LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕೆಡಿಯ ಎರಡನೇ ಹಾಡು  ಸೆಟ್ಟಾಗಲ್ಲಾ ಕಣೆ ನಂಗೂ ನಿಂಗು...



     ಈ  ವರ್ಷದ ಎರಡು ಬಹುನಿರೀಕ್ಷಿತ ಚಿತ್ರಗಳಲ್ಲಿ ಕೆಡಿ ಕೂಡ ಒಂದು. ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಈ ಚಿತ್ರಕ್ಕೆ ವಿಲನ್, ಏಕ್‌ ಲವ್‌ ಯಾ ಖ್ಯಾತಿಯ ಪ್ರೇಮ್  ಆಕ್ಷನ್ ಕಟ್ ಹೇಳಿದ್ದಾರೆ. ದ್ರುವ ಸರ್ಜಾ ನಟನೆಯ ಪ್ಯಾನ್ ಇಂಡಿಯಾ ಚಿತ್ರ ಇದಾಗಿದ್ದು, ಈ ಚಿತ್ರಕ್ಕೆ  ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್  ದೊಡ್ಡ ಮಟ್ಟದಲ್ಲಿ ಬಂಡವಾಳ ಹೂಡಿದೆ.         ಈಗಾಗಲೇ ಈ ಚಿತ್ರದ ಮೊದಲ ಹಾಡು, ಶಿವ ಶಿವ ಅತಿ ಹೆಚ್ಚು ವೀಕ್ಷಣೆಯಾಗುವ ಮೂಲಕ ಎಲ್ಲಾ ಕಡೆ ವೈರಲ್ ಆಗಿ ಟ್ರೆಂಡ್ ಸೃಷ್ಟಿಸಿದೆ. ಇದೀಗ ಚಿತ್ರದ ಮತ್ತೊಂದು ಹಾಡು ಸೆಟ್ಟಾಗಲ್ಲಾ ಕಣೆ ನಂಗೂ ನಿಂಗೂ ಬಿಡುಗಡೆಯಾಗಿದೆ. ಪ್ರೇಮ್ ಅವರೇ ರಚಿಸಿರುವ ಈ ಹಾಡಿಗೆ ಹೆಸರಾಂತ ಗಾಯಕ‌ ಮಿಖಾ ಸಿಂಗ್ ದನಿಯಾಗಿದ್ದಾರೆ. ಈ ಹಾಡಿಗೆ ಪ್ರೇಮ್ ಹಾಗೂ ಅರ್ಜುನ್ ಜನ್ಯ ಸೇರಿ ಹೊಸ ಐಡಿಯಾ ಹುಡುಕಿದ್ದಾರೆ.

      "ಸಧ್ಯ ಈ ಹಾಡಿನ ಪ್ರಿಪರೇಶನ್ ವೀಡಿಯೋ ಮಾತ್ರ ಬಿಡುಗಡೆಯಾಗಿದ್ದು ಶೂಟಿಂಗ್ ಇನ್ನೂ ಆಗಬೇಕಿದೆ. ಇಲ್ಲಿ ಹಾಡಿಗೆ ಕೇಳುಗರೇ ಕೊರಿಯಾಗ್ರಾಫರ್. ಹೌದು,‌ ಈ ಹಾಡನ್ನು ಕೇಳಿ, ಅದಕ್ಕೆ ಸೂಕ್ತವಾದ ಒಂದು ಹುಕ್ ಸ್ಟೆಪ್ ನ್ನು ಪ್ರೇಕ್ಷಕರೇ ತಾವೇ ಹಾಕಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಬೇಕು, ಹಾಗೂ ಚಿತ್ರತಂಡಕ್ಕೆ ಕಳಿಸಬೇಕು. ಅದರಲ್ಲಿ ಬೆಸ್ಟ್ ಮೋಮೆಂಟ್ ಸೆಲೆಕ್ಟ್  ಮಾಡಿ  ಹಾಡಲ್ಲಿ ಬಳಸಿಕೊಳ್ಳಲಾಗುತ್ತದೆ. ಅಭಿಮಾನಿಗಳು ಹಾಕಿದ ಸ್ಟೆಪ್ ಅನ್ನು ನಾಯಕ, ನಾಯಕಿ ಹಾಕ್ತಾರೆ. ಆ  ಸ್ಟೆಪ್ ಕಳಿಸಿದವರನ್ನು ಸಾಂಗ್ ರಿಲೀಸ್ ಟೈಮಲ್ಲಿ ಕರೆಸಿ  ಹಾನರ್ ಮಾಡುತ್ತೇವೆ" ಎಂದಿದ್ದಾರೆ ನಿರ್ದೇಶಕ ಪ್ರೇಮ್, ಇದು ಅವರ ಪ್ರೇಕ್ಷಕರ ಪ್ರತಿಭೆಯನ್ನು ಪ್ರೋತ್ಸಾಹಿಸುವ ಪ್ರಯತ್ನವಾಗಿದೆ. "ತಮ್ಮ‌ಮೆಚ್ಚಿನ ಸ್ಟಾರ್ ಹೀಗೇ ಡಾನ್ಸ್ ಮಾಡಿದರೆ ಚೆನ್ನಾಗಿರತ್ತೆ ಅಂತ ಕಲ್ಪಿಸಿಕೊಂಡಿರುತ್ತಾರೆ. ಅದನ್ನು ನಾವು ಗೌರವಿಸುತ್ತಿದ್ದೇವೆ" ಎಂದು ಹೇಳಿದರು.‌

      ಸಂಗೀತ ನಿರ್ದೇಶಕ ಅರ್ಜುನ್ ಜನ್ಯ‌  "ನಮ್ಮ ಸ್ಟುಡಿಯೋ ಮೇಲೆ ಮಾತಾಡಿಕೊಂಡಿರುವಾಗ ಹುಟ್ಟಿದ ಹಾಡಿದು.‌ ನಾವೆಲ್ಲ ಈ ಪ್ರಾಜೆಕ್ಟನ್ನು ಒಂದು ತಪಸ್ಸಿನ ಥರ ಮಾಡಿದ್ದೇವೆ. ಒಂದೊಂದು ಸಾಂಗ್ ಗೆ ಲಕ್ಷಾಂತರ ಖರ್ಚು ಮಾಡಿದ್ದಾರೆ. ಮಿಖಾಸಿಂಗ್ ತುಂಬಾ ಪೇಯೆಬಲ್ ಸಿಂಗರ್. ಅವರು ಕನ್ನಡ ಹಿಂದಿ ಸಾಂಗ್ ಹಾಡಿದ್ದಾರೆ. ಇದೊಂದು ಡಿವೈನ್ ಪ್ರೊಸೆಸ್"  ಎಂದರು. ಈ ಹಾಡಿಗೆ ಉಳಿದ ಭಾಷೆಗಳಲ್ಲಿ ಅಲ್ಲಿನ ಗಾಯಕರೇ ಹಾಡಿದ್ದಾರೆ.

      ನಾಯಕ ಧ್ರುವ ಸರ್ಜಾ "ಆ ಶಿವನ ಅನುಗ್ರಹದಿಂದ ಶಿವ ಶಿವ ಸಾಂಗ್ ಹಿಟ್ ಆಗಿದೆ.6 ಲಕ್ಷಕ್ಕಿಂತ ಹೆಚ್ಚಾಗಿ ರೀಲ್ಸ್ ಆಗಿದೆ. ವೆಂಕಟ್ ನಾರಾಯಣ್ ಅವರು ತುಂಬಾ ಫ್ಯಾಷನೇಟ್ ಪ್ರೊಡ್ಯೂಸರ್. ಈ ಸಿನಿಮಾದ ನಿಜವಾದ ಹೀರೋ ಅವರೇ. ನಾಯಕಿ ರೀಶ್ಮಾ ಅದ್ಭುತವಾದ ಡಾನ್ಸರ್, ಅವರಿಗೆ ಮ್ಯಾಚ್ ಮಾಡಲು ನಾನೂ ಟ್ರೈ ಮಾಡಿದ್ದೇನೆ. ಪ್ರೇಮ್ , ರಕ್ಷಿತಾ ಗುರ್ತಿಸಿದ ಟ್ಯಾಲೆಂಟ್ ರಾಹುಲ್, ಈ ಹಾಡಿಗೆ ತುಂಬಾ ಚೆನ್ನಾಗಿ ಕೊರಿಯಾಗ್ರಾಫ್ ಮಾಡುತ್ತಿದ್ದಾರೆ. ನಾನಂತೂ  ಈ ಚಿತ್ರದ ಬಗ್ಗೆ ತುಂಬಾ ಎಕ್ಸೈಟೆಡ್ ಆಗಿದ್ದೇನೆ" ಎಂದರು.

       ಕೆವಿಎನ್ ಸಂಸ್ಥೆಯ ಬ್ಯುಸಿನೆಸ್ ಹೆಡ್ ಸುಪ್ರೀತ್ "ನಮ್ಮ  ಚಿತ್ರದಲ್ಲಿ ಹಾಡುಗಳು ಬಹು ಮುಖ್ಯಪಾತ್ರ ವಹಿಸುತ್ತದೆ. ಚಿತ್ರಕ್ಕಾಗಿ ಪ್ರತಿಯೊಬ್ಬರೂ ತುಂಬಾ ಶ್ರಮ ಹಾಕಿದ್ದಾರೆ, ಆಗಸ್ಟ್ ನಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದೇವೆ" ಎಂದು ಹೇಳಿದರು.

    ನಾಯಕಿ ರೀಶ್ಮಾ ನಾಣಯ್ಯ, ಆನಂದ್ ಆಡಿಯೋದ ಶಾಮ್, ಛಾಯಾಗ್ರಾಹಕ ವಿಲಿಯಂ ಡೇವಿಡ್ ಎಲ್ಲರೂ ಚಿತ್ರದ ಕುರಿತಂತೆ ಮಾತನಾಡಿದರು.

ಪ್ರೇಮ್ ಅವರ ಚಿತ್ರಗಳಲ್ಲಿ ಹಾಡುಗಳೇ ಹೈಲೈಟಾಗಿರುತ್ತೆ. ಅದೇರೀತಿ ಈ ಚಿತ್ರದಲ್ಲೂ ಹಾಡು, ಸಂಗೀತಕ್ಕೆ ಕಥೆ, ಮೇಕಿಂಗ್ ನಷ್ಟೇ ಪ್ರಾಮುಖ್ಯತೆ ನೀಡಿದ್ದಾರೆ.

    ಕೆಡಿ ಅಂದ್ರೆ ಕಾಳಿದಾಸ, 70ರ ದಶಕದಲ್ಲಿ ನಡೆಯೋ ಕಾಳಿದಾಸನ ರಾ ಲವ್ ಸ್ಟೋರಿಯನ್ನು ನಿರ್ದೇಶಕ ಪ್ರೇಮ್ ಇಲ್ಲಿ ಹೇಳಹೊರಟಿದ್ದಾರೆ. ‌ಇದರ ಮೇಕಿಂಗ್  ಬೇರೆಯದೇ ಲೆವೆಲ್‌ನಲ್ಲಿದೆ. 1970ರ ಕಾಲಮಾನವನ್ನು ತೋರಿಸೋದು ಅಷ್ಟು ಸುಲಭವಲ್ಲ, ಆಗ ಬೆಂಗಳೂರು ಹೇಗಿತ್ತು ಅಂತ  ಮೋಹನ್ ಬಿ.ಕೆರೆ ಅವರು ಅದ್ಭುತ ಸೆಟ್ ಹಾಕಿದ್ದಾರೆ. ಚಿತ್ರದಲ್ಲಿ ಒಟ್ಟು 6 ಹಾಡುಗಳಿದ್ದು. ಇನ್ನೂ 4 ಸಾಂಗ್ ರಿಲೀಸಾಗಬೇಕಿದೆ.

      ಅಂದಹಾಗೆ, 1970-75ರ ಸಮಯದಲ್ಲಿ ನಡೆದ ನೈಜಘಟನೆ ಆಧಾರಿತ ಗ್ಯಾಂಗ್‌ಸ್ಟರ್ ಕಥೆ ಈ ಚಿತ್ರಲ್ಲಿದೆ, ಚಿತ್ರಕ್ಕಾಗಿಯೇ 20 ಎಕರೆಯಷ್ಟು ವಿಶಾಲವಾದ ಜಾಗದಲ್ಲಿ ಬಹು ಕೋಟಿ ವೆಚ್ಚದಲ್ಲಿ ಅದ್ದೂರಿ ಸೆಟ್‌ಹಾಕಲಾಗಿತ್ತು. ಆರು ಕಲರ್ ಫುಲ್  ಹಾಡುಗಳಿಗೆ ಆರು ಜನ ಕೊರಿಯಾಗ್ರಾಫರ್‌ಗಳು ಕೆಲಸ ಮಾಡುತ್ತಿದ್ದಾರೆ. ವಿಕ್ರಾಂತ್ ರೋಣ ಖ್ಯಾತಿಯ ವಿಲಿಯಂ ಡೇವಿಡ್ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ  ಅಲ್ಲದೆ ನೋರಾ ಫತೇಹಿ ಸೇರಿದಂತೆ ಬಾಲಿವುಡ್‌ನ ಅನೇಕ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಕ್ರೇಜಿಸ್ಟಾರ್ ರವಿಚಂದ್ರನ್, ನಟ ರಮೇಶ್ ಅರವಿಂದ್ ಹೀಗೆ ಹೆಸರಾಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಕನ್ನಡ, ತೆಲುಗು ತಮಿಳು ಹಿಂದಿ ಹಾಗೂ ಮಲಯಾಳಂ ಸೇರಿದಂತೆ  ಬಹುಭಾಷೆಗಳಲ್ಲಿ 'ಕೆಡಿ' ಚಿತ್ರ  ಆಗಸ್ಟ್ ತಿಂಗಳಲ್ಲಿ ತೆರೆಕಾಣಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್