Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಯುವಕರ ಸೇವೆ ದೇಶಕ್ಕೆ ದೊರಕಬೇಕು"

ರಾಯಬಾಗ: ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಿ, ತಾಯ್ನಾಡಿಗೆ ಮರಳಿ ಬರುವ ದೇಶದ ಯುವಕರ ಸೇವೆ ದೇಶಕ್ಕೆ ದೊರಕಬೇಕೆಂದು ಚಿತ್ರದುರ್ಗದ ಹೊಸದುರ್ಗ ಭಗೀರಥ ಮಠದ ಪುರುಷೋತ್ತಮ ಸ್ವಾಮೀಜಿ ಹೇಳಿದರು.

ಶನಿವಾರ ಕಂಕಣವಾಡಿ ಪಟ್ಟಣದ ನಾಯಿಕವಾಡಿ ತೋಟದಲ್ಲಿ ಆಸ್ಟ್ರೇಲಿಯಾ ದೇಶದಲ್ಲಿ ಅಗ್ರಿಕಲ್ಚರಲ್ ಬಿಸಿನೆಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದು ಸ್ವಗ್ರಾಮಕ್ಕೆ ಆಗಮಿಸಿದ ಶ್ರೀರಾಜ ಅರ್ಜುನ ನಾಯಿಕವಾಡಿ ಅವರ ಸತ್ಕಾರ ಮತ್ತು ಸ್ವಾಗತ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ನಾಯಿಕವಾಡಿ ಕುಟುಂಬದ ಯುವಕರು ವಿವಿಧ ಸರ್ಕಾರಿ ಹುದ್ದೆಗಳನ್ನು ಅಲಂಕರಿಸಿ ಸೇವೆ ಸಲ್ಲಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ. ಇವರ ಕುಟುಂಬ ಮಾಡುತ್ತಿರುವ ಸಾಮಾಜಿಕ ಮತ್ತು ರಾಜಕೀಯ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದರು. ನಮ್ಮ ದೇಶದ ಯುವ ಜನಾಂಗ ವಿದೇಶದಲ್ಲಿ ಅಧ್ಯಯನ ಕೈಗೊಂಡಿದ್ದರೂ, ದೇಶದ ಸಂಸ್ಕೃತಿ, ಸಂಸ್ಕಾರ ಮರೆಯದೇ ಇರುವುದು ನಮಗೆ ಹೆಮ್ಮೆಯ ವಿಷಯ ಎಂದು ಹೇಳಿದರು.

ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಬನಹಟ್ಟಿಯ ಮಹಾಂತ ದೇವರು, ಜಂಗಟಿಹಾಳದ ಯಲ್ಲಾಲಿಂಗೇಶ್ವರ ಮಠದ ಮಾತೋಶ್ರೀ ಸಂಗಮತಾಯಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ, ಅರ್ಜುನ ನಾಯಿಕವಾಡಿ, ಧೂಳಗೌಡ ಪಾಟೀಲ, ಶ್ರೀಶೈಲ ಮಹಾಲಿಂಗೇಶ್ವರ, ನಾಗಯ್ಯ ಸ್ವಾಮಿ, ಕರೇಪ್ಪ ಪೂಜಾರಿ, ಶ್ರೀಮಂತ ಪೂಜಾರಿ, ಬಾಳಪ್ಪ ಅರಭಾವಿ, ಶಂಕರಗೌಡ ಪಾಟೀಲ, ರಾಜು ಕೊಟಗಿ, ತಮ್ಮಣ್ಣ ನಾಯಿಕವಾಡಿ, ಬಸವರಾಜ ಮಿರ್ದೆ, ಗುರುರಾಜ ನಾಯಿಕವಾಡಿ, ಲಕ್ಷ್ಮೀಕಾಂತ ಉಪ್ಪಾರ, ಸಚಿನ ನಾಯಿಕವಾಡಿ ಸೇರಿ ಅನೇಕರು ಇದ್ದರು.

ಫೋಟೊ: ೧೧ ರಾಯಬಾಗ ೫

ಫೋಟೊ ಶೀರ್ಷಿಕೆ: ರಾಯಬಾಗ: ತಾಲೂಕಿನ ಕಂಕಣವಾಡಿ ಪಟ್ಟಣದ ನಾಯಿಕವಾಡಿ ತೋಟದಲ್ಲಿ ಆಸ್ಟ್ರೇಲಿಯಾ ದೇಶದಲ್ಲಿ ಅಗ್ರಿಕಲ್ಚರಲ್ ಬಿಸಿನೆಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದು ಸ್ವಗ್ರಾಮಕ್ಕೆ ಆಗಮಿಸಿದ ಶ್ರೀರಾಜ ಅರ್ಜುನ ನಾಯಿಕವಾಡಿ ಅವರನ್ನು ಸತ್ಕರಿಸುತ್ತಿರುವ ಭಗೀರಥ ಮಠದ ಪುರುಷೋತ್ತಮ ಸ್ವಾಮೀಜಿ, ಮಹಾಂತ ಸ್ವಾಮೀಜಿ, ಭರಮಣ್ಣ ಉಪ್ಪಾರ, ಮಹಾಂತ ದೇವರು, ಸಂಗಮತಾಯಿ, ಅರ್ಜುನ ನಾಯಿಕವಾಡಿ, ಬಸವರಾಜ ಮಿರ್ದೆ, ಸಚಿನ ನಾಯಿಕವಾಡಿ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ