾಕಷ್ಟು ಸಮಸ್ಯೆಗಳಿವೆ. ಅವುಗಳಿಗೆ ನಾವು ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.


ಶಿಬಿರದಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಮನ್ಸುಕ್‌ ಮಾಂಡವೀಯ,  ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಮತ್ತು ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಮಿಕ ಸಚಿವರು ಮತ್ತು ಕಾರ್ಯದರ್ಶಿಗಳು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ